AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Election 2023: ದಾವಣಗೆರೆಯಲ್ಲಿ ಒಂದೇ ಕ್ಷೇತ್ರಕ್ಕೆ ದಂಪತಿ ನಾಮಪತ್ರ ಸಲ್ಲಿಕೆ

ದಾವಣಗೆರೆ ಜಿಲ್ಲೆಯ ಜಗಳೂರು ಎಸ್ಟಿ ಮೀಸಲು‌ ಕ್ಷೇತ್ರದಲ್ಲಿ ದಂಪತಿ ನಾಮಪತ್ರ ಸಲ್ಲಿಸಿದ್ದಾರೆ. ಜಗಳೂರಿನ ಎಸ್ಟಿ ಮೀಸಲು‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಎಸ್ ವಿ ರಾಮಚಂದ್ರ ಮತ್ತು ಪತ್ನಿ ಇಂದಿರಾ ಎಸ್ ಆರ್ ನಾಮಪತ್ರ ಸಲ್ಲಿಸಿದ್ದಾರೆ.

Karnataka Assembly Election 2023: ದಾವಣಗೆರೆಯಲ್ಲಿ ಒಂದೇ ಕ್ಷೇತ್ರಕ್ಕೆ ದಂಪತಿ ನಾಮಪತ್ರ ಸಲ್ಲಿಕೆ
ನಾಮಪತ್ರ ಸಲ್ಲಿಸಿದ ದಂಪತಿ
ವಿವೇಕ ಬಿರಾದಾರ
|

Updated on: Apr 18, 2023 | 10:57 AM

Share

ದಾವಣಗೆರೆ: ಚುನಾವಣೆ ಸಮಯದಲ್ಲಿ ಅನೇಕ ಅಚ್ಚರಿ ಸಂಗತಿಗಳು ನಡೆಯುತ್ತಿರುತ್ತವೆ. ಅದೇ ರೀತಿಯಾಗಿ ದಾವಣಗೆರೆ (Davangere) ಜಿಲ್ಲೆಯ ಜಗಳೂರು (Jagaluru) ಎಸ್ಟಿ ಮೀಸಲು‌ ಕ್ಷೇತ್ರದಲ್ಲಿ ದಂಪತಿ ನಾಮಪತ್ರ ಸಲ್ಲಿಸಿದ್ದಾರೆ. ಹೌದು ಜಗಳೂರಿನ ಎಸ್ಟಿ ಮೀಸಲು‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಎಸ್ ವಿ ರಾಮಚಂದ್ರ (SV Ramchandra) ಮತ್ತು ಪತ್ನಿ ಇಂದಿರಾ ಎಸ್ ಆರ್ ನಾಮಪತ್ರ ಸಲ್ಲಿಸಿದ್ದಾರೆ. ಮತ್ತು ಈ ರೀತಿಯಾಗಿ ನಾಮಪತ್ರ ಸಲ್ಲಿಸುತ್ತಿರುವುದು ಇದೇ ಮೊದಲ ಬಾರಿಗೆ ಏನಲ್ಲ, ಕಳೆದ ನಾಲ್ಕು ಚುನಾವಣೆಯಲ್ಲೂ ಕೂಡ ದಂಪತಿ ನಾಮಪತ್ರ ಸಲ್ಲಿಸಿದ್ದರು. ಕೊನೆಯ ಕ್ಷಣದಲ್ಲಿ ತಮ್ಮ ನಾಮಪತ್ರದಲ್ಲಿ ಎನಾದರೂ ಗೊಂದಲವಾದರೇ ಪತ್ನಿಯಾದರೂ ಕಣದಲ್ಲಿ ಇರುತ್ತಾರೆ ಎಂಬ ಉದ್ದೇಶದ ಶಾಸಕ ರಾಮಚಂದ್ರ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಶಾಸಕ ರಾಮಚಂದ್ರ ಅವರು ನಾಲ್ಕು ಚುನಾವಣೆಯಲ್ಲಿ 3ರಲ್ಲಿ ಗೆದ್ದಿದ್ದು,‌ ಈಗ 5ನೇ ಸಲ ‌ಕಣದಲ್ಲಿದ್ದಾರೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿ ವಿರುದ್ಧ ಪಕ್ಷೇತರ ಅಭ್ಯರ್ಥಿ ಕಣಕ್ಕೆ, ಇದು ಅವರ 234ನೇ ಚುನಾವಣೆ

ಪರಸ್ಪರ ಶಕ್ತಿ‌ ಪ್ರದರ್ಶನಕ್ಕೆ ಮುಂದಾದ ಅಕ್ಕ-ತಂಗಿ

ವಿಜಯನಗರ: ಕಾಂಗ್ರೆಸ್​ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಅಕ್ಕ-ತಂಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ಪರಸ್ಪರ ಶಕ್ತಿ‌ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಮಾಜಿ ಡಿಸಿಎಂ ದಿವಂಗತ ಎಂಪಿ‌ ಪ್ರಕಾಶ ಪುತ್ರಿಯರಾದ ಎಂಪಿ‌ ಲತಾ ಮಲ್ಲಿಕಾರ್ಜುನ ಹಾಗೂ ಎಂಪಿ ವೀಣಾ ಮಹಾಂತೇಶ ಚುನಾವಣಾ ಅಖಾಡಕ್ಕೆ ದುಮುಖಿದ್ದಾರೆ.

ಎಂಪಿ‌ ಲತಾ ಮಲ್ಲಿಕಾರ್ಜುನ ಹಾಗೂ ಎಂಪಿ ವೀಣಾ ಮಹಾಂತೇಶ ಅವರು ವಿಜಯನಗರ ಜಿಲ್ಲೆಯ‌ ಹರಪನಹಳ್ಳಿ ‌ವಿಧಾನ ಸಭಾ ಕ್ಷೇತ್ರದ‌ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಆದರೆ ಇವರಿಗೆ ಟಿಕೆಟ್​ ಕೈ ತಪ್ಪಿದ್ದು, ಎನ್ ಕೊಟ್ರೇಶ್ ಎಂಬುವರಿಗೆ ಟಿಕೆಟ್ ನೀಡಲಾಗಿದೆ. ಈ ಹಿನ್ನೆಲೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಇಳಿದಿದ್ದು, ಮೊದಲು ಎಂಪಿ ‌‌‌ಪ್ರಕಾಶ ಕಿರಿಯ‌ ಮಗಳು ಎಂಪಿ‌. ವೀಣಾ ನಂತರ ಹಿರಿಯ‌ ಮಗಳು ಎಂಪಿ‌ ಲತಾ ಮಲ್ಲಿಕಾರ್ಜುನ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ