AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಷಾರಾಮಿ ವಿಲ್ಲಾದಲ್ಲಿ ಮತದಾರರಿಗೆ ಹಂಚಲು ಇಟ್ಟಿದ್ದ ಕೋಟಿ ಕೋಟಿ ಹಣ ಪತ್ತೆ

ಮತದಾನಕ್ಕೆ ಐದು ದಿನವಷ್ಟೇ ಬಾಕಿ ಇದೆ. ಮತದಾರರ ಮನಗೆಲ್ಲೋಕೆ ಪ್ರಚಾರದ ನಡುವೆ ಝಣಝಣ ಕಾಂಚಾಣ ಸದ್ದು ಮಾಡುತ್ತಿದೆ. ಚಿನ್ನದನಾಡು ಕೋಲಾರದಲ್ಲಿ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿಯಾಗಿ ಐಷಾರಾಮಿ ವಿಲ್ಲಾ ಮೇಲೆ ದಾಳಿ ಮಾಡಿ ಕೋಟಿ ಕೋಟಿ ಹಣ ಜಪ್ತಿ ಮಾಡಿದ್ದಾರೆ.

ಐಷಾರಾಮಿ ವಿಲ್ಲಾದಲ್ಲಿ ಮತದಾರರಿಗೆ ಹಂಚಲು ಇಟ್ಟಿದ್ದ ಕೋಟಿ ಕೋಟಿ ಹಣ ಪತ್ತೆ
ಕೋಟಿ ಕೋಟಿ ಹಣ ಜಪ್ತಿ
ವಿವೇಕ ಬಿರಾದಾರ
|

Updated on: May 05, 2023 | 9:21 AM

Share

ಕೋಲಾರ: ಮತದಾನಕ್ಕೆ ಐದು ದಿನವಷ್ಟೇ ಬಾಕಿ ಇದೆ. ಮತದಾರರ ಮನಗೆಲ್ಲೋಕೆ ಪ್ರಚಾರದ ನಡುವೆ ಝಣಝಣ ಕಾಂಚಾಣ ಸದ್ದು ಮಾಡುತ್ತಿದೆ. ಈ ಹಣ ಇನ್ನೇನು ಮತದಾರರ ಕೈ ಸೇರಬೇಕು ಅನ್ನುವಾಗಲೇ ಕೋಟಿ ಕೋಟಿ ಹಣ ಜಪ್ತಿಯಾಗಿದೆ. ಚಿನ್ನದ ನಾಡಿನಲ್ಲಿ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿಯಾಗಿ ಐಷಾರಾಮಿ ವಿಲ್ಲಾ ಮೇಲೆ ದಾಳಿ ಮಾಡಿದ್ದು, ಬರೋಬ್ಬರಿ 4 ಕೋಟಿ ರೂ. ಹಣ ಜಪ್ತಿ ಮಾಡಿದ್ದಾರೆ.

ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಹಂಚಲೆಂದು ಜಿಯೋನ್ ಹಿಲ್ಸ್ ಗಾಲ್ಫ್ ರೆಸಾರ್ಟ್​​ನ ವಿಲ್ಲಾ ಸುಮಾರು 4.05 ಕೋಟಿ ರೂಪಾಯಿ ಹಣ ಇಟ್ಟಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಕೆಜಿಎಫ್ ಎಸ್ಪಿ ಧರಣಿದೇವಿ ನೇತೃತ್ವದ ತಂಡ ಕಾರ್ಯಾಚರಣೆಗೆ ಇಳಿದಿದ್ದು, ವಿಲ್ಲಾದ ರೂಮ್ ನಂಬರ್-279ನಲ್ಲಿ ಬೆಡ್​​ ಮೇಲೆ 500, 200, 2 ಸಾವಿರ ರೂ. ಮುಖಬೆಲೆಯ ಕಂತೆ ಕಂತೆ ಹಣ ಸಿಕ್ಕಿದೆ. ಬಂಗಾರಪೇಟೆ ಪಂಚಾಯಿತಿ ಹೆಸರು, ಬೂತ್​ಗಳ ಹೆಸರು ಬರೆದು ಎನ್ವಲಪ್ ಕವರ್​ಗಳಲ್ಲಿ ಹಣ ಇಟ್ಟಿದ್ದರು.

ರೂಮ್​ನಲ್ಲಿ ಒಟ್ಟು 2 ಕೋಟಿ ರೂ. ಹಣ ಪತ್ತೆಯಾಗಿದ್ದು, ಅಲ್ಲದೇ ವಿಲ್ಲಾದ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಪರಿಶೀಲನೆ ನಡೆಸಿದಾಗ ಮೂರು ಗೋಣಿ ಚೀಲಗಳಲ್ಲಿ ತುಂಬಿಸಿ ಇಟ್ಟಿದ್ದ ಒಂದೂವರೆ ಕೋಟಿ ಹಣ ಪತ್ತೆಯಾಗಿದೆ. ಒಟ್ಟಾರೆ 4.5 ಕೋಟಿ ರೂ. ಹಣವನ್ನು ಜಪ್ತಿ ಮಾಡಲಾಗಿದೆ. ಅಧಿಕಾರಿಗಳು ದಾಳಿ ಮಾಡುವ ಮುಂಚೆಯೇ ಹಣ ತಂದಿಟ್ಟವರು ಎಸ್ಕೇಪ್ ಆಗಿದ್ದಾರೆ.

ಇನ್ನು ದಾಖಲೆಗಳ ಪರಿಶೀಲನೆ ನಡೆಸಿದಾಗ ಈ ವಿಲ್ಲಾ ಬೆಂಗಳೂರು ಮೂಲದ ಪೋನಿಕಾ ಕಾಪಾಡಿಯಾ ವೈಫ್ ಆಫ್ ಕರನ್ ಕಾಪಾಡಿಯಾ ಎಂಬುವರ ಹೆಸರಿನಲ್ಲಿದೆ. ರಮೇಶ್ ಯಾದವ್ ಎಂಬವರು ಬಾಡಿಗೆ ಪಡೆದಿದ್ದಾರೆ ಎಂಬುದು ಗೊತ್ತಾಗಿದೆ. ಕಾರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಮುಖಂಡನದ್ದು ಎಂಬ ಮಾಹಿತಿ ಸಿಕ್ಕಿದ್ದು, ಪೊಲೀಸ್ರು ತನಿಖೆ ಕೈಗೊಂಡಿದ್ದಾರೆ.

ಒಟ್ಟಾರೆ ಮತದಾನದ ದಿನ ಹತ್ತಿರವಾಗ್ತಿದ್ದಂತೆ ಝಣ ಝಣ ಕಾಂಚಾಣದ ಸದ್ದು ಜೋರಾಗಿದೆ. ರಾಜಕೀಯ ಮುಖಂಡರು ಮತದಾರರನ್ನ ಬುಟ್ಟಿಗೆ ಹಾಕಿಕೊಳ್ಳೋಕೆ ಹಣದ ಮಳೆ ಸುರಿಸುತ್ತಿದ್ದಾರೆ.

– ರಾಜೇಂದ್ರಸಿಂಹ ಟಿವಿ9 ಕೋಲಾರ

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ