AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 8ರಿಂದ ಬಹಿರಂಗ ಪ್ರಚಾರಕ್ಕೆ ತೆರೆ: ಸಂಜೆ 5ರಿಂದ ಮೇ10ರ ಮಧ್ಯರಾತ್ರಿವರೆಗೆ ಮದ್ಯ ನಿಷೇಧ

ನಾಳೆ (ಮೇ.08) ಸಂಜೆಯಿಂದ ಬಹಿರಂಗ ಪ್ರಚಾರ ಮುಕ್ತಾಯವಾಗಲಿದ್ದು, ಮನೆ ಮನೆ ಪ್ರಚಾರಕ್ಕೆ ಅವಕಾಶವಿರುತ್ತದೆ. ಈ ಹಿನ್ನೆಲೆ ನಾಳೆ ಸಂಜೆ 5ರಿಂದ ಮೇ 10ರ ಮಧ್ಯರಾತ್ರಿವರೆಗೆ ಮದ್ಯ ನಿಷೇಧಿಸಲಾಗಿದೆ.

ಮೇ 8ರಿಂದ ಬಹಿರಂಗ ಪ್ರಚಾರಕ್ಕೆ ತೆರೆ: ಸಂಜೆ 5ರಿಂದ ಮೇ10ರ ಮಧ್ಯರಾತ್ರಿವರೆಗೆ ಮದ್ಯ ನಿಷೇಧ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:May 08, 2023 | 6:43 AM

Share

ಬೆಂಗಳೂರು: ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election) ತೀವ್ರ ಜಿದ್ದಾಜಿದ್ದಿಯಿಂದ ಕೂಡಿದೆ. ಮತದಾನಕ್ಕೆ 3 ದಿನ ಮಾತ್ರ ಬಾಕಿ ಉಳಿದಿದೆ. ಮೇ 10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ಆರಂಭವಾಗುತ್ತದೆ. ಈ ಸಂಬಂಧ ರಾಜಕೀಯ ಪಕ್ಷಗಳು (Political Parties) ಅಬ್ಬರದ ಪ್ರಚಾರ ನಡೆಸಿವೆ. ಆದರೆ ನಾಳೆ (ಮೇ.08) ಸಂಜೆಯಿಂದ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಆದರೆ ಮನೆ ಮನೆ ಪ್ರಚಾರಕ್ಕೆ ಅವಕಾಶವಿರುತ್ತದೆ. ಈ ಹಿನ್ನೆಲೆ ಸೋಮವಾರ ಸಂಜೆ 5ರಿಂದ ಮೇ 10ರ ಮಧ್ಯರಾತ್ರಿವರೆಗೆ ಮದ್ಯ ನಿಷೇಧಿಸಲಾಗಿದೆ. ಮತ ಎಣಿಕೆ ದಿನ ಬೆಳ್ಳಗೆ 6 ರಿಂದ ಮಧ್ಯರಾತ್ರಿ 12 ರವರೆಗೂ ಮದ್ಯ ಸಿಗುವುದಿಲ್ಲ.

ಈ ಬಳಿಕ ಶೂನ್ಯ ಅವಧಿ ಎಂದು ಚುನಾವಣಾ ಆಯೋಗವು ಪರಿಗಣಿಸುತ್ತದೆ. ಈ ಅವಧಿಯಲ್ಲಿ ಅಭ್ಯರ್ಥಿಗಳನ್ನು ಹೊರತುಪಡಿಸಿ ಇನ್ನುಳಿದ ಯಾವುದೇ ವ್ಯಕ್ತಿಗಳು ಕ್ಷೇತ್ರದಲ್ಲಿ ಉಳಿಯುವಂತಿಲ್ಲ. ಅಬ್ಬರದ ಪ್ರಚಾರಗಳೆಲ್ಲವು ಸಂಜೆ 6 ಗಂಟೆಗೆ ಮುಗಿಯಬೇಕು. ಮಂಗಳವಾರ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ಕೈಗೊಂಡು ಅಂದು ಸಂಜೆ 6 ಗಂಟೆ ಒಳಗೆ ಮುಗಿಸಬೇಕು. ಮತದಾನ ಮುಕ್ತಾಯವಾಗುವ 48 ಗಂಟೆಗಳ ಮುಂಚೆ ಬಹಿರಂಗ ಚುನಾವಣಾ ಪ್ರಚಾರ ಅಂತ್ಯವಾಗುತ್ತದೆ.

ಇದನ್ನೂ ಓದಿ: KSRTC: ಕರ್ನಾಟಕ ಚುನಾವಣೆ, ಮೇ 9 ಮತ್ತು 10 ರಂದು ಕೆಎಸ್​ಆರ್​ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ

ಬಹಿರಂಗ ಪ್ರಚಾರ ಮುಗಿಸಿದ ಬಳಿಕ ಸ್ಟಾರ್​ ಪ್ರಚರಕರು, ಮುಖಂಡರು ಕ್ಷೇತ್ರ ತೊರೆಯಬೇಕು. ಕ್ಷೇತ್ರದಲ್ಲಿ ಸಂಬಂಧಪಡದ ವ್ಯಕ್ತಿಗಳು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಂಜೆಯ ಬಳಿಕ ಧ್ವನಿವರ್ಧಕಗಳನ್ನು ಬಳಕೆ ಮಾಡುವಂತಿಲ್ಲ ಎಂದು ತಿಳಿಸಲಾಗಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:07 pm, Sun, 7 May 23

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ