AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 8ರಿಂದ ಬಹಿರಂಗ ಪ್ರಚಾರಕ್ಕೆ ತೆರೆ: ಸಂಜೆ 5ರಿಂದ ಮೇ10ರ ಮಧ್ಯರಾತ್ರಿವರೆಗೆ ಮದ್ಯ ನಿಷೇಧ

ನಾಳೆ (ಮೇ.08) ಸಂಜೆಯಿಂದ ಬಹಿರಂಗ ಪ್ರಚಾರ ಮುಕ್ತಾಯವಾಗಲಿದ್ದು, ಮನೆ ಮನೆ ಪ್ರಚಾರಕ್ಕೆ ಅವಕಾಶವಿರುತ್ತದೆ. ಈ ಹಿನ್ನೆಲೆ ನಾಳೆ ಸಂಜೆ 5ರಿಂದ ಮೇ 10ರ ಮಧ್ಯರಾತ್ರಿವರೆಗೆ ಮದ್ಯ ನಿಷೇಧಿಸಲಾಗಿದೆ.

ಮೇ 8ರಿಂದ ಬಹಿರಂಗ ಪ್ರಚಾರಕ್ಕೆ ತೆರೆ: ಸಂಜೆ 5ರಿಂದ ಮೇ10ರ ಮಧ್ಯರಾತ್ರಿವರೆಗೆ ಮದ್ಯ ನಿಷೇಧ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:May 08, 2023 | 6:43 AM

Share

ಬೆಂಗಳೂರು: ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election) ತೀವ್ರ ಜಿದ್ದಾಜಿದ್ದಿಯಿಂದ ಕೂಡಿದೆ. ಮತದಾನಕ್ಕೆ 3 ದಿನ ಮಾತ್ರ ಬಾಕಿ ಉಳಿದಿದೆ. ಮೇ 10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ಆರಂಭವಾಗುತ್ತದೆ. ಈ ಸಂಬಂಧ ರಾಜಕೀಯ ಪಕ್ಷಗಳು (Political Parties) ಅಬ್ಬರದ ಪ್ರಚಾರ ನಡೆಸಿವೆ. ಆದರೆ ನಾಳೆ (ಮೇ.08) ಸಂಜೆಯಿಂದ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಆದರೆ ಮನೆ ಮನೆ ಪ್ರಚಾರಕ್ಕೆ ಅವಕಾಶವಿರುತ್ತದೆ. ಈ ಹಿನ್ನೆಲೆ ಸೋಮವಾರ ಸಂಜೆ 5ರಿಂದ ಮೇ 10ರ ಮಧ್ಯರಾತ್ರಿವರೆಗೆ ಮದ್ಯ ನಿಷೇಧಿಸಲಾಗಿದೆ. ಮತ ಎಣಿಕೆ ದಿನ ಬೆಳ್ಳಗೆ 6 ರಿಂದ ಮಧ್ಯರಾತ್ರಿ 12 ರವರೆಗೂ ಮದ್ಯ ಸಿಗುವುದಿಲ್ಲ.

ಈ ಬಳಿಕ ಶೂನ್ಯ ಅವಧಿ ಎಂದು ಚುನಾವಣಾ ಆಯೋಗವು ಪರಿಗಣಿಸುತ್ತದೆ. ಈ ಅವಧಿಯಲ್ಲಿ ಅಭ್ಯರ್ಥಿಗಳನ್ನು ಹೊರತುಪಡಿಸಿ ಇನ್ನುಳಿದ ಯಾವುದೇ ವ್ಯಕ್ತಿಗಳು ಕ್ಷೇತ್ರದಲ್ಲಿ ಉಳಿಯುವಂತಿಲ್ಲ. ಅಬ್ಬರದ ಪ್ರಚಾರಗಳೆಲ್ಲವು ಸಂಜೆ 6 ಗಂಟೆಗೆ ಮುಗಿಯಬೇಕು. ಮಂಗಳವಾರ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ಕೈಗೊಂಡು ಅಂದು ಸಂಜೆ 6 ಗಂಟೆ ಒಳಗೆ ಮುಗಿಸಬೇಕು. ಮತದಾನ ಮುಕ್ತಾಯವಾಗುವ 48 ಗಂಟೆಗಳ ಮುಂಚೆ ಬಹಿರಂಗ ಚುನಾವಣಾ ಪ್ರಚಾರ ಅಂತ್ಯವಾಗುತ್ತದೆ.

ಇದನ್ನೂ ಓದಿ: KSRTC: ಕರ್ನಾಟಕ ಚುನಾವಣೆ, ಮೇ 9 ಮತ್ತು 10 ರಂದು ಕೆಎಸ್​ಆರ್​ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ

ಬಹಿರಂಗ ಪ್ರಚಾರ ಮುಗಿಸಿದ ಬಳಿಕ ಸ್ಟಾರ್​ ಪ್ರಚರಕರು, ಮುಖಂಡರು ಕ್ಷೇತ್ರ ತೊರೆಯಬೇಕು. ಕ್ಷೇತ್ರದಲ್ಲಿ ಸಂಬಂಧಪಡದ ವ್ಯಕ್ತಿಗಳು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಂಜೆಯ ಬಳಿಕ ಧ್ವನಿವರ್ಧಕಗಳನ್ನು ಬಳಕೆ ಮಾಡುವಂತಿಲ್ಲ ಎಂದು ತಿಳಿಸಲಾಗಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:07 pm, Sun, 7 May 23

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?