ಮತದಾನ ಮಾಡಿದವರಿಗೆ ಈ ಎರಡು ಹೊಟೇಲ್​​ಗಳಲ್ಲಿ ಉಪಹಾರ ಉಚಿತ: ಬಿಬಿಎಂಪಿ ಗರಂ

ಮತದಾನ ಮಾಡಿದ ಗ್ರಾಹಕರಿಗೆ ಬೆಳಗಿನ ಉಪಹಾರವನ್ನು ಉಚಿತವಾಗಿ ನೀಡಲು ನಗರದ ಎರಡು ಪ್ರತಿಷ್ಠಿತ ಹೋಟೆಲ್​ಗಳು ನಿರ್ಧರಿಸಿವೆ. ಆದರೆ ಇದು ಬಿಬಿಎಂಪಿ ಕೆಂಗಣ್ಣಿಗೆ ಗುರಿಯಾಗಿದೆ.

ಮತದಾನ ಮಾಡಿದವರಿಗೆ ಈ ಎರಡು ಹೊಟೇಲ್​​ಗಳಲ್ಲಿ ಉಪಹಾರ ಉಚಿತ: ಬಿಬಿಎಂಪಿ ಗರಂ
ಸಾಂದರ್ಭಿಕ ಚಿತ್ರ
Follow us
|

Updated on:May 09, 2023 | 3:09 PM

ಬೆಂಗಳೂರು: ಕರ್ನಾಟಕ ವಿಧಾಸನಭೆ ಚುನಾವಣೆಯ (Karnataka Assembly Election 2023) ಮತದಾನ (Voting) ನಾಳೆ (ಮೇ.10) ರಂದು ನಡೆಯಲಿದ್ದು, ಈ ಸಂಬಂಧ ಚುನಾವಣಾ ಆಯೋಗ (Election Commission) ಅನೇಕ ಸಿದ್ದತೆಗಳನ್ನು ಮಾಡಿಕೊಂಡಿದೆ. ಮತದಾನ ಮಾಡಿದ ಗ್ರಾಹಕರಿಗೆ ಬೆಳಗಿನ ಉಪಹಾರವನ್ನು ಉಚಿತವಾಗಿ ನೀಡಲು ನಗರದ ಎರಡು ಪ್ರತಿಷ್ಠಿತ ಹೋಟೆಲ್​ಗಳು ನಿರ್ಧರಿಸಿವೆ. ಆದರೆ ಇದು  ಬಿಬಿಎಂಪಿಯ ಕೆಂಗಣ್ಣಿಗೆ ಗುರಿಯಾಗಿದೆ. ಉಚಿತ ಆಹಾರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹರಿದಾಡುತ್ತಿದೆ. ಈ ಬಗ್ಗೆ ಬಿಬಿಎಂಪಿ (BBMP) ಮುಖ್ಯ ಆಯುಕ್ತ ತುಷಾರ್​ ಗಿರಿನಾಥ್​ ಮಾತನಾಡಿ​ ಇದಕ್ಕೆ ನಾವು ಅನುಮತಿ ನೀಡುವುದಿಲ್ಲ. ಇಂತಹ ಆಫರ್​​ಗಳನ್ನು ಹೋಟೆಲ್​​ ಮಾಲಿಕರು ನೀಡಬಾರದು ಎಂದು ಸೂಚನೆ ನೀಡಿದ್ದಾರೆ.

ಈ ಕುರಿತು ಸುತ್ತೋಲೆ ಹೊರಡಿಸಿದ ಚುನಾವಣಾ ಆಯೋಗ “ಈಗಾಗಲೇ ಕೆಲವು ಪತ್ರಕೆಗಳಲ್ಲಿ ಕೆಲವೊಂದು ಹೋಟೆಲ್​​ಗಳ ಮುಂಭಾಗದಲ್ಲಿ 10/05/2023 ರಂದು ಮತದಾನ ಮಾಡಿ ಬರುವ ಮತದಾರರು ಗುರುತು ತೋರಿಸಿದಲ್ಲಿ ಉಚಿತವಾಗಿ ಅಥವಾ ರಿಯಾಯಿತಿ ದರದಲ್ಲಿ ತಿಂಡಿ, ಪಾನಿಯ ಹಾಗೂ ಊಟದ ವ್ಯವಸ್ಥೆ ಕಲ್ಪಿಸುವುದಾಗಿ ಬೋರ್ಡ್​​​ಗಳನ್ನು ಅಳವಡಿಸಿರುವುದು ಕಂಡುಬಂದಿದ್ದು, ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಈ ರೀತಿಯ ಪ್ರಕಟಣೆಗಳಿಗೆ ಸಂಬಂಧಿಸಿದ ಹೋಟೆಲ್​​ ಮಾಲೀಕರನ್ನೇ ನೇರ ಹೊಣೆಗಾರರನ್ನಾಗಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದೆ.

ಈ ಬಗ್ಗೆ ನಗರದ ಎರಡು ಪ್ರತಿಷ್ಠಿತ ರೆಸ್ಟೋರೆಂಟ್‌ಗಳಾದ ನಿಸರ್ಗ ಗ್ರ್ಯಾಂಡ್ ಮತ್ತು ಚಾಲುಕ್ಯ ಸಾಮ್ರಾಟ್ ಮಾಲೀಕರು ಮಾತನಾಡಿ ಈ ಆಫರ್​​ ರಾಜಕೀಯ ಹೊರತಾಗಿದೆ. 2018 ರಲ್ಲಿ, ಬೆಂಗಳೂರಿನಲ್ಲಿ ಶೇ 54.7 ರಷ್ಟು ನೀರಸ ಮತದಾನವಾಗಿತ್ತು. ಹೀಗಾಗಿ ಮತದಾನವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ರೀತಿ ನಾವು ಆಫರ್​ ನೀಡಿದ್ದೇವೆ ಎಂದು ಹೇಳಿದ್ದಾರೆ.

ನೃಪತುಂಗ ರಸ್ತೆಯಲ್ಲಿರುವ ನಿಸರ್ಗ ಗ್ರ್ಯಾಂಡ್ ಹೋಟೆಲ್, ಮತದಾನ ಮಾಡಿದವರಿಗೆ ಉಚಿತವಾಗಿ ಬೆಣ್ಣೆ ದೋಸೆ, ಮೈಸೂರು ಪಾಕ್ ಮತ್ತು ತಂಪು ಪಾನೀಯಗಳನ್ನು ನೀಡುವುದಾಗಿ ನಿರ್ಧರಿಸಿದೆ. ಈ ಸಂಬಂಧ ನಾವು ಅನುಮತಿ ಪಡೆದಿದ್ದೇವೆ. 2018 ಮತ್ತು 2019 ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳ ಸಮಯದಲ್ಲೂ ಕೂಡಾ ನಾವು ಈ ಆಫರ್​​ ನೀಡಿದ್ದೇವೆ. 2018 ರಲ್ಲಿ ಸುಮಾರು 3,900 ಮತದಾರರ-ಗ್ರಾಹಕರು ನಮ್ಮ ಕೊಡುಗೆಯನ್ನು ಪಡೆದುಕೊಂಡಿದ್ದಾರೆ. 2019 ರಲ್ಲಿ ಈ ಸಂಖ್ಯೆ 5,100 ಕ್ಕೆ ಏರಿದೆ. ನಾವು ಈ ಬಾರಿಯು ಆಫರ್​​ ನೀಡಲು ನಿರ್ಧರಿಸಿದ್ದೇವೆ ಎಂದು ಹೋಟೆಲ್‌ ಮಾಲೀಕ ಕೃಷ್ಣ ರಾಜ್ ಹೇಳಿದರು.

ಇದನ್ನೂ ಓದಿ: ಅಭ್ಯರ್ಥಿಗಳ ಸೋಲು ಗೆಲುವಿನ ಮೇಲೆ ಬೆಟ್ಟಿಂಗ್ ಕಟ್ಟುವವರೇ ಹುಷಾರ್

ಚರ್ಚ್ ಸ್ಟ್ರೀಟ್‌ನಲ್ಲಿರುವ ಚಾಲುಕ್ಯ ಸಾಮ್ರಾಟ್ ಕೆಫೆಯು ಮತದಾರರಿಗೆ ಬೆಳಿಗ್ಗೆ 7:30 ರಿಂದ 11:30 ರವರೆಗೆ ಉಚಿತ ಉಪಹಾರವನ್ನು ನೀಡಲು ನಿರ್ಧರಿಸಿದೆ.

ಇದರೊಂದಿಗೆ 100 ಹೊಸ ಮತದಾರರಿಗೆ ಉಚಿತವಾಗಿ ಸಿನಿಮಾ ಟಿಕೆಟ್ ನೀಡಲು ಹೋರ್ಡಿಂಗ್ ರೆಸ್ಟೋರೆಂಟ್ ನಿರ್ಧರಿಸಿದೆ. ಮೊದಲ 100 ಯುವ ಮತದಾರರಿಗೆ ಉಚಿತವಾಗಿ ಕನ್ನಡ ಚಲನಚಿತ್ರ ಟಿಕೆಟ್ ನೀಡಲಾಗುವುದು. ಸಿನಿಮಾ ಇನ್ನೂ ನಿರ್ಧಾರವಾಗಿಲ್ಲ. ಈ ಬಗ್ಗೆ ಕನ್ನಡ ಫಿಲಂ ಚೇಂಬರ್ ಜೊತೆ ಚರ್ಚೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:56 am, Tue, 9 May 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ