AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖರ ಫಲಿತಾಂಶ ನುಡಿದವರಿಗೆ 10 ಲಕ್ಷ ರೂ. ಬಹುಮಾನ, ಜ್ಯೋತಿಷಿಗಳಿಗೆ ಫಲಿತಾಂಶದ ಸವಾಲ್

224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಮುಗಿದಿದ್ದು, ನಾಳೆ (ಮೇ.13) ರಂದು ಮತ ಎಣಿಕೆ ಆರಂಭವಾಗಲಿದೆ. ಇದಕ್ಕೂ ಮುನ್ನ ಯಾವ ಜ್ಯೋತಿಷಿಗಳಿಗೆ ನಿಖರವಾದ ಫಲಿತಾಂಶ ಹೇಳುತ್ತಾರೆ ಅವರಿಗೆ ಮಂಗಳೂರಿಗೆ ವಿಚಾರವಾದಿಯೊಬ್ಬರು ಬಂಪರ್​ ಆಫರ್​​ ನೀಡಿದ್ದಾರೆ.

ವಿವೇಕ ಬಿರಾದಾರ
|

Updated on:May 12, 2023 | 1:02 PM

Share

ಮಂಗಳೂರು: 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಮುಗಿದಿದ್ದು, ನಾಳೆ (ಮೇ.13) ರಂದು ಮತ ಎಣಿಕೆ ಆರಂಭವಾಗಲಿದೆ. ನಾಳೆ ಈ ಹೊತ್ತಿಗಾಗಲೇ ಒಂದು ಹಂತಕ್ಕೆ ಫಲಿತಾಂಶ ಪ್ರಕಟವಾಗಿರುತ್ತದೆ. ಈ ಹಿನ್ನೆಲೆ ಬಿಜೆಪಿ, ಕಾಂಗ್ರೆಸ್​ ಮತ್ತು ಜೆಡಿಎಸ್​​ ಪಕ್ಷಗಳು ಫಲಿತಾಂಶಕ್ಕಾಗಿ ತುದಿಗಾಲಿನಲ್ಲಿ ನಿಂತಿದ್ದು, ಸರ್ಕಾರ ರಚನೆಗಾಗಿ ಈಗಾಗಲೇ ಸಕಲ ಸಿದ್ದತೆಗಳನ್ನು ಮಾಡಿಕೊಂಡಿವೆ. ಈಗಾಗಲೇ ಸಮಾಜಿಕ ಜಾಲತಾಣಗಳಲ್ಲಿ ಜ್ಯೋತಿಷಿಗಳು ಯಾವ ಪಕ್ಷ ಪೂರ್ಣ ಬಹುಮತ ಪಡೆಯುತ್ತೆ ಎಂದು ಭವಿಷ್ಯ ಹೇಳುತ್ತಿದ್ದಾರೆ. ಇದನ್ನು ಕಂಡ ವಿಚಾರವಾದಿಯೊಬ್ಬರು ಜ್ಯೋತಿಷಿಗಳಿಗೆ ಬಂಪರ್​ ಆಫರ್​ ನೀಡಿದ್ದಾರೆ.

ಮಂಗಳೂರಿನ ವಿಚಾರವಾದಿ ಫ್ರೊ.ನರೇಂದ್ರ ನಾಯಕ್ ಯಾವ ಜ್ಯೋತಿಷಿ ನಿಖರವಾದ ಫಲಿತಾಂಶ ನುಡಿಯುತ್ತಾರೆ ಅವರಿಗೆ 10 ಲಕ್ಷ ರೂ. ಬಹುಮಾನ ನೀಡಲು ನಿರ್ಧರಿಸಿದ್ದಾರೆ. ಈಗಾಗಲೇ 20ಕ್ಕೂ ಹೆಚ್ಚು ಜ್ಯೋತಿಷಿಗಳು ಅಂಚೆ ಮೂಲಕ ಫಲಿತಾಂಶದ ಉತ್ತರ ಬರೆದು ಕಳುಹಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ನಲ್ಲಿ ಗರಿಗೆದರಿದ ‘ತಂತ್ರಗಾರಿಕೆ’:ಫಲಿತಾಂಶಕ್ಕೂ ಮುನ್ನವೇ ಪಕ್ಷೇತರರಿಗೆ ಜಗದೀಶ್ ಶೆಟ್ಟರ್ ಮೂಲಕ ಗಾಳ

ಈ ಬಗ್ಗೆ ಟಿವಿ9 ಪ್ರತಿನಿಧಿಯೊಂದಿಗೆ ಮಾತನಾಡಿದ ಫ್ರೊ.ನರೇಂದ್ರ ನಾಯಕ್ ಈ ಚುನಾವಣೆಗೆ ಸಂಬಂಧಿಸಿದಂತೆ 20 ಪ್ರಶ್ನೆಗಳನ್ನು ಕೇಳಿದ್ದೇನೆ. ಯಾವ ಪಕ್ಷಕ್ಕೆ ‌ಎಷ್ಟು ಸೀಟು ಬರುತ್ತೆ ಎಂದು ಹೇಳಬೇಕು. ಕೆಲವು ಅಭ್ಯರ್ಥಿಗಳ ಪಡೆಯುವ ಮತಗಳನ್ನೂ ಸರಿಯಾಗಿ ಹೇಳಬೇಕು. ಜ್ಯೋತಿಷಿಗಳಿಗೆ ಈ ಪಂಥದಲ್ಲಿ ಮೊದಲ ಪ್ರಾಶಸ್ತ್ಯ ನೀಡುತ್ತೇನೆ. 20 ರಲ್ಲಿ 19 ಪ್ರಶ್ನೆಗಳಿಗೆ ನಿಖರ ಉತ್ತರ ನೀಡಿದರೂ 10 ಲಕ್ಷ ರೂ. ಬಹುಮಾನ ನೀಡುತ್ತೇನೆ ಎಂದು ಹೇಳಿದ್ದಾರೆ.

ಜ್ಯೋತಿಷಿಗಳು ಮದುವೆ ಸೇರಿದಂತೆ ಇತರ ಬಗ್ಗೆ ಭವಿಷ್ಯ ಹೇಳುತ್ತಾರೆ. ಈ ಚುನಾವಣೆ ಬಗ್ಗೆ ನಿಖರ ಫಲಿತಾಂಶ ಹೇಳಲಿ ಎಂದು ಸವಾಲ್​ ಹಾಕಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:48 pm, Fri, 12 May 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ