AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹಿರಂಗ ಪ್ರಚಾರಕ್ಕೆ ಇಂದು ಅಂತ್ಯ: ಮನೆ ಮನೆಗೆ ತೆರಳಿ ಮತಯಾಚನೆ, ಮದ್ಯ ಮಾರಾಟ ನಿಷೇಧ

ಇಂದು (ಮೇ.08) ಸಂಜೆ 6 ಗಂಟೆಯಿಂದ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಈ ಸಂಬಂಧ ಸಂಜೆ 5ರ ಬಳಿಕ ಸಭೆ, ಸಮಾರಂಭ, ಉತ್ಸವ, ರ‍್ಯಾಲಿ ಮತ್ತು ಧ್ವನಿ ವರ್ಧಕಗಳ ಬಳಕೆಗೆ ನಿರ್ಬಂಧ ಹೇರಲಾಗಿದೆ.

ಬಹಿರಂಗ ಪ್ರಚಾರಕ್ಕೆ ಇಂದು ಅಂತ್ಯ: ಮನೆ ಮನೆಗೆ ತೆರಳಿ ಮತಯಾಚನೆ, ಮದ್ಯ ಮಾರಾಟ ನಿಷೇಧ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:May 08, 2023 | 7:40 AM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಅಖಾಡ ರಂಗೇರಿದೆ. ಎಲ್ಲಾ ಪಕ್ಷಗಳ ಘಟಾನುಘಟಿ ನಾಯಕರು ಅಬ್ಬರದ ಪ್ರಚಾರ (Campaign) ನಡೆಸುತ್ತಿದ್ದಾರೆ. ರಾಜ್ಯದ ಹಲವು ಭಾಗಗಳಲ್ಲಿ ಸಮಾವೇಶ, ರೋಡ್​ ಶೋ ನಡೆಸಿದರು. ಇಂದು (ಮೇ.08) ಸಂಜೆ 6 ಗಂಟೆಯಿಂದ ಬಹಿರಂಗ ಪ್ರಚಾರಕ್ಕೆ (Open Campaign) ತೆರೆ ಬೀಳಲಿದೆ. ಈ ಸಂಬಂಧ ಸಂಜೆ 5ರ ಬಳಿಕ ಸಭೆ, ಸಮಾರಂಭ, ಉತ್ಸವ, ರ‍್ಯಾಲಿ ಮತ್ತು ಧ್ವನಿ ವರ್ಧಕಗಳ ಬಳಕೆಗೆ ನಿರ್ಬಂಧ ಹೇರಲಾಗಿದೆ. ಅಲ್ಲದೇ ಕ್ಷೇತ್ರದಲ್ಲಿ ಅಭ್ಯರ್ಥಿ ಹೊರತುಪಡಿಸಿ ಬೇರೆ ನಾಯಕರು ಬರುವಂತಿಲ್ಲ. ಆದರೆ ಮನೆ ಮನೆಗೆ ತೆರಳಿ ಅಭ್ಯರ್ಥಿ ಸೇರಿ 6 ಜನರು ಮಾತ್ರ ಪ್ರಚಾರ ಮಾಡಲು ಅವಕಾಶವಿದೆ.

ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್

ಇಂದು ಸಂಜೆ 6 ಗಂಟೆಯಿಂದ ಇನ್ನು ಮೂರು ದಿನ ರಾಜ್ಯದಲ್ಲಿ ಮದ್ಯ ಸಿಗುವುದಿಲ್ಲ. ಇಂದು ಸಂಜೆ 6 ಗಂಟೆಯಿಂದ ಮೇ 11 ರ ಬೆಳಗ್ಗೆ 6 ಗಂಟೆಯವರೆಗೂ ಮದ್ಯ ಮಾರಟಕ್ಕೆ ನಿರ್ಬಂಧ ಹೇರಲಾಗಿದೆ. ಮೇ 8 , 9 , 10 ರಂದು ಡ್ರೈ ಡೇ ಆಚಾರಿಸುವಂತೆ ಮದ್ಯ ಮಾರಾಟದ ಅಂಗಡಿ ಮಾಲೀಕರಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಅಲ್ಲದೇ ಮತ ಎಣಿಕೆಗೂ ಸಮಸ್ಯೆಯಾಗದಂತೆ ಮೇ 13 ರ ಬೆಳಗ್ಗೆ 6 ಗಂಟೆಯಿಂದ ಮೇ.14 ರ ಬೆಳ್ಳಗ್ಗೆ 6 ಗಂಟೆವರೆಗೂ ಮದ್ಯ ನಿರ್ಬಂಧಿಸಲಾಗಿದೆ. ಇದರಿಂದ ಇಂದು ಮದ್ಯದಂಗಡಿಗಳಲ್ಲಿ ಭರ್ಜರಿ ವ್ಯಾಪಾರ ವಹಿವಾಟು ನಡೆಯುವ ಸಾಧ್ಯತೆ ಇದೆ. ಹೀಗಾಗಿ ಮದ್ಯದ ಬೆಲೆಯು ದುಪ್ಪಟ್ಟಾಗಿದ್ದು, ಬೀಯರ್ ಬೆಲೆಯು ಶೇ 15 ರಿಂದ ಶೇ 20 ರಷ್ಟು ಏರಿಕೆಯಾಗಿದೆ.

ಇದನ್ನೂ ಓದಿ: ಮೇ 9,10 ರಂದು ಮಾಧ್ಯಮಗಳಲ್ಲಿ ಚುನಾವಣಾ ವಿಷಯ ಪ್ರಸಾರಕ್ಕೆ ತಡೆ: ಆಯೋಗ ಆದೇಶ

ಬಹಿರಂಗ ಪ್ರಚಾರ ಮುಗಿದ ಬಳಿಕ ಶೂನ್ಯ ಅವಧಿ ಎಂದು ಚುನಾವಣಾ ಆಯೋಗವು ಪರಿಗಣಿಸುತ್ತದೆ. ಈ ಅವಧಿಯಲ್ಲಿ ಅಭ್ಯರ್ಥಿಗಳನ್ನು ಹೊರತುಪಡಿಸಿ ಇನ್ನುಳಿದ ಯಾವುದೇ ವ್ಯಕ್ತಿಗಳು ಕ್ಷೇತ್ರದಲ್ಲಿ ಉಳಿಯುವಂತಿಲ್ಲ. ಅಬ್ಬರದ ಪ್ರಚಾರಗಳೆಲ್ಲವು ಸಂಜೆ 6 ಗಂಟೆಗೆ ಮುಗಿಯಬೇಕು. ಮಂಗಳವಾರ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ಕೈಗೊಂಡು ಅಂದು ಸಂಜೆ 6 ಗಂಟೆ ಒಳಗೆ ಮುಗಿಸಬೇಕು. ಮತದಾನ ಮುಕ್ತಾಯವಾಗುವ 48 ಗಂಟೆಗಳ ಮುಂಚೆ ಬಹಿರಂಗ ಚುನಾವಣಾ ಪ್ರಚಾರ ಅಂತ್ಯವಾಗುತ್ತದೆ.

ಬಹಿರಂಗ ಪ್ರಚಾರ ಮುಗಿಸಿದ ಬಳಿಕ ಸ್ಟಾರ್​ ಪ್ರಚರಕರು, ಮುಖಂಡರು ಕ್ಷೇತ್ರ ತೊರೆಯಬೇಕು. ಕ್ಷೇತ್ರದಲ್ಲಿ ಸಂಬಂಧಪಡದ ವ್ಯಕ್ತಿಗಳು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಂಜೆಯ ಬಳಿಕ ಧ್ವನಿವರ್ಧಕಗಳನ್ನು ಬಳಕೆ ಮಾಡುವಂತಿಲ್ಲ ಎಂದು ತಿಳಿಸಲಾಗಿದೆ.

ಮತಾದನಾಕ್ಕೆ 2 ದಿನ ಬಾಕಿ ಉಳಿದಿದೆ. ಮೇ.10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ನಡೆಯಲಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:39 am, Mon, 8 May 23

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?