ವರುಣಾ ಚುನಾವಣಾ ಅಖಾಡಕ್ಕಿಳಿದ ಬಿವೈ ವಿಜಯೇಂದ್ರ, ಬಿಲ್​ ಸಂತೋಷ್​​: ವರುಣಾದತ್ತ ದೌಡಾಯಿಸಲಿದ್ದಾರೆ ಸಿದ್ದರಾಮಯ್ಯ

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನಾಳೆ (ಏ.22) ರಂದು ತವರು ಕ್ಷೇತ್ರ ವರುಣಾಗೆ ಆಗಮಿಸಲಿದ್ದು, ಬೆಳಿಗ್ಗೆಯಿಂದ ರಾತ್ರಿವರೆಗು ಮತಯಾಚನೆ ಮಾಡಲಿದ್ದಾರೆ.

ವರುಣಾ ಚುನಾವಣಾ ಅಖಾಡಕ್ಕಿಳಿದ ಬಿವೈ ವಿಜಯೇಂದ್ರ, ಬಿಲ್​ ಸಂತೋಷ್​​: ವರುಣಾದತ್ತ ದೌಡಾಯಿಸಲಿದ್ದಾರೆ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
Follow us
|

Updated on: Apr 21, 2023 | 3:41 PM

ಮೈಸೂರು: ರಾಜ್ಯ ರಾಜಕಾರಣದಲ್ಲಿ (Karnataka Politics) ಅತಿ ಹೆಚ್ಚು ಚರ್ಚೆಗೆ ಬರುತ್ತಿರುವುದು ವರುಣಾ (Varuna) ಮತ್ತು ಕನಕಪುರ (Kanakpur) ವಿಧಾನಸಭಾ ಕ್ಷೇತ್ರದ ರಾಜಕೀಯ ವಿಚಾರ. ವರುಣಾದಲ್ಲಿ ವಿಪಕ್ಷನಾಯಕ ಸಿದ್ದರಾಮಯ್ಯ (Siddaramaiah) ವಿರುದ್ಧ ಬಿಜೆಪಿ (BJP) ನಿರೀಕ್ಷೆಯಂತೆ ವಿ ಸೋಮಣ್ಣ (V Somanna) ಅವರನ್ನು ಕಣಕ್ಕೆ ಇಳಿಸಿದೆ. ವಿ ಸೋಮಣ್ಣ ಅವರನ್ನು ಕಣಕ್ಕೆ ಇಳಿಸಲು ಕಾರಣವೂ ಇದೆ. ವಿ ಸೋಮಣ್ಣ ಅವರು ಲಿಂಗಾಯತ ನಾಯಕರಾಗಿದ್ದು, ವರುಣಾ ಕ್ಷೇತ್ರದಲ್ಲಿ ಲಿಂಗಾಯತ ಮತಗಳು ಹೆಚ್ಚಿವೆ. ಹಾಗೇ ಸೋಮಣ್ಣ ಅವರು ಹಿಂದೊಮ್ಮೆ ಮೈಸೂರು ಜಿಲ್ಲಾ ಉಸ್ತುವಾರಿಯಾಗಿದ್ದರು. ಇದು ಕೂಡ ವರ್ಕೌಂಟ್​ ಆಗಲಿದೆ ಎಂಬುವುದು ಬಿಜೆಪಿಯ ಲೆಕ್ಕಾಚಾರ. ಈಗ ಸೋಮಣ್ಣ ವರುಣಾದಲ್ಲಿ ಅಬ್ಬರದ ಪ್ರಚಾರ ನಡೆಸಿದ್ದು, ಇವರ ಜೊತೆ ಬಿಎಸ್​ ಯಡಿಯೂರಪ್ಪ ಅವರ ಪುತ್ರ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಕೂಡ ಫೀಲ್ಡ್​​ಗೆ ಇಳಿದಿದ್ದಾರೆ. ಇದರಿಂದ ಅಲರ್ಟ್​​ ಆದ ಸಿದ್ದರಾಮಯ್ಯ ಅವರು ನಾಳೆ (ಏ.22) ರಂದು ತವರು ಕ್ಷೇತ್ರಕ್ಕೆ ತೆರಳಿ ಮತಯಾಚನೆ ಮಾಡಲಿದ್ದಾರೆ.

ನಾಮಪತ್ರ ಸಲ್ಲಿಸಿದ ಎರಡೇ ದಿನಕ್ಕೆ ಮತ್ತೆ ಮೈಸೂರಿಗೆ ಹೊರಟಿರುವ ಸಿದ್ದರಾಮಯ್ಯ ಅವರು ನಾಳೆ ಬೆಳಗ್ಗೆ 10.30ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಾರೆ. ನಂತರ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬೆಳಗ್ಗೆಯಿಂದ ರಾತ್ರಿಯವರೆಗೂ ಪ್ರಚಾರ ಮಾಡಲಿದ್ದಾರೆ.

ಇದನ್ನೂ ಓದಿ: ನಾನು ಯಾರಿಗೂ ಪ್ರತಿಸ್ಪರ್ಧಿಯಾಗಲು ಬಯಸುವುದಿಲ್ಲ, ಬಿಜೆಪಿಯಲ್ಲಿ ಸಿಕ್ಕಾಪಟ್ಟೆ ನಾಯಕರಿದ್ದಾರೆ: ಬಿಎಲ್​ ಸಂತೋಷ್

ಇನ್ನು ವರುಣಾದಲ್ಲಿ ಬಿವೈ ವಿಜಯೇಂದ್ರ ಮಾತ್ರವಲ್ಲದೇ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರು ಕೂಡಾ ಮೈಸೂರು ಚುನಾವಣಾ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಸಂಸದ ಪ್ರತಾಪ್​​ ಸಿಂಹ ಒಳಗೊಂಡ ಕಾರ್ಯಕರ್ತರ ಸಭೆ ನಡೆಸಿದ್ದಾರೆ. ಈ ವೇಳೆ ವರುಣಾ ಕ್ಷೇತ್ರದ ಬಗ್ಗೆ ಕಾರ್ಯಕರ್ತರಿಂದ ಮಾಹಿತಿ ಪಡೆದಿದ್ದಾರೆ. ಇನ್ನು ಬಿಎಲ್​​ ಸಂತೋಷ ಮೈಸೂರಿನಲ್ಲಿ ಆಕ್ಟಿವ್​ ಆಗುತ್ತಿದ್ದಂತೆ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ತಲೆಬಿಸಿ ಶುರುವಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವರುಣಾ ಕ್ಷೇತ್ರದ ಪ್ರಚಾರದ ನಿರ್ವಹಣೆ ಮತ್ತು ಕಾರ್ಯಕರ್ತರೊಂದಿಗೆ ನಿಕಟವಾಗಿ ಕೆಲಸ ಮಾಡಲು ಕೇಂದ್ರ ವೀಕ್ಷಕರಾಗಿ ತಮ್ಮ ಆಪ್ತ ದಿಲೀಪ್ ಕುಮಾರ್ ಜೈಸ್ವಾಲ್ ಅವರನ್ನು ನಿಯೋಜಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯದ ಬೇರೆ ಸ್ಥಳಗಳಲ್ಲಿ ಪ್ರಚಾರ ಮಾಡದಂತೆ ವರುಣಾ ಕ್ಷೇತ್ರದಲ್ಲಿ ಮಾತ್ರವೇ ಪ್ರಚಾರದಲ್ಲಿ ತೊಡಗಿಕೊಳ್ಳುವಂತೆ ಸಿದ್ದರಾಮಯ್ಯ ಅವರನ್ನು ಬ್ಯುಸಿಯಾಗಿರುವಂತೆ ಮಾಡಲು ಸೋಮಣ್ಣ ಮತ್ತು ಅವರ ತಂಡಕ್ಕೆ ಅಮಿತ್ ಶಾ ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ