AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಅಭ್ಯರ್ಥಿಯ ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಆಸೀಫ್​​ (ರಾಜು) ಸೇಠ್​​ ಗೆಲುವಿನ ಸಂಭ್ರಮದಲ್ಲಿ ಪಾಲ್ಗೊಂಡ ಕೆಲ ಕಿಡಿಗೇಡಿಗಳು "ಪಾಕಿಸ್ತಾನ್​​ ಜಿಂದಾಬಾದ್​" ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿದೆ.

ಕಾಂಗ್ರೆಸ್​ ಅಭ್ಯರ್ಥಿಯ ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ
ಪಾಕಿಸ್ತಾನ ಜಿಂದಾಬಾದ್ ಕೂಗಿದ ಕಿಡಿಗೇಡಿಗಳು
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:May 14, 2023 | 7:44 AM

Share

ಬೆಳಗಾವಿ: ಬೆಳಗಾವಿ (Belagavi) ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ (Congress)​ ಅಭ್ಯರ್ಥಿ ಆಸೀಫ್​​ (ರಾಜು) ಸೇಠ್​​ ಗೆಲುವಿನ ಸಂಭ್ರಮದಲ್ಲಿ ಪಾಲ್ಗೊಂಡ ಕೆಲ ಕಿಡಿಗೇಡಿಗಳು “ಪಾಕಿಸ್ತಾನ್​​ ಜಿಂದಾಬಾದ್​” ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿದೆ. ಕಾಂಗ್ರೆಸ್ ಬೆಂಬಲಿಗರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಗೆಲುವು ಸಂಭ್ರಮಿಸಿ, ಆದರೆ ಈ ರೀತಿಯ ಭಾರತ ವಿರೋಧಿ ಘೋಷಣೆಗಳು ಬೇಡ. ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಲವು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ.

ಶನಿವಾರ (ಮೇ.13) ನಗರದ ರಾಣಿ ಪಾರ್ವತಿದೇವಿ ಕಾಲೇಜಿನ ಮತ ಎಣಿಕೆ ಕೇಂದ್ರ ಹೊರಗೆ ಮಧ್ಯಾಹ್ನ ಆಸೀಫ್ ಸೇ‌ಠ್​​ ಗೆಲುವು ಖಾತ್ರಿ ಆಗುತ್ತಿದ್ದಂತೆಯೇ ಅಪಾರ ಸಂಖ್ಯೆಯ ಯುವಕರು ಸುತ್ತ ಸೇರಿದ್ದರು. ಬಣ್ಣಗಳನ್ನು ಎರಚಿ, ಸಂಗೀತ ಹಾಕಿಕೊಂಡು ಕುಣಿದಿದ್ದರು. ಈ ವೇಳೆ ಕಾಂಗ್ರೆಸ್‌ ಧ್ವಜ ಹಿಡಿದು ಬಂದ ಕೆಲವರು ಜಿಂದಾಬಾದ್ ಜಿಂದಾಬಾದ್, ಪಾಕಿಸ್ತಾನ್ ಜಿಂದಾಬಾದ್ ಎಂದು ಮೂರು ಬಾರಿ ಘೋಷಣೆ ಮೊಳಗಿಸಿದ್ದರು. ಹತ್ತಿರದಲ್ಲೇ ಇದ್ದ ಕೆಲವು ಪೊಲೀಸರು ಯುವಕರ ಬಳಿ ಹೋಗಿ ತಾಕೀತು ಮಾಡಿದರು. ಈ ರೀತಿ ಬೇರೆ ಮಾತು ತೆಗೆದರೆ ಪರಿಸ್ಥಿತಿ ನೆಟ್ಟಗೆ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: ಸೋಲಿನ ಬೆನ್ನಲ್ಲೇ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಎಂಪಿ ರೇಣುಕಾಚಾರ್ಯ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಕ್ಷೇತ್ರದಲ್ಲಿ ಜಯಗಳಿಸಿದೆ. 66 ಕ್ಷೇತ್ರಗಳಲ್ಲಿ ಬಿಜೆಪಿಗೆಲುವು ಸಾಧಿಸಿದೆ. ಜೆಡಿಎಸ್ 19 ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಇತರರು 4 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:44 am, Sun, 14 May 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ