AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಅಭ್ಯರ್ಥಿಯ ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಆಸೀಫ್​​ (ರಾಜು) ಸೇಠ್​​ ಗೆಲುವಿನ ಸಂಭ್ರಮದಲ್ಲಿ ಪಾಲ್ಗೊಂಡ ಕೆಲ ಕಿಡಿಗೇಡಿಗಳು "ಪಾಕಿಸ್ತಾನ್​​ ಜಿಂದಾಬಾದ್​" ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿದೆ.

ಕಾಂಗ್ರೆಸ್​ ಅಭ್ಯರ್ಥಿಯ ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ
ಪಾಕಿಸ್ತಾನ ಜಿಂದಾಬಾದ್ ಕೂಗಿದ ಕಿಡಿಗೇಡಿಗಳು
ವಿವೇಕ ಬಿರಾದಾರ
|

Updated on:May 14, 2023 | 7:44 AM

Share

ಬೆಳಗಾವಿ: ಬೆಳಗಾವಿ (Belagavi) ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ (Congress)​ ಅಭ್ಯರ್ಥಿ ಆಸೀಫ್​​ (ರಾಜು) ಸೇಠ್​​ ಗೆಲುವಿನ ಸಂಭ್ರಮದಲ್ಲಿ ಪಾಲ್ಗೊಂಡ ಕೆಲ ಕಿಡಿಗೇಡಿಗಳು “ಪಾಕಿಸ್ತಾನ್​​ ಜಿಂದಾಬಾದ್​” ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿದೆ. ಕಾಂಗ್ರೆಸ್ ಬೆಂಬಲಿಗರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಗೆಲುವು ಸಂಭ್ರಮಿಸಿ, ಆದರೆ ಈ ರೀತಿಯ ಭಾರತ ವಿರೋಧಿ ಘೋಷಣೆಗಳು ಬೇಡ. ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಲವು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ.

ಶನಿವಾರ (ಮೇ.13) ನಗರದ ರಾಣಿ ಪಾರ್ವತಿದೇವಿ ಕಾಲೇಜಿನ ಮತ ಎಣಿಕೆ ಕೇಂದ್ರ ಹೊರಗೆ ಮಧ್ಯಾಹ್ನ ಆಸೀಫ್ ಸೇ‌ಠ್​​ ಗೆಲುವು ಖಾತ್ರಿ ಆಗುತ್ತಿದ್ದಂತೆಯೇ ಅಪಾರ ಸಂಖ್ಯೆಯ ಯುವಕರು ಸುತ್ತ ಸೇರಿದ್ದರು. ಬಣ್ಣಗಳನ್ನು ಎರಚಿ, ಸಂಗೀತ ಹಾಕಿಕೊಂಡು ಕುಣಿದಿದ್ದರು. ಈ ವೇಳೆ ಕಾಂಗ್ರೆಸ್‌ ಧ್ವಜ ಹಿಡಿದು ಬಂದ ಕೆಲವರು ಜಿಂದಾಬಾದ್ ಜಿಂದಾಬಾದ್, ಪಾಕಿಸ್ತಾನ್ ಜಿಂದಾಬಾದ್ ಎಂದು ಮೂರು ಬಾರಿ ಘೋಷಣೆ ಮೊಳಗಿಸಿದ್ದರು. ಹತ್ತಿರದಲ್ಲೇ ಇದ್ದ ಕೆಲವು ಪೊಲೀಸರು ಯುವಕರ ಬಳಿ ಹೋಗಿ ತಾಕೀತು ಮಾಡಿದರು. ಈ ರೀತಿ ಬೇರೆ ಮಾತು ತೆಗೆದರೆ ಪರಿಸ್ಥಿತಿ ನೆಟ್ಟಗೆ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: ಸೋಲಿನ ಬೆನ್ನಲ್ಲೇ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಎಂಪಿ ರೇಣುಕಾಚಾರ್ಯ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಕ್ಷೇತ್ರದಲ್ಲಿ ಜಯಗಳಿಸಿದೆ. 66 ಕ್ಷೇತ್ರಗಳಲ್ಲಿ ಬಿಜೆಪಿಗೆಲುವು ಸಾಧಿಸಿದೆ. ಜೆಡಿಎಸ್ 19 ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಇತರರು 4 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:44 am, Sun, 14 May 23

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ