AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ 3 ದಿನಗಳ ಕಾಲ ಪಂಜಾಬ್ ಸಿಎಂ ಭಗವಂತ್ ಮಾನ್​ ರಾಜ್ಯ ಪ್ರವಾಸ: ಇಂದು ಹುಬ್ಬಳ್ಳಿಯಲ್ಲಿ ರೋಡ್​ ಶೋ

ಇಂದಿನಿಂದ 3 ದಿನಗಳ ಕಾಲ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್​ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಎಎಪಿ ಅಭ್ಯರ್ಥಿಗಳ ಪರ ರೋಡ್ ಶೋ ‌ನಡೆಸಲಿದ್ದಾರೆ.

ಇಂದಿನಿಂದ 3 ದಿನಗಳ ಕಾಲ ಪಂಜಾಬ್ ಸಿಎಂ ಭಗವಂತ್ ಮಾನ್​ ರಾಜ್ಯ ಪ್ರವಾಸ: ಇಂದು ಹುಬ್ಬಳ್ಳಿಯಲ್ಲಿ ರೋಡ್​ ಶೋ
ಪಂಜಾಬ್ ಸಿಎಂ ಭಗವಂತ್ ಮಾನ್
ವಿವೇಕ ಬಿರಾದಾರ
|

Updated on:Apr 18, 2023 | 6:58 AM

Share

ಬೆಂಗಳೂರು: ಇತ್ತೀಚಿಗೆ ರಾಷ್ಟ್ರೀಯ ಪಕ್ಷವಾಗಿ ಮಾನ್ಯತೆ ಪಡೆದ ಆಮ್ ಆದ್ಮಿ ಪಕ್ಷ (Aam Aadmi Party) ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election 2023) 140 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಪಕ್ಷದ ಕಾರ್ಯಕರ್ತರು ರಾಜ್ಯಾದ್ಯಂತ ಬಿರುಸಿನ ಪ್ರಚಾರ ನಡೆಸಿದ್ದಾರೆ. ಹಾಗೇ ದೆಹಲಿ ಮುಖ್ಯಮಂತ್ರಿ, ರಾಷ್ಟ್ರೀಯ ನಾಯಕ ಅರವಿಂದ್​ ಕೇಜ್ರಿವಾಲ್ (Arvind Kejriwal)​ ಕಳೆದ ತಿಂಗಳು ರಾಜ್ಯ ಪ್ರವಾಸ ಕೈಗೊಂಡಿದ್ದು, ಬೆಣ್ಣೆನಗರಿ ದಾವಣಗೆರೆಗೆ ಭೇಟಿ ನೀಡಿ ಚುನಾವಣಾ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಇವರ ಬೆನ್ನಲ್ಲೇ ಇಂದಿನಿಂದ 3 ದಿನಗಳ ಕಾಲ ಪಂಜಾಬ್ (Punjab) ಮುಖ್ಯಮಂತ್ರಿ ಭಗವಂತ್ ಮಾನ್​ (Bhagwant Mann) ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಎಎಪಿ (AAP) ಅಭ್ಯರ್ಥಿಗಳ ಪರ ರೋಡ್ ಶೋ ‌ನಡೆಸಲಿದ್ದಾರೆ.

ಇದನ್ನೂ ಓದಿ: ಆಮ್ ಆದ್ಮಿ ಪಾರ್ಟಿಗೆ ರಾಷ್ಟ್ರೀಯ ಸ್ಥಾನಮಾನ ನೀಡಿದ ಕೇಂದ್ರ ಚುನಾವಣಾ ಆಯೋಗ

ಇಂದು ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸಲಿರುವ ಸಿಎಂ ಭಗವಂತ್ ಮಾನ್, ಮಧ್ಯಾಹ್ನ 1.30ಕ್ಕೆ ಗದಗ ಜಿಲ್ಲೆಯ ರೋಣದಲ್ಲಿ ರೋಡ್‌ ಶೋ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಹುಬ್ಬಳ್ಳಿಯಲ್ಲಿ ಸಿಎಂ ಭಗವಂತ್ ಮಾನ್ ಅವರ ಮತ್ತೊಂದು ರೋಡ್‌ ಶೋ ನಡೆಯಲಿದೆ. ನಾಳೆ (ಏ.19) ಬೆಳಗ್ಗೆ 11 ಗಂಟೆಗೆ ಬೆಳಗಾವಿ ಜಿಲ್ಲೆ ಅಥಣಿಯಲ್ಲಿ, ನಂತರ ಮಧ್ಯಾಹ್ನ 1 ಗಂಟೆಗೆ ಬಾಗಲಕೋಟೆ ಜಿಲ್ಲೆ ತೇರದಾಳದಲ್ಲಿ ರೋಡ್​ ಶೋ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ತೇರದಾಳದಲ್ಲಿ ರೈತರ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಳೆ, ನಾಡಿದ್ದು ಎಎಪಿ ರಾಜ್ಯಸಭಾ ಸದಸ್ಯ ರಾಘವ್ ಛಡ್ಡಾ ಜೊತೆ ಬೆಂಗಳೂರಿನ ಎಎಪಿ ಅಭ್ಯರ್ಥಿಗಳ ಪರ ರೋಡ್​ ಶೋ ಮಾಡುತ್ತಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:57 am, Tue, 18 April 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ