AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ 3 ದಿನಗಳ ಕಾಲ ಪಂಜಾಬ್ ಸಿಎಂ ಭಗವಂತ್ ಮಾನ್​ ರಾಜ್ಯ ಪ್ರವಾಸ: ಇಂದು ಹುಬ್ಬಳ್ಳಿಯಲ್ಲಿ ರೋಡ್​ ಶೋ

ಇಂದಿನಿಂದ 3 ದಿನಗಳ ಕಾಲ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್​ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಎಎಪಿ ಅಭ್ಯರ್ಥಿಗಳ ಪರ ರೋಡ್ ಶೋ ‌ನಡೆಸಲಿದ್ದಾರೆ.

ಇಂದಿನಿಂದ 3 ದಿನಗಳ ಕಾಲ ಪಂಜಾಬ್ ಸಿಎಂ ಭಗವಂತ್ ಮಾನ್​ ರಾಜ್ಯ ಪ್ರವಾಸ: ಇಂದು ಹುಬ್ಬಳ್ಳಿಯಲ್ಲಿ ರೋಡ್​ ಶೋ
ಪಂಜಾಬ್ ಸಿಎಂ ಭಗವಂತ್ ಮಾನ್
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 18, 2023 | 6:58 AM

Share

ಮುಖ್ಯಾಂಶಗಳು

  • ಇಂದಿನಿಂದ 3 ದಿನಗಳ ಕಾಲ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್​ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.
  • ಈ ವೇಳೆ ಎಎಪಿ ಅಭ್ಯರ್ಥಿಗಳ ಪರ ರೋಡ್ ಶೋ ‌ನಡೆಸಲಿದ್ದಾರೆ.
  • ಇಂದು ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸಲಿರುವ ಸಿಎಂ ಭಗವಂತ್ ಮಾನ್, ಮಧ್ಯಾಹ್ನ 1.30ಕ್ಕೆ ಗದಗ ಜಿಲ್ಲೆಯ ರೋಣದಲ್ಲಿ ರೋಡ್‌ ಶೋ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಹುಬ್ಬಳ್ಳಿಯಲ್ಲಿ ಸಿಎಂ ಭಗವಂತ್ ಮಾನ್ ಅವರ ಮತ್ತೊಂದು ರೋಡ್‌ ಶೋ ನಡೆಯಲಿದೆ.

ಬೆಂಗಳೂರು: ಇತ್ತೀಚಿಗೆ ರಾಷ್ಟ್ರೀಯ ಪಕ್ಷವಾಗಿ ಮಾನ್ಯತೆ ಪಡೆದ ಆಮ್ ಆದ್ಮಿ ಪಕ್ಷ (Aam Aadmi Party) ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election 2023) 140 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಪಕ್ಷದ ಕಾರ್ಯಕರ್ತರು ರಾಜ್ಯಾದ್ಯಂತ ಬಿರುಸಿನ ಪ್ರಚಾರ ನಡೆಸಿದ್ದಾರೆ. ಹಾಗೇ ದೆಹಲಿ ಮುಖ್ಯಮಂತ್ರಿ, ರಾಷ್ಟ್ರೀಯ ನಾಯಕ ಅರವಿಂದ್​ ಕೇಜ್ರಿವಾಲ್ (Arvind Kejriwal)​ ಕಳೆದ ತಿಂಗಳು ರಾಜ್ಯ ಪ್ರವಾಸ ಕೈಗೊಂಡಿದ್ದು, ಬೆಣ್ಣೆನಗರಿ ದಾವಣಗೆರೆಗೆ ಭೇಟಿ ನೀಡಿ ಚುನಾವಣಾ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಇವರ ಬೆನ್ನಲ್ಲೇ ಇಂದಿನಿಂದ 3 ದಿನಗಳ ಕಾಲ ಪಂಜಾಬ್ (Punjab) ಮುಖ್ಯಮಂತ್ರಿ ಭಗವಂತ್ ಮಾನ್​ (Bhagwant Mann) ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಎಎಪಿ (AAP) ಅಭ್ಯರ್ಥಿಗಳ ಪರ ರೋಡ್ ಶೋ ‌ನಡೆಸಲಿದ್ದಾರೆ.

ಇದನ್ನೂ ಓದಿ: ಆಮ್ ಆದ್ಮಿ ಪಾರ್ಟಿಗೆ ರಾಷ್ಟ್ರೀಯ ಸ್ಥಾನಮಾನ ನೀಡಿದ ಕೇಂದ್ರ ಚುನಾವಣಾ ಆಯೋಗ

ಇಂದು ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸಲಿರುವ ಸಿಎಂ ಭಗವಂತ್ ಮಾನ್, ಮಧ್ಯಾಹ್ನ 1.30ಕ್ಕೆ ಗದಗ ಜಿಲ್ಲೆಯ ರೋಣದಲ್ಲಿ ರೋಡ್‌ ಶೋ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಹುಬ್ಬಳ್ಳಿಯಲ್ಲಿ ಸಿಎಂ ಭಗವಂತ್ ಮಾನ್ ಅವರ ಮತ್ತೊಂದು ರೋಡ್‌ ಶೋ ನಡೆಯಲಿದೆ. ನಾಳೆ (ಏ.19) ಬೆಳಗ್ಗೆ 11 ಗಂಟೆಗೆ ಬೆಳಗಾವಿ ಜಿಲ್ಲೆ ಅಥಣಿಯಲ್ಲಿ, ನಂತರ ಮಧ್ಯಾಹ್ನ 1 ಗಂಟೆಗೆ ಬಾಗಲಕೋಟೆ ಜಿಲ್ಲೆ ತೇರದಾಳದಲ್ಲಿ ರೋಡ್​ ಶೋ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ತೇರದಾಳದಲ್ಲಿ ರೈತರ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಳೆ, ನಾಡಿದ್ದು ಎಎಪಿ ರಾಜ್ಯಸಭಾ ಸದಸ್ಯ ರಾಘವ್ ಛಡ್ಡಾ ಜೊತೆ ಬೆಂಗಳೂರಿನ ಎಎಪಿ ಅಭ್ಯರ್ಥಿಗಳ ಪರ ರೋಡ್​ ಶೋ ಮಾಡುತ್ತಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:57 am, Tue, 18 April 23

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು