AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ತಂತ್ರಗಾರಿಕೆಗಳು ಫೇಲ್, ಜೆಡಿಎಸ್ ಭದ್ರಕೋಟೆ ಛಿದ್ರಗೊಳಿಸಿದ ಕಾಂಗ್ರೆಸ್

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದುಕೊಂಡಿದೆ. ಇನ್ನು ಕಾಂಗ್ರೆಸ್‌ನ ಪ್ರಚಂಡ ಬಹುಮತದಲ್ಲಿ ಹಳೇ ಮೈಸೂರಿನ 9 ಜಿಲ್ಲೆಗಳ ಪಾತ್ರ ದೊಡ್ಡದಿದೆ.

ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ತಂತ್ರಗಾರಿಕೆಗಳು ಫೇಲ್, ಜೆಡಿಎಸ್ ಭದ್ರಕೋಟೆ ಛಿದ್ರಗೊಳಿಸಿದ ಕಾಂಗ್ರೆಸ್
ರಮೇಶ್ ಬಿ. ಜವಳಗೇರಾ
|

Updated on: May 13, 2023 | 7:18 PM

Share

ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್​ ಸ್ಪಷ್ಟ ಬಹುಮತ ಪಡೆದುಕೊಂಡಿದ್ದು, ಆಡಳಿತರೂಢ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್‌ ಕಂಪನ, ಕಿತ್ತೂರು ಕರ್ನಾಟಕದಲ್ಲೂ ಕೈಪಡೆಯದ್ದೇ ಅಬ್ಬರ. ಮಧ್ಯ ಕರ್ನಾಟಕ, ಮಲೆನಾಡು, ಹಳೇ ಮೈಸೂರು ಎಲ್ಲೇ ಹೋಗಿ ಇಡೀ ರಾಜ್ಯ ಸಂಪೂರ್ಣ ಕಾಂಗ್ರೆಸ್‌ ಮಯವಾಗಿದೆ. ಕಾಂಗ್ರೆಸ್‌ನ ಈ ದೊಡ್ಡ ಸುನಾಮಿ ನಡುವೆಯೂ ಕರಾವಳಿಯಲ್ಲಿ ಮಾತ್ರ ಕಮಲ ಅರಳಿದೆ. ಮುಖ್ಯವಾಗಿ ಹಳೇ ಮೈಸೂರು ಮೈಸೂರಿನಲ್ಲಿ ಹೆಚ್ಚು ಸ್ಥಾನಗಳಲ್ಲಿ ಗೆದ್ದರೆ ಮಾತ್ರ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಸರಳವಾಗಲಿದೆ ಎನ್ನುವುದು ಬಿಜೆಪಿಯ ಲೆಕ್ಕಾಚಾರವಾಗಿತ್ತು. 9 ಜಿಲ್ಲೆಗಳನ್ನು ಒಳಗೊಂಡ ಹಳೇ ಮೈಸೂರು ಭಾಗದಲ್ಲಿ 57 ಸ್ಥಾನಗಳ ಪೈಕಿ ಕನಿಷ್ಠ 30 ಕ್ಷೇತ್ರಗಳನ್ನು ಗೆಲ್ಲಬೇಕು ಎಂಬುವುದು ಬಿಜೆಪಿಯ ತಂತ್ರಗಾರಿಕೆಯಾಗಿತ್ತು. ಹಾಗಾಗಿ ಬಿಜೆಪಿ ಹೈಕಮಾಂಡ್​ ಹಳೇ ಮೈಸೂರು ಭಾಗಕ್ಕೆ ಹೆಚ್ಚಿನ ಹೊತ್ತು ಕೊಟ್ಟಿತ್ತು. ಆದ್ರೆ, ಮತದಾರರ ಬಿಜೆಪಿ ಕೈ ಹಿಡಿದಿಲ್ಲ.

ಇದನ್ನೂ ಓದಿ: ಟಿಕೆಟ್ ಸಿಗದೇ ಬಂಡೆದ್ದು ಬೇರೆ-ಬೇರೆ ಪಕ್ಷಕ್ಕೆ ಹೋಗಿದ್ದ ಜಂಪಿಂಗ್ ಸ್ಟಾರ್ಸ್ ಗೆದ್ರಾ? ಸೋತ್ರಾ? ಇಲ್ಲಿದೆ ವಿವರ

ಹಳೇ ಮೈಸೂರಿನಲ್ಲಿ ಪಕ್ಷಗಳ ಸಾಧನೆ

ಕಾಂಗ್ರೆಸ್‌ನ ಪ್ರಚಂಡ ಬಹುಮತದಲ್ಲಿ ಹಳೇ ಮೈಸೂರಿನ 9 ಜಿಲ್ಲೆಗಳ ಪಾತ್ರ ದೊಡ್ಡದಿದೆ. 57 ಕ್ಷೇತ್ರಗಳ ಪೈಕಿ 36 ರಲ್ಲಿ ಕಾಂಗ್ರೆಸ್‌ ಗೆದ್ದಿದೆ. ಅದರಲ್ಲೂ ಸಿದ್ದರಾಮಯ್ಯ ತವರು ಮೈಸೂರಿನಲ್ಲಿ 8, ತುಮಕೂರಲ್ಲಿ 7, ಹಾಗೂ ಮಂಡ್ಯದಲ್ಲಿ 5 ಸೀಟ್‌ ಬಾಚಿಕೊಂಡಿದೆ. ಭದ್ರಕೋಟೆಯಲ್ಲಿ ಜೆಡಿಎಸ್‌ ಗೆದ್ದಿದ್ದು 14 ಕ್ಷೇತ್ರ ಸ್ಥಾನ ಮಾತ್ರ. ಜೆಡಿಎಸ್‌ಗೆ ಹಾಸನದಲ್ಲಿ 4 ಸ್ಥಾನ ಬಂದ್ರೆ, ಕಳೆದ ಬಾರಿ ಕ್ಲೀನ್‌ ಸ್ವೀಪ್‌ ಮಾಡಿದ್ದ ಮಂಡ್ಯದಲ್ಲಿ ಜೆಡಿಎಸ್‌ಗೆ ಸಿಕ್ಕಿದ್ದು 1 ಸ್ಥಾನ ಮಾತ್ರ. ಇನ್ನು ಮೋದಿ ಕರೆಸಿ ಅಬ್ಬರದ ಪ್ರಚಾರ ನಡೆಸಿದ್ದ ಬಿಜೆಪಿಗೆ ಸಿಕ್ಕಿದ್ದು 5 ಸ್ಥಾನ ಮಾತ್ರ.

ಎಷ್ಟೇ ಪ್ರಯತ್ನಗಳು ನಡೆದರೂ ಹೊಸ ಪ್ರಯೋಗಗಳು, ಅನವಶ್ಯಕ ನಡೆಗಳಿಂದ ಮೈಸೂರು ಭಾಗದಲ್ಲಿ ಬಿಜೆಪಿ ನೆಲಕಚ್ಚಿದೆ. ತಿಂಗಳಿಗೆ ಎರಡು-ಮೂರು ಬಾರಿ ರೋಡ್‌ ಶೋ, ಸಮಾವೇಶಗಳ ಮೂಲಕ ಕನ್ನಡಿಗರನ್ನು ಓಲೈಸಲು ಪ್ರಧಾನಿ ನರೇಂದ್ರ ಮೋದಿ ತಂತ್ರಗಳು ತಲೆಕೆಳಗಾಗಿವೆ. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬಿಜೆಪಿ ತನ್ನಲ್ಲಿರುವ ಬಲಶಾಲಿ ಅಭ್ಯರ್ಥಿಗಳನ್ನೇ ಅನೇಕ ಕ್ಷೇತ್ರಗಳಲ್ಲಿ ಕಣಕ್ಕೆ ಇಳಿಸಿದ್ದರೂ ಬಿಜೆಪಿಗೆ ಗೆಲ್ಲಲು ಸಾಧ್ಯವಾಗಿಲ್ಲ.

ಹಳೇ ಮೈಸೂರು ಭಾಗವಾಗಿರುವ ಮೈಸೂರು, ಮಂಡ್ಯ ಚಾಮರಾಜನಗರ, ಕೊಡಗು, ಹಾಸನ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು. ಕೋಲಾರ ಜಿಲ್ಲೆಗಳಲ್ಲಿ ಬಿಜೆಪಿ ಭಾರೀ ಮುಖಭಂಗ ಅನುಭವಿಸಿದೆ. ಅದರಲ್ಲೂ ಮುಖ್ಯವಾಗಿ ಡಾ.ಕೆ ಸುಧಾಕರ್​ ನಂತಹ ಘಟಾನುಘಟಿ ನಾಯಕರಿಗೆ ಸೋಲಾಗಿದೆ. ಹಳೇ ಮೈಸೂರಿನ ಒಟ್ಟು 57 ಕ್ಷೇತ್ರಗಳಲ್ಲಿ ಬಿಜೆಪಿ 12, ಕಾಂಗ್ರೆಸ್ 17, ಜೆಡಿಎಸ್ 26, ಇತರರು ಎರಡು ಸ್ಥಾನವನ್ನು (ಮುಳಬಾಗಲು, ಕೊಳ್ಳೇಗಾಲ) ಗೆದ್ದಿದ್ದರು.

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ