AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಧಿನಗರದಲ್ಲಿ ಅಲ್ಪ ಮತಗಳಿಂದ ಗೆದ್ದ ದಿನೇಶ್ ಗುಂಡೂರಾವ್: ಮರು ಎಣಿಕೆಗೆ ಮನವಿ

ಬೆಂಗಳೂರಿನ ಗಾಂಧಿನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗುಂಡೂರಾವ್ ಮತ್ತು ಸಪ್ತಗಿರಿ ಗೌಡ ನಡುವೆ ನೇರ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ದಿನೇಶ್ ಗುಂಡುರಾವ್ ಗೆದ್ದಿದ್ದಾರೆ. ಆದ್ರೆ, ಇದೀಗ ಮರು ಎಣಿಕೆಗೆ ಮನವಿ ಮಾಡಲಾಗಿದೆ.

ಗಾಂಧಿನಗರದಲ್ಲಿ ಅಲ್ಪ ಮತಗಳಿಂದ ಗೆದ್ದ ದಿನೇಶ್ ಗುಂಡೂರಾವ್: ಮರು ಎಣಿಕೆಗೆ ಮನವಿ
ರಮೇಶ್ ಬಿ. ಜವಳಗೇರಾ
|

Updated on:May 13, 2023 | 2:40 PM

Share

ಬೆಂಗಳೂರು: ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ರಾಜಧಾನಿ ಬೆಂಗಳೂರಿನ ಹೃದಯ ಭಾಗ ಗಾಂಧಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ದಿನೇಶ್ ಗುಂಡುರಾವ್ ಕೇವಲ 113 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗುಂಡೂರಾವ್ ಮತ್ತು ಸಪ್ತಗಿರಿ ಗೌಡ ನಡುವೆ ನೇರ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ದಿನೇಶ್ ಗುಂಡುರಾವ್ ಗೆದ್ದಿದ್ದಾರೆ. ಆದರೆ, ಕಡಿಮೆ ಅಂತರದಲ್ಲಿ ಗೆದ್ದ ಹಿನ್ನಲೆ ಮತ್ತೆ ಮರು ಎಣಿಕೆ ಮಾಡುವಂತೆ ಬಿಜೆಪಿ ಅಭ್ಯರ್ಥಿ ಪ್ತಗಿರಿ ಗೌಡ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಮಕಾಡೆ ಮಲಗಿದ ಬಸವರಾಜ ಬೊಮ್ಮಾಯಿ ಸಂಪುಟದ ಘಟಾನುಘಟಿ ಸಚಿವರುಗಳು!

ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಒಟ್ಟು 53950 ಮತಗಳನ್ನು ಪಡೆದುಕೊಂಡಿದ್ದರೆ, ಬಿಜೆಪಿ ಅಭ್ಯರ್ಥಿ ಸಪ್ತಗಿರಿ ಗೌಡ ಅವರು ಒಟ್ಟು 53867 ಮತಗಳನ್ನು ಪಡೆದುಕೊಂಡಿದ್ದಾರೆ. ಇದರೊಂದಿಗೆ ಕಾಂಗ್ರೆಸ್​​ನ ದಿನೇಶ್ ಗುಂಡೂರಾವ್ ಅವರಿಗೆ ಕೇವಲ 113 ಮತಗಳಿಂದ ಗೆಲುವಾಗಿದೆ. ಬಹಳ ಕಡಿಮೆ ಅಂತರ ಇರುವುದರಿಂದ ಮತ್ತೊಮ್ಮೆ ಮತ ಎಣಿಕೆ ಮಾಡುವಂತೆ ಬಿಜೆಪಿ ಅಭ್ಯರ್ಥಿ ಮನವಿ ಮಾಡಿದ್ದಾರೆ.

ಜಿದ್ದಾಜಿದ್ದಿ ಇದ್ದ ಕ್ಷೇತ್ರ ಗಾಂಧಿನಗರ ಬಿಜೆಪಿಯ ಅಭ್ಯರ್ಥಿಯಾಗಿ ಮಾಜಿ ಸಚಿವ ರಾಮಚಂದ್ರ ಗೌಡ ಅವರ ಪುತ್ರ ಸಪ್ತಗಿರಿ ಗೌಡ ಸ್ಪರ್ಧಿಸಿದ್ರು. ಹಾಗೇ ಜೆಡಿಎಸ್‌ ಪಕ್ಷದಿಂದ ವಿ. ನಾರಾಯಣಸ್ವಾಮಿ, ಬಿಜೆಪಿ ಟಿಕೆಟ್ ವಂಚಿತ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿದ್ದರು. ಅಲ್ಲದೆ ಆಮ್ ಆದಿ ಪಾರ್ಟಿಯ ಗೋಪಿನಾಥ್ ಸೇರಿ 15 ಸ್ಪರ್ಧಿಗಳು ಕಣದಲ್ಲಿ ಇದ್ದರು. ಹೀಗಾಗಿ ಭರ್ಜರಿ ಪೈಪೋಟಿ ನಡುವೆ ಕಾಂಗ್ರೆಸ್ ಅಭ್ಯರ್ಥಿ ದಿನೇಶ್‌ ಗುಂಡೂರಾವ್ 6ನೇ ಬಾರಿ ಗೆಲುವು ಸಾಧಿಸಿದ್ದಾರೆ. ಆದ್ರೆ, ಇದೀಗ ಮರು ಎಣಿಕೆಗೆ ಬಿಜೆಪಿ ಅಭ್ಯರ್ಥಿ ಮನವಿ ಮಾಡಿದ್ದು, ಇದಕ್ಕೆ ಅಧಿಕಾರಿಗಳ ಏನು ನಿರ್ಧಾರ ಮಾಡಲಿದ್ದಾರೆ ಎನ್ನುವುದನ್ನು ಕಾದುನೋಡಬೇಕಿದೆ.

Published On - 2:37 pm, Sat, 13 May 23

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ