AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramesh Jarkiholi Profile: ಆಡಳಿತ ವಿರೋಧಿ ಅಲೆಯಲ್ಲೂ ಗೆದ್ದು ಬೀಗಿದ ಬೆಳಗಾವಿ ಸಾಹುಕಾರ ರಮೇಶ್​ ಜಾರಕಿಹೊಳಿ ವ್ಯಕ್ತಿ ಚಿತ್ರ

Ramesh Jarkiholi: ಗೋಕಾಕ್ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಭಾರಿ ಗೆಲುವು ಸಾಧಿಸಿದ್ದಾರೆ.  ಕರ್ನಾಟಕದ ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರ ಹಾಗೂ ಜನರು ಕಾತುರದಿಂದ ಫಲಿತಾಂಶದ ನಿರೀಕ್ಷೆಯನ್ನಿಟ್ಟುಕೊಂಡಿರುವ ಕ್ಷೇತ್ರಗಳಲ್ಲಿ ಬೆಳಗಾವಿಯ ಗೋಕಾಕ್ ಕ್ಷೇತ್ರ ಕೂಡ ಒಂದಾಗಿತ್ತು.

Ramesh Jarkiholi Profile: ಆಡಳಿತ ವಿರೋಧಿ ಅಲೆಯಲ್ಲೂ ಗೆದ್ದು ಬೀಗಿದ  ಬೆಳಗಾವಿ ಸಾಹುಕಾರ ರಮೇಶ್​ ಜಾರಕಿಹೊಳಿ ವ್ಯಕ್ತಿ ಚಿತ್ರ
ರಮೇಶ್ ಜಾರಕಿಹೊಳಿ
ನಯನಾ ರಾಜೀವ್
|

Updated on: May 13, 2023 | 1:11 PM

Share

ಗೋಕಾಕ್ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಮತ್ತೊಮ್ಮೆ ಗೆದ್ದು ಬೀಗಿದ್ದಾರೆ.  ಕರ್ನಾಟಕದ ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರ ಹಾಗೂ ಜನರು ಕಾತುರದಿಂದ ಫಲಿತಾಂಶದ ನಿರೀಕ್ಷೆಯನ್ನಿಟ್ಟುಕೊಂಡಿರುವ ಕ್ಷೇತ್ರಗಳಲ್ಲಿ ಬೆಳಗಾವಿಯ ಗೋಕಾಕ್ ಕ್ಷೇತ್ರ ಕೂಡ ಒಂದಾಗಿತ್ತು. ಈ ಕ್ಷೇತ್ರದಲ್ಲಿ ಜಾರಕಿಹೊಳಿ ಕುಟುಂಬದ ಪ್ರಭಾವವೇ ಹೆಚ್ಚಿದೆ. ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದ ರಮೇಶ್‌ ಜಾರಕಿಹೊಳಿ ಈ ಬಾರಿಯೂ ಗೆಲುವು ಸಾಧಿಸುವ ನಿಟ್ಟಿನಲ್ಲಿ ವ್ಯಾಪಕ ಪ್ರಯತ್ನ ನಡೆಸಿದ್ದರು.

ಜಾರಕಿಹೊಳಿ ಅವರು ಕರ್ನಾಟಕ ವಿಧಾನಸಭೆಯ ಆರು ಬಾರಿ ಸದಸ್ಯರಾಗಿದ್ದಾರೆ. ಜೂನ್ 2016 ರಲ್ಲಿ, ಅವರು ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರಕ್ಕೆ ಕ್ಯಾಬಿನೆಟ್ ಸಚಿವರಾಗಿ ಸೇರ್ಪಡೆಗೊಂಡರು. ಅವರು ಸಣ್ಣ ಪ್ರಮಾಣದ ಕೈಗಾರಿಕೆಗಳ ಸಚಿವಾಲಯದ ಬಂಡವಾಳವನ್ನು ಹೊಂದಿದ್ದರು. 2019 ರಲ್ಲಿ ಪಕ್ಷಾಂತರ ವಿರೋಧಿ ಕಾನೂನಿನ ಪ್ರಕಾರ ಅವರನ್ನು ವಿಧಾನಸಭೆಯಿಂದ ಅನರ್ಹಗೊಳಿಸಲಾಯಿತು, ಆದರೆ ಡಿಸೆಂಬರ್ 2019 ರಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ವಿಧಾನಸಭೆಗೆ ಮರು ಆಯ್ಕೆಯಾದರು

1985ರಿಂದಲೂ ರಾಜಕಾರಣದಲ್ಲಿರುವ ರಮೇಶ್‌ ಜಾರಕಿಹೊಳಿ ಇದುವರೆಗೂ 7 ಬಾರಿ ಚುನಾವಣೆ ಎದುರಿಸಿದ್ದು, ಈಗ ಎಂಟನೇ ಬಾರಿ ಚುನಾವಣೆ ಎದುರಿಸಲು ನಾಮಪತ್ರ ಸಲ್ಲಿಸಿದ್ದಾರೆ. ತಮ್ಮ ಮೊದಲ ಚುನಾವಣೆಯಲ್ಲಿ ಕೇವಲ 4000 ಮತಗಳ ಅಂತರದಿಂದ ಸೋತಿದ್ದ ರಮೇಶ್ ಜಾರಕಿಹೊಳಿ, 1989 ಹಾಗೂ 1994ರ ಚುನಾವಣೆಯಲ್ಲಿ ಸ್ಪರ್ಧಿಸಿದ್ದಿಲ್ಲ.

ಆದರೆ, 1999ರಲ್ಲಿ ಗೋಕಾಕ್‌ನಿಂದ ಮತ್ತೆ ಸ್ಪರ್ಧಿಸಲು ಶುರು ಮಾಡಿದ ರಮೇಶ್‌ ಜಾರಕಿಹೊಳಿ ಇದುವರೆಗೂ ಗೋಕಾಕ್‌ನಲ್ಲಿ ಸೋಲು ಕಂಡಿಲ್ಲ. ಉಪಚುನಾವಣೆ ಸೇರಿ ಇದುವರೆಗೂ 6 ಚುನಾವಣೆಯಲ್ಲಿ ರಮೇಶ್‌ ಜಾರಿಹೊಳಿ ಗೆಲುವು ಕಂಡಿದ್ದಾರೆ. ಗೋಕಾಕ ವಿಧಾನಸಭಾ ಕ್ಷೇತ್ರದಲ್ಲಿ 2,38,221 ಮತದಾರರಿದ್ದು, ಈ ಪೈಕಿ 1,16,816 ಪುರುಷ, 1,20,085 ಮಹಿಳಾ ಮತದಾರರಿದ್ದಾರೆ.

ಹಾಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್‌ನ ಮಹಾಂತೇಶ ಕಡಾಡಿ ವಿರುದ್ಧ ಕಣಕ್ಕಿಳಿದಿದ್ದಾರೆ. ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಗೆಲುವು ಕಂಡಿದ್ದ ರಮೇಶ್‌ ಜಾರಕಿಹೊಳಿ 2019ರಲ್ಲಿ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಬಂದಿದ್ದರು.

ಈ ಮೂಲಕ ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣರಾಗಿದ್ದರು. 2019ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರಮೇಶ್‌ ಜಾರಕಿಹೊಳಿ ಗೆಲುವು ಸಾಧಿಸಿದ್ದರು. ಈಗ ಎರಡನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣಾ ಆಖಾಡ ಪ್ರವೇಶಿಸಿದ್ದಾರೆ.

2018 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಮೇಶ್ ಜಾರಕಿಹೊಳಿ ಅವರು ಬಿಜೆಪಿ ಅಭ್ಯರ್ಥಿ ಅಶೋಕ್ ನಿಂಗಯ್ಯಸ್ವಾಮಿ ಪೂಜಾರಿ ಮತ್ತು ಜೆಡಿಎಸ್‌ನ ಕರೆಪ್ಪ ಲಕ್ಕಪ್ಪ ತಳವಾರ ಅವರ ವಿರುದ್ಧ ಗೆದ್ದು ಭೀಗಿದ್ದರು.

ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ