AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾನದ ವೇಳೆ ರಾಜ್ಯದ ವಿವಿಧೆಡೆ 12 ಪ್ರಕರಣ ದಾಖಲು; ಇಲ್ಲಿಯ ವರೆಗೂ ಅಧಿಕಾರಿಗಳು ವಶಕ್ಕೆ ಪಡೆದ ವಸ್ತುಗಳ ಒಟ್ಟು ಮೊತ್ತ ಎಷ್ಟು ಗೊತ್ತಾ?

ಮತದಾನದ ವೇಳೆ ರಾಜ್ಯದ ಕೆಲ ಕಡೆ ಗಲಾಟೆಗಳು, ಮರಾಮಾರಿಗಳು ಕೂಡ ನಡೆದಿವೆ. ಮತದಾನದ ವೇಳೆ ರಾಜ್ಯದ ವಿವಿಧೆಡೆ ನಡೆದ ಗಲಾಟೆ ಸಂಬಂಧ ಒಟ್ಟು 12 ಪ್ರಕರಣಗಳು ದಾಖಲಾಗಿವೆ.

ಮತದಾನದ ವೇಳೆ ರಾಜ್ಯದ ವಿವಿಧೆಡೆ 12 ಪ್ರಕರಣ ದಾಖಲು; ಇಲ್ಲಿಯ ವರೆಗೂ ಅಧಿಕಾರಿಗಳು ವಶಕ್ಕೆ ಪಡೆದ ವಸ್ತುಗಳ ಒಟ್ಟು ಮೊತ್ತ ಎಷ್ಟು ಗೊತ್ತಾ?
ಮತದಾನ
ಆಯೇಷಾ ಬಾನು
ಆಯೇಷಾ ಬಾನು|

Updated on: May 11, 2023 | 12:50 PM

Share

ಬೆಂಗಳೂರು: ಪ್ರಜಾಪ್ರಭುತ್ವದ ಹಬ್ಬ ರಾಜ್ಯ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ಮೇ 10ರಂದು ಯಶಸ್ವಿಯಾಗಿ ಮತದಾನ ಮುಗಿದಿದೆ. ಆದ್ರೆ ಶಾಂತಿಯುತವಾಗಿ ನಡೆಯಬೇಕಿದ್ದ ಮತದಾನದ ವೇಳೆ ರಾಜ್ಯದ ಕೆಲ ಕಡೆ ಗಲಾಟೆಗಳು, ಮರಾಮಾರಿಗಳು ಕೂಡ ನಡೆದಿವೆ. ಮತದಾನದ ವೇಳೆ ರಾಜ್ಯದ ವಿವಿಧೆಡೆ ನಡೆದ ಗಲಾಟೆ ಸಂಬಂಧ ಒಟ್ಟು 12 ಪ್ರಕರಣಗಳು ದಾಖಲಾಗಿವೆ.

12 ಪ್ರಕರಣಗಳ ಪೈಕಿ ಪ್ರಮುಖವೆಂದರೆ ವಿಜಯಪುರ ಜಿಲ್ಲೆಯಲ್ಲಿ ಬಸವನ ಬಾಗೇವಾಡಿ ವಿಧಾನಸಭೆ ಕ್ಷೇತ್ರದಲ್ಲಿ ನಡೆದ ಜಗಳ. ಇಲ್ಲಿ ಮತದಾನದ ವೇಳೆ ವಿವಿ ಪ್ಯಾಟ್​​​ಗಳನ್ನು ಒಡೆದು ಹಾಕಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಕಾರು ಜಖಂಗೊಳಿಸಲಾಗಿತ್ತು. ಘಟನೆ ಸಂಬಂಧ ಒಟ್ಟು 34 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್, 143,147,323,324,307,332,353 ,r/w 149 IPc ,136 Rp act, KPDLP 1981 Act ಅಡಿಯಲ್ಲಿ ಕೇಸ್ ದಾಖಲಾಗಿದ್ದು ಪ್ರಕರಣ ಸಂಬಂಧ ಒಟ್ಟು 23 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಮೈಸೂರು ಜಿಲ್ಲೆ ಚಾಮುಂಡೇಶ್ವರಿ ಕ್ಷೇತ್ರದಲ್ಲೂ 1 ಕೇಸ್ ದಾಖಲಾಗಿದೆ. ನಿನ್ನೆ ಮತಚಲಾಯಿಸಲು ಆಗಮಿಸಿದ್ದ ಶಿವಮೂರ್ತಿ ಎಂಬಾತ ಮತ ಹಾಕುವ ವೇಳೆ ಮತಗಟ್ಟೆಯಲ್ಲಿ ಕಂಟ್ರೋಲ್ ಯೂನಿಟ್​ ಒಡೆದು ಹಾಕಿದ್ದ ಘಟನೆ ಸಂಬಂಧ ಶಿವಮೂರ್ತಿ ವಿರುದ್ಧ ಪ್ರಕರಣ ದಾಖಲಾಗಿದೆ.

ಮತ್ತೊಂದೆಡೆ ಚಾಮರಾಜನಗರ ಜಿಲ್ಲೆಯ ಹನೂರು ವಿಧಾನಸಭೆ ಕ್ಷೇತ್ರದ ಎಂಎಂ ಹಿಲ್ಸ್ ಬಳಿಯ ತೋಕರ ಗ್ರಾಮಕ್ಕೆ ಮತ ಹಾಕಿ ಹೋಗುವಾಗ ಆನೆ ಕಾಲ್ತುಳಿತಕ್ಕೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. 44 ವರ್ಷದ ಪುಟ್ಟ ಸ್ವಾಮಿ ಮೃತರು. ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆ ಮತ ಚಲಾಯಿಸಿ ಮನೆಗೆ ವಾಪಸ್ ಹೋಗುತ್ತಿದ್ದಾಗ ರಾಮಾಪುರದ ಮಾಟರಹಳ್ಳಿ ಗ್ರಾಮದ ಬಳಿ ಆನೆ ದಾಳಿ ಮಾಡಿದೆ. ಮೃತದೇಹವನ್ನು ಹನೂರು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಹೀಗೆ ಮತದಾನದ ವೇಳೆ ನಡೆದ ಒಟ್ಟು 12 ಪ್ರಕರಣಗಳು ದಾಖಲಾಗಿದ್ದು ಈ ಮೂರು ಪ್ರಮುಖ ಘಟನೆಗಳಾಗಿವೆ.

ಇದನ್ನೂ ಓದಿ; Karnataka Assembly Polls: ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಮೊದಲು ತಾಯಿ ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

ಚುನಾವಣೆ ಮುಗಿಯುವ ಹೊತ್ತಿಗೆ ಒಟ್ಟು 384.46 ಕೋಟಿ ವಶ

ಚುನಾವಣೆ ಸಮಯದಲ್ಲಿ ಅಧಿಕಾರಿಗಳು ಒಟ್ಟು 384.46 ಕೋಟಿ ಮೌಲ್ಯ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಹಣ, ಮದ್ಯ, ಉಡುಗೊರೆ ಸೇರಿ ಒಟ್ಟು 384.46 ಕೋಟಿಗೆ ಏರಿಕೆಯಾಗಿದೆ.

  • ನಗದು : 153.17 ಕೋಟಿ
  • ಉಡುಗೊರೆ : 24.26 ಕೋಟಿ ಮೌಲ್ಯದ್ದು
  • ಮದ್ಯ : 84.93 ಕೋಟಿ ಮೌಲ್ಯದ 22,62,855 ಲೀಟರ್ ವಶಕ್ಕೆ
  • ಡ್ರಗ್ಸ್ : 24.3 ಕೋಟಿ ಮೌಲ್ಯದ 1,995.ಕೆಜಿ ವಶಕ್ಕೆ
  • ಚಿನ್ನ : 93.28 ಕೋಟಿ ಮೌಲ್ಯದ 182.28 KG ವಶಕ್ಕೆ
  • ಬೆಳ್ಳಿ : 4.79 ಕೋಟಿ ಮೌಲ್ಯದ 691.94 ಕೆಜಿ ವಶಕ್ಕೆ

    election seized

    ಅಧಿಕಾರಿಗಳು ವಶಕ್ಕೆ ಪಡೆದ ಒಟ್ಟು ಮೊತ್ತ

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ