AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Elections 2023: ಇಂದು ಕಿಚ್ಚ ಸುದೀಪ್​ ಎಲ್ಲೆಲ್ಲಿ ಪ್ರಚಾರ ಮಾಡಲಿದ್ದಾರೆ? ಇಲ್ಲಿದೆ ವಿವರ

ಏಪ್ರಿಲ್ 26ರಂದು ಪ್ರಚಾರ ಆರಂಭಿಸಿದ ಸುದೀಪ್ ಚಿತ್ರದುರ್ಗದ ಮೊಳಕಾಲ್ಮೂರು, ದಾವಣಗೆರೆಯ ಜಗಳೂರು, ಬಳ್ಳಾರಿಯ ಸಂಡೂರಿನಲ್ಲಿ ಪ್ರಚಾರ ನಡೆಸಿದ್ದರು. ಇಂದು ಸುದೀಪ್ ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ.

Karnataka Assembly Elections 2023: ಇಂದು ಕಿಚ್ಚ ಸುದೀಪ್​ ಎಲ್ಲೆಲ್ಲಿ ಪ್ರಚಾರ ಮಾಡಲಿದ್ದಾರೆ? ಇಲ್ಲಿದೆ ವಿವರ
ಸುದೀಪ್ ಪ್ರಚಾರ
ಆಯೇಷಾ ಬಾನು
ಆಯೇಷಾ ಬಾನು|

Updated on:Apr 27, 2023 | 9:48 AM

Share

ಹಾವೇರಿ: ರಾಜ್ಯ ರಾಜಕಾರಣದ ರಣರಂಗ ದಿನೇ ದಿನೇ ರಂಗೇರುತ್ತಿದೆ(Karnataka Assembly Elections 2023). ಚುನಾವಣಾ ಅಖಾಡದಲ್ಲಿ ಬಿಜೆಪಿ ಹೊಸ ಹೊಸ ತಂತ್ರ ಹೆಣೆಯುತ್ತಿದೆ. ಎಸ್​ಟಿ ಮೀಸಲು ಕ್ಷೇತ್ರಗಳಲ್ಲಿ ವಾಲ್ಮೀಕಿ ಸಮುದಾಯದವರಾದ ನಟ ಕಿಚ್ಚ ಸುದೀಪ್​​ರನ್ನ(Actor Sudeep) ಪ್ರಚಾರಕ್ಕೆ ಬಿಡುವ ಮೂಲಕ ಕಿಚ್ಚು ಹೊತ್ತಿಸಿದೆ. ಏಪ್ರಿಲ್ 26ರಂದು ಪ್ರಚಾರ ಆರಂಭಿಸಿದ ಸುದೀಪ್ ಚಿತ್ರದುರ್ಗದ ಮೊಳಕಾಲ್ಮೂರು, ದಾವಣಗೆರೆಯ ಜಗಳೂರು, ಬಳ್ಳಾರಿಯ ಸಂಡೂರಿನಲ್ಲಿ ಪ್ರಚಾರ ನಡೆಸಿದ್ದರು. ಇಂದು ಸುದೀಪ್ ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ.

ಇಂದು ಮೂರು ಜಿಲ್ಲೆಗಳಲ್ಲಿ ನಟ ಕಿಚ್ಚ ಸುದೀಪ್ ಪ್ರಚಾರ ನಡೆಸಲಿದ್ದಾರೆ. ನಿನ್ನೆ ಸಿದ್ದರಾಮಯ್ಯ ಕಾರ್ಯಕ್ರಮ ಹಿನ್ನೆಲೆ ಸಂಡೂರಿನಲ್ಲಿ ಪ್ರಚಾರ ನಡೆಸಲಾಗಿರಲಿಲ್ಲ. ಹೀಗಾಗಿ ಇಂದು ಮುಂಜಾನೆಯೇ ಬಳ್ಳಾರಿ ಜಿಲ್ಲೆ ಸಂಡೂರು ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಶಿಲ್ಪಾ ರಾಘವೇಂದ್ರ ಪರ ಮತಯಾಚಿಸಿ ಕೂಡ್ಲಿಗಿಯಲ್ಲಿ ರೋಡ್​ ಶೋ ನಡೆಸಲಿದ್ದಾರೆ. ನಂತರ ಅದೇ ಮಾರ್ಗದಲ್ಲಿ ವಿಜಯ ಸರ್ಕಲ್​ನಿಂದ ಕೆಎಸ್​ಆರ್​ಟಿಸಿ ಡಿಪೋ ವರೆಗೂ ರೋಡ್​ ಶೋ ನಡೆಸಿ ಬಳಿಕ ಹಾವೇರಿ ಜಿಲ್ಲೆಯ 3 ಕ್ಷೇತ್ರಗಳಲ್ಲಿ ಪ್ರಚಾರ ಮಾಡಲಿದ್ದಾರೆ.

ಇದನ್ನೂ ಓದಿ: Karnataka Assembly Polls: ಬಿಜೆಪಿ ಪರ ಪ್ರಚಾರ ಶುರುಮಾಡಿರುವ ಕಿಚ್ಚ ಸುದೀಪ್ ಇಂದು ಮೊಳಕಾಲ್ಮೂರುಗೆ ಸಿನಿಮೀಯ ಶೈಲಿಯಲ್ಲಿ ಆಗಮನ!

ಬೆಳಗ್ಗೆ 11 ಗಂಟೆಗೆ ಹಿರೇಕೆರೂರಿಗೆ ಆಗಮಿಸುವ ನಟ ಸುದೀಪ್, ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಪರ ರೋಡ್​ ಶೋ ನಡೆಸಲಿದ್ದಾರೆ. ರಾಣೆಬೆನ್ನೂರಿನಲ್ಲಿ ಅರುಣ್ ಪೂಜಾರ್​ ಪರ, ಬ್ಯಾಡಗಿಯಲ್ಲಿ ಬಿಜೆಪಿ ಅಭ್ಯರ್ಥಿ ವಿರೂಪಾಕ್ಷಪ್ಪ ಪರ ನಂತರ ಧಾರವಾಡ ಜಿಲ್ಲೆ ಕುಂದಗೋಳದಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಆರ್​.ಪಾಟೀಲ್​ ಪರ ಸುದೀಪ್ ಮತಬೇಟೆ ಮಾಡಲಿದ್ದಾರೆ.

ಸುದೀಪ್ ಪ್ರಚಾರ ವೇಳಾಪಟ್ಟಿ

  • ಬೆಳಿಗ್ಗೆ 11 ಗಂಟೆಗೆ ರಾಣೇಬೆನ್ನೂರ ಬಿಜೆಪಿ ಅಭ್ಯರ್ಥಿ ಅರುಣ ಕುಮಾರ ಪರ ಪ್ರಚಾರ
  • ಮಧ್ಯಾಹ್ನ 12:30 ಕ್ಕೆ ಹಿರೆಕೇರೂರ ಅಭ್ಯರ್ಥಿ ಬಿ.ಸಿ.ಪಾಟೀಲ್ ಪರ ಪ್ರಚಾರ
  • ಸಾಯಂಕಾಲ 3:10 ಕ್ಕೆ ಬ್ಯಾಡಗಿ ಬಿಜೆಪಿ ಅಭ್ಯರ್ಥಿ ವಿರೂಪಾಕ್ಷಪ್ಪ ಪರ ಮತಯಾಚನೆ
  • ಸಂಜೆ 4.30 ಕ್ಕೆ ಸಂಶಿಯಲ್ಲಿ ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಆರ್ ಪಾಟೀಲ್ ಪರ ರೋಡ್ ಶೋ ನಡೆಸಲಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:48 am, Thu, 27 April 23

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!