AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Elections 2023: ಇಂದು ಕಿಚ್ಚ ಸುದೀಪ್​ ಎಲ್ಲೆಲ್ಲಿ ಪ್ರಚಾರ ಮಾಡಲಿದ್ದಾರೆ? ಇಲ್ಲಿದೆ ವಿವರ

ಏಪ್ರಿಲ್ 26ರಂದು ಪ್ರಚಾರ ಆರಂಭಿಸಿದ ಸುದೀಪ್ ಚಿತ್ರದುರ್ಗದ ಮೊಳಕಾಲ್ಮೂರು, ದಾವಣಗೆರೆಯ ಜಗಳೂರು, ಬಳ್ಳಾರಿಯ ಸಂಡೂರಿನಲ್ಲಿ ಪ್ರಚಾರ ನಡೆಸಿದ್ದರು. ಇಂದು ಸುದೀಪ್ ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ.

Karnataka Assembly Elections 2023: ಇಂದು ಕಿಚ್ಚ ಸುದೀಪ್​ ಎಲ್ಲೆಲ್ಲಿ ಪ್ರಚಾರ ಮಾಡಲಿದ್ದಾರೆ? ಇಲ್ಲಿದೆ ವಿವರ
ಸುದೀಪ್ ಪ್ರಚಾರ
ಆಯೇಷಾ ಬಾನು
|

Updated on:Apr 27, 2023 | 9:48 AM

Share

ಹಾವೇರಿ: ರಾಜ್ಯ ರಾಜಕಾರಣದ ರಣರಂಗ ದಿನೇ ದಿನೇ ರಂಗೇರುತ್ತಿದೆ(Karnataka Assembly Elections 2023). ಚುನಾವಣಾ ಅಖಾಡದಲ್ಲಿ ಬಿಜೆಪಿ ಹೊಸ ಹೊಸ ತಂತ್ರ ಹೆಣೆಯುತ್ತಿದೆ. ಎಸ್​ಟಿ ಮೀಸಲು ಕ್ಷೇತ್ರಗಳಲ್ಲಿ ವಾಲ್ಮೀಕಿ ಸಮುದಾಯದವರಾದ ನಟ ಕಿಚ್ಚ ಸುದೀಪ್​​ರನ್ನ(Actor Sudeep) ಪ್ರಚಾರಕ್ಕೆ ಬಿಡುವ ಮೂಲಕ ಕಿಚ್ಚು ಹೊತ್ತಿಸಿದೆ. ಏಪ್ರಿಲ್ 26ರಂದು ಪ್ರಚಾರ ಆರಂಭಿಸಿದ ಸುದೀಪ್ ಚಿತ್ರದುರ್ಗದ ಮೊಳಕಾಲ್ಮೂರು, ದಾವಣಗೆರೆಯ ಜಗಳೂರು, ಬಳ್ಳಾರಿಯ ಸಂಡೂರಿನಲ್ಲಿ ಪ್ರಚಾರ ನಡೆಸಿದ್ದರು. ಇಂದು ಸುದೀಪ್ ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ.

ಇಂದು ಮೂರು ಜಿಲ್ಲೆಗಳಲ್ಲಿ ನಟ ಕಿಚ್ಚ ಸುದೀಪ್ ಪ್ರಚಾರ ನಡೆಸಲಿದ್ದಾರೆ. ನಿನ್ನೆ ಸಿದ್ದರಾಮಯ್ಯ ಕಾರ್ಯಕ್ರಮ ಹಿನ್ನೆಲೆ ಸಂಡೂರಿನಲ್ಲಿ ಪ್ರಚಾರ ನಡೆಸಲಾಗಿರಲಿಲ್ಲ. ಹೀಗಾಗಿ ಇಂದು ಮುಂಜಾನೆಯೇ ಬಳ್ಳಾರಿ ಜಿಲ್ಲೆ ಸಂಡೂರು ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಶಿಲ್ಪಾ ರಾಘವೇಂದ್ರ ಪರ ಮತಯಾಚಿಸಿ ಕೂಡ್ಲಿಗಿಯಲ್ಲಿ ರೋಡ್​ ಶೋ ನಡೆಸಲಿದ್ದಾರೆ. ನಂತರ ಅದೇ ಮಾರ್ಗದಲ್ಲಿ ವಿಜಯ ಸರ್ಕಲ್​ನಿಂದ ಕೆಎಸ್​ಆರ್​ಟಿಸಿ ಡಿಪೋ ವರೆಗೂ ರೋಡ್​ ಶೋ ನಡೆಸಿ ಬಳಿಕ ಹಾವೇರಿ ಜಿಲ್ಲೆಯ 3 ಕ್ಷೇತ್ರಗಳಲ್ಲಿ ಪ್ರಚಾರ ಮಾಡಲಿದ್ದಾರೆ.

ಇದನ್ನೂ ಓದಿ: Karnataka Assembly Polls: ಬಿಜೆಪಿ ಪರ ಪ್ರಚಾರ ಶುರುಮಾಡಿರುವ ಕಿಚ್ಚ ಸುದೀಪ್ ಇಂದು ಮೊಳಕಾಲ್ಮೂರುಗೆ ಸಿನಿಮೀಯ ಶೈಲಿಯಲ್ಲಿ ಆಗಮನ!

ಬೆಳಗ್ಗೆ 11 ಗಂಟೆಗೆ ಹಿರೇಕೆರೂರಿಗೆ ಆಗಮಿಸುವ ನಟ ಸುದೀಪ್, ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಪರ ರೋಡ್​ ಶೋ ನಡೆಸಲಿದ್ದಾರೆ. ರಾಣೆಬೆನ್ನೂರಿನಲ್ಲಿ ಅರುಣ್ ಪೂಜಾರ್​ ಪರ, ಬ್ಯಾಡಗಿಯಲ್ಲಿ ಬಿಜೆಪಿ ಅಭ್ಯರ್ಥಿ ವಿರೂಪಾಕ್ಷಪ್ಪ ಪರ ನಂತರ ಧಾರವಾಡ ಜಿಲ್ಲೆ ಕುಂದಗೋಳದಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಆರ್​.ಪಾಟೀಲ್​ ಪರ ಸುದೀಪ್ ಮತಬೇಟೆ ಮಾಡಲಿದ್ದಾರೆ.

ಸುದೀಪ್ ಪ್ರಚಾರ ವೇಳಾಪಟ್ಟಿ

  • ಬೆಳಿಗ್ಗೆ 11 ಗಂಟೆಗೆ ರಾಣೇಬೆನ್ನೂರ ಬಿಜೆಪಿ ಅಭ್ಯರ್ಥಿ ಅರುಣ ಕುಮಾರ ಪರ ಪ್ರಚಾರ
  • ಮಧ್ಯಾಹ್ನ 12:30 ಕ್ಕೆ ಹಿರೆಕೇರೂರ ಅಭ್ಯರ್ಥಿ ಬಿ.ಸಿ.ಪಾಟೀಲ್ ಪರ ಪ್ರಚಾರ
  • ಸಾಯಂಕಾಲ 3:10 ಕ್ಕೆ ಬ್ಯಾಡಗಿ ಬಿಜೆಪಿ ಅಭ್ಯರ್ಥಿ ವಿರೂಪಾಕ್ಷಪ್ಪ ಪರ ಮತಯಾಚನೆ
  • ಸಂಜೆ 4.30 ಕ್ಕೆ ಸಂಶಿಯಲ್ಲಿ ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಆರ್ ಪಾಟೀಲ್ ಪರ ರೋಡ್ ಶೋ ನಡೆಸಲಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:48 am, Thu, 27 April 23

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು