AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Polls: ಮೈಸೂರಿನಲ್ಲಿ ರಂಗೇರುತ್ತಿರುವ ಚುನಾವಣಾ ಕಣ; ಜೆಡಿಎಸ್, ಕಾಂಗ್ರೆಸ್ ನಡುವೆ ಪೈಪೋಟಿ

ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಪ್ರಚಾರದ ಕಾವು ಏರುತ್ತಿದೆ. ಮೈಸೂರು ಜಿಲ್ಲೆ ಶೇ 50ಕ್ಕೂ ಹೆಚ್ಚು ಕಡೆಗಳಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ನೇರ ಹಣಾಹಣಿ ಏರ್ಪಟ್ಟಿದೆ.

Karnataka Polls: ಮೈಸೂರಿನಲ್ಲಿ ರಂಗೇರುತ್ತಿರುವ ಚುನಾವಣಾ ಕಣ; ಜೆಡಿಎಸ್, ಕಾಂಗ್ರೆಸ್ ನಡುವೆ ಪೈಪೋಟಿ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Apr 15, 2023 | 3:16 PM

Share

ಮೈಸೂರು: ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Elections 2023) ಸಮೀಪಿಸುತ್ತಿದ್ದಂತೆಯೇ ಪ್ರಚಾರದ ಕಾವು ಏರುತ್ತಿದೆ. ಮೈಸೂರು (Mysuru) ಜಿಲ್ಲೆ ಶೇ 50ಕ್ಕೂ ಹೆಚ್ಚು ಕಡೆಗಳಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ನೇರ ಹಣಾಹಣಿ ಏರ್ಪಟ್ಟಿದೆ. ಚುನಾವಣೆಯಲ್ಲಿ ತಮ್ಮ ಬಲ ಹೆಚ್ಚಿಸಿಕೊಳ್ಳಲು ಕಾಂಗ್ರೆಸ್ ಮತ್ತು ಜೆಡಿಎಸ್ ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಪ್ರಸ್ತುತ ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ನಾಲ್ಕು ಮತ್ತು ಬಿಜೆಪಿ ಮೂರು ಶಾಸಕರನ್ನು ಹೊಂದಿವೆ. ಹಿಂದಿನ ಚುನಾವಣೆಯ ವೇಳೆ ಕಳೆದುಕೊಂಡ ಕ್ಷೇತ್ರಗಳನ್ನು ಮರಳಿ ಪಡೆಯುವ ಗುರಿಯನ್ನು ಕಾಂಗ್ರೆಸ್ ಹೊಂದಿದ್ದರೆ, ಜೆಡಿಎಸ್ ತನ್ನ ನೆಲೆಯನ್ನು ಮತ್ತಷ್ಟು ಬಲಪಡಿಸುವ ಗುರಿಯನ್ನು ಹೊಂದಿದೆ.

ಪಿರಿಯಾಪಟ್ಟಣ, ಕೆಆರ್ ನಗರ, ಹುಣಸೂರು, ಟಿ ನರಸೀಪುರ ಮತ್ತು ಎಚ್‌ಡಿ ಕೋಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನೇರ ಹಣಾಹಣಿಯಲ್ಲಿವೆ. 2008ರಿಂದ ಸತತ ಮೂರು ಚುನಾವಣೆಗಳನ್ನು ಗೆದ್ದು ಇತಿಹಾಸ ಸೃಷ್ಟಿಸಿರುವ ಜೆಡಿಎಸ್ ಮುಖಂಡ ಸಾರಾ ಮಹೇಶ್ ಅವರು ಪ್ರಸ್ತುತ ಕೆ.ಆರ್. ನಗರ ಕ್ಷೇತ್ರದತ್ತ ಗಮನ ಹರಿಸಿದ್ದಾರೆ. ಕೆ.ಆರ್.ನಗರದಿಂದ ಮೂರು ಬಾರಿ ಶಾಸಕರಾಗಿದ್ದ ಮಾಜಿ ಸಚಿವ ಎಸ್.ನಂಜಪ್ಪ ಅವರ ದಾಖಲೆಯನ್ನೂ ಮಹೇಶ್ ಸರಿಗಟ್ಟಿದ್ದಾರೆ. ಈ ಸ್ಥಾನವನ್ನು 2004 ರಿಂದ ಜೆಡಿಎಸ್ ಹೊಂದಿದೆ ಮತ್ತು ಪಕ್ಷವು ಮೊದಲ ರನ್ನರ್ ಅಪ್ ಆಗಿದ್ದಾಗ ಕಾಂಗ್ರೆಸ್ ವಿರುದ್ಧ ನಾಲ್ಕು ಬಾರಿ ಚುನಾವಣೆಯಲ್ಲಿ ಗೆದ್ದಿದೆ.

ಇದನ್ನೂ ಓದಿ: Karnataka Assembly Elections 2023: ಕಾಂಗ್ರೆಸ್​​​ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ: ಸಿದ್ದರಾಮಯ್ಯಗಿಲ್ಲ ಕೋಲಾರ ಟಿಕೆಟ್​

ಈ ಮಧ್ಯೆ, ಮೈಸೂರು ಜಿಲ್ಲಾ ಕಾಂಗ್ರೆಸ್ ಮುಖಂಡ ಬಿ.ಜೆ. ವಿಜಯಕುಮಾರ್ ಮಾತನಾಡಿ, ಕೆ.ಆರ್.ನಗರ ಭಾಗದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದಿದ್ದಾರೆ. ಈ ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆ ಇದೆ ಮತ್ತು ಮಹೇಶ್ ಬಗ್ಗೆ ಜನರಿಗೆ ಒಲವಿಲ್ಲ. ಮತದಾರರು ಕಾಂಗ್ರೆಸ್‌ಗೆ ಅವಕಾಶ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ.

ವರುಣಾದಲ್ಲಿ ಜಿದ್ದಾಜಿದ್ದಿಯ ಪೈಪೋಟಿ ನಿರೀಕ್ಷೆ

ಮೈಸೂರಿನ ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಿ ಸೋಮಣ್ಣ ಅವರನ್ನು ಕಣಕ್ಕಿಳಿಸಿದ ಬೆನ್ನಲ್ಲೇ ಚುನಾವಣಾ ಕಣ ರಂಗೇರಲಾರಂಭಿಸಿದೆ. ಜೆಡಿಎಸ್​ ಕೂಡ ಇದೀಗ ತನ್ನ ಕಾರ್ಯತಂತ್ರ ಬದಲಿಸಿದ್ದು, ವರುಣಾ ಕ್ಷೇತ್ರದ ಅಭ್ಯರ್ಥಿ ಬದಲಾವಣೆ ಮಾಡಿದೆ. ಅಭಿಷೇಕ್​ಗೆ ಕೊಕ್​ ನೀಡಿ ಭಾರತಿ ಶಂಕರ್​ಗೆ ಟಿಕೆಟ್​ ಘೋಷಣೆ ಮಾಡಿದೆ. ಈ ಮೊದಲು ಜೆಡಿಎಸ್​ ವರಿಷ್ಠರು ಅಭಿಷೇಕ್​ಗೆ ಟಿಕೆಟ್ ಘೋಷಿಸಿದ್ದರು. ಬದಲಾದ ಸನ್ನಿವೇಶದಲ್ಲಿ ಭಾರತಿ ಶಂಕರ್​ಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರಿನ ಕಡೂರಿನಲ್ಲಿಯೂ ಮೊದಲು ಧನಂಜಯ್​ಗೆ ಟಿಕೆಟ್ ಘೋಷಿಸಿದ್ದ ನಂತರ ಅವರ ಬದಲು ವೈಎಸ್​ವಿ ದತ್ತಾಗೆ ಟಿಕೆಟ್​ ನೀಡಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:13 pm, Sat, 15 April 23

Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!