AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Elections 2023: ಬಿಜೆಪಿ ಘೋಷಣೆ ಮಾಡಿರುವ ಅಭ್ಯರ್ಥಿಗಳ ವಿಶೇಷತೆಗಳಿವು

224 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಬಿಡುಗಡೆ ಮಾಡಿದೆ. ಈ ಬಾರಿ ಬಿಜೆಪಿಯ ಹಲವು ಹಿರಿಯ ನಾಯಕರಿಗೆ ಟಿಕೆಟ್​ ನಿರಾಕರಿಸಲಾಗಿದ್ದು, ಹಲವು ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ.

Karnataka Assembly Elections 2023: ಬಿಜೆಪಿ ಘೋಷಣೆ ಮಾಡಿರುವ ಅಭ್ಯರ್ಥಿಗಳ ವಿಶೇಷತೆಗಳಿವು
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Apr 20, 2023 | 5:05 PM

Share

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Assembly Elections 2023) ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮತ್ತೊಮ್ಮೆ ಅಧಿಕಾರಕ್ಕೆ ಬರಲು ತಂತ್ರ-ಪ್ರತಿತಂತ್ರಗಳನ್ನು ರೂಪಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಎಲ್ಲಾ 224 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಬಿಡುಗಡೆ ಮಾಡಿದೆ. ಈ ಬಾರಿ ಬಿಜೆಪಿಯ ಹಲವು ಹಿರಿಯ ನಾಯಕರಿಗೆ ಟಿಕೆಟ್​ ನಿರಾಕರಿಸಲಾಗಿದ್ದು, ಹಲವು ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ. ಪ್ರತಿಯೊಂದು ಕ್ಷೇತ್ರದ ಅಭ್ಯರ್ಥಿಗಳು ಆಯಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಿಜೆಪಿ ಮಾಡಿರುವ ಟಿಕೆಟ್​ ಹಂಚಿಕೆಯಲ್ಲಿ ಯಾವ ಜಾತಿಯವರಿಗೆ ಎಷ್ಟು ಟಿಕೆಟ್​ ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.

ಬಿಜೆಪಿ 224 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಅದರಲ್ಲಿ 12 ಮಹಿಳಾ ಆಭ್ಯರ್ಥಿಗಳಾಗಿದ್ದು, 212 ಪುರುಷ ಅಭ್ಯರ್ಥಿಗಳಾಗಿದ್ದಾರೆ. ಅದೇ ರೀತಿಯಾಗಿ ಜಾತಿ ಆಧಾರವಾಗಿ ವಿತರಣೆ ಮಾಡಿದ್ದು, ಸಾಮಾನ್ಯ ವರ್ಗ: 132, ಅಲ್ಪಸಂಖ್ಯಾತರು (ಜೈನ್​): 1, ಓಬಿಸಿ: 36, ಎಸ್ಸಿ; 37, ಎಸ್​ಟಿ: 18 ಟಿಕೆಟ್​ ಹಂಚಿಕೆ ಮಾಡಲಾಗಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಹಣಿಯಲು ವರುಣಾ ಅಖಾಡಕ್ಕಿಳಿದ ಬಿವೈ ವಿಜಯೇಂದ್ರ, ವಿ ಸೋಮಣ್ಣ ಪರ ಪ್ರಚಾರ

ಬಿಜೆಪಿ ಟಿಕೆಟ್​ ನೀಡಿರುವ 224 ಕ್ಷೇತ್ರಗಳ ಅಭ್ಯರ್ಥಿಗಳು ಪಡೆದುಕೊಂಡಿರುವ ಶಿಕ್ಷಣ ಹೀಗಿದೆ.     

  • ಡಾಕ್ಟರೇಟ್: 1
  • ಸ್ನಾತಕೋತ್ತರ ಪದವೀಧರರು: 37
  • ಪದವೀಧರ: 134
  • 12ನೇ ತರಗತಿ ತೇರ್ಗಡೆ: 26
  • 10ನೇ ತರಗತಿ ತೇರ್ಗಡೆ:  20
  • 8 ನೇ ಪಾಸ್: 4
  • 7 ನೇ ಪಾಸ್:  2

ವೃತ್ತಿವಾರು ವಿಂಗಡಣೆ:

  • ವಕೀಲ: 5
  • ಕೃಷಿಕ: 38
  • ಉದ್ಯಮಿ: 147
  • ಡಾಕ್ಟರ್​: 9
  • ಶಿಕ್ಷಣತಜ್ಞ: 3
  • ಸಿನಿಮಾ ರಂಗ: 1
  • ನಿವೃತ್ತ ಐಎಎಸ್​: 1
  • ಕೈಗಾರಿಕೋದ್ಯಮಿ: 1
  • ನಿವೃತ್ತ ಐಪಿಎಸ್​: 1
  • ನಿವೃತ್ತ ಸರ್ಕಾರಿ ನೌಕರ: 5
  • ಸಮಾಜ ಸೇವಕ: 13

ಇದನ್ನೂ ಓದಿ: Karnataka Assembly Elections 2023: ಚುನಾವಣೆಗೆ ಮತದಾರರು ಗಮನ ಸೆಳೆದ ವಿಷಯಗಳೇನು?

ಬಿಜೆಪಿ ಘೋಷಣೆ ಮಾಡಿರುವ ಟಿಕೆಟ್​​ ಹಂಚಿಕೆಯಲ್ಲಿ ಯಾವ ಜಾತಿಯವರಿಗೆ ಎಷ್ಟು ಟಿಕೆಟ್​ ನೀಡಲಾಗಿದೆ ಎಂಬ ವಿವರ ಹೀಗಿದೆ.

Caste

ಬಿಜೆಪಿ ಸದ್ಯ ಹಲವು ಹಿರಿಯ ನಾಯಕರಿಗೆ ಟಿಕೆಟ್​ ನಿರಾಕರಿಸಿದೆ. ಜೊತೆಗೆ ಹೊಸ ಅಭ್ಯರ್ಥಿಗಳಿಗೆ ಟಿಕೆಟ್​ ನೀಡುವ ಮೂಲಕ ಅವಕಾಶ ಮಾಡಿಕೊಟ್ಟಿದೆ. ಬಿಜೆಪಿ ಈ ಭಾರಿ 24 ಹಾಲಿ ಶಾಸಕರ ಬದಲಾವಣೆ ಮಾಡಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 5:04 pm, Thu, 20 April 23

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು