AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Elections 2023: ಬಿಜೆಪಿ ಘೋಷಣೆ ಮಾಡಿರುವ ಅಭ್ಯರ್ಥಿಗಳ ವಿಶೇಷತೆಗಳಿವು

224 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಬಿಡುಗಡೆ ಮಾಡಿದೆ. ಈ ಬಾರಿ ಬಿಜೆಪಿಯ ಹಲವು ಹಿರಿಯ ನಾಯಕರಿಗೆ ಟಿಕೆಟ್​ ನಿರಾಕರಿಸಲಾಗಿದ್ದು, ಹಲವು ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ.

Karnataka Assembly Elections 2023: ಬಿಜೆಪಿ ಘೋಷಣೆ ಮಾಡಿರುವ ಅಭ್ಯರ್ಥಿಗಳ ವಿಶೇಷತೆಗಳಿವು
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Apr 20, 2023 | 5:05 PM

Share

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Assembly Elections 2023) ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮತ್ತೊಮ್ಮೆ ಅಧಿಕಾರಕ್ಕೆ ಬರಲು ತಂತ್ರ-ಪ್ರತಿತಂತ್ರಗಳನ್ನು ರೂಪಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಎಲ್ಲಾ 224 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಬಿಡುಗಡೆ ಮಾಡಿದೆ. ಈ ಬಾರಿ ಬಿಜೆಪಿಯ ಹಲವು ಹಿರಿಯ ನಾಯಕರಿಗೆ ಟಿಕೆಟ್​ ನಿರಾಕರಿಸಲಾಗಿದ್ದು, ಹಲವು ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ. ಪ್ರತಿಯೊಂದು ಕ್ಷೇತ್ರದ ಅಭ್ಯರ್ಥಿಗಳು ಆಯಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಿಜೆಪಿ ಮಾಡಿರುವ ಟಿಕೆಟ್​ ಹಂಚಿಕೆಯಲ್ಲಿ ಯಾವ ಜಾತಿಯವರಿಗೆ ಎಷ್ಟು ಟಿಕೆಟ್​ ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.

ಬಿಜೆಪಿ 224 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಅದರಲ್ಲಿ 12 ಮಹಿಳಾ ಆಭ್ಯರ್ಥಿಗಳಾಗಿದ್ದು, 212 ಪುರುಷ ಅಭ್ಯರ್ಥಿಗಳಾಗಿದ್ದಾರೆ. ಅದೇ ರೀತಿಯಾಗಿ ಜಾತಿ ಆಧಾರವಾಗಿ ವಿತರಣೆ ಮಾಡಿದ್ದು, ಸಾಮಾನ್ಯ ವರ್ಗ: 132, ಅಲ್ಪಸಂಖ್ಯಾತರು (ಜೈನ್​): 1, ಓಬಿಸಿ: 36, ಎಸ್ಸಿ; 37, ಎಸ್​ಟಿ: 18 ಟಿಕೆಟ್​ ಹಂಚಿಕೆ ಮಾಡಲಾಗಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಹಣಿಯಲು ವರುಣಾ ಅಖಾಡಕ್ಕಿಳಿದ ಬಿವೈ ವಿಜಯೇಂದ್ರ, ವಿ ಸೋಮಣ್ಣ ಪರ ಪ್ರಚಾರ

ಬಿಜೆಪಿ ಟಿಕೆಟ್​ ನೀಡಿರುವ 224 ಕ್ಷೇತ್ರಗಳ ಅಭ್ಯರ್ಥಿಗಳು ಪಡೆದುಕೊಂಡಿರುವ ಶಿಕ್ಷಣ ಹೀಗಿದೆ.     

  • ಡಾಕ್ಟರೇಟ್: 1
  • ಸ್ನಾತಕೋತ್ತರ ಪದವೀಧರರು: 37
  • ಪದವೀಧರ: 134
  • 12ನೇ ತರಗತಿ ತೇರ್ಗಡೆ: 26
  • 10ನೇ ತರಗತಿ ತೇರ್ಗಡೆ:  20
  • 8 ನೇ ಪಾಸ್: 4
  • 7 ನೇ ಪಾಸ್:  2

ವೃತ್ತಿವಾರು ವಿಂಗಡಣೆ:

  • ವಕೀಲ: 5
  • ಕೃಷಿಕ: 38
  • ಉದ್ಯಮಿ: 147
  • ಡಾಕ್ಟರ್​: 9
  • ಶಿಕ್ಷಣತಜ್ಞ: 3
  • ಸಿನಿಮಾ ರಂಗ: 1
  • ನಿವೃತ್ತ ಐಎಎಸ್​: 1
  • ಕೈಗಾರಿಕೋದ್ಯಮಿ: 1
  • ನಿವೃತ್ತ ಐಪಿಎಸ್​: 1
  • ನಿವೃತ್ತ ಸರ್ಕಾರಿ ನೌಕರ: 5
  • ಸಮಾಜ ಸೇವಕ: 13

ಇದನ್ನೂ ಓದಿ: Karnataka Assembly Elections 2023: ಚುನಾವಣೆಗೆ ಮತದಾರರು ಗಮನ ಸೆಳೆದ ವಿಷಯಗಳೇನು?

ಬಿಜೆಪಿ ಘೋಷಣೆ ಮಾಡಿರುವ ಟಿಕೆಟ್​​ ಹಂಚಿಕೆಯಲ್ಲಿ ಯಾವ ಜಾತಿಯವರಿಗೆ ಎಷ್ಟು ಟಿಕೆಟ್​ ನೀಡಲಾಗಿದೆ ಎಂಬ ವಿವರ ಹೀಗಿದೆ.

Caste

ಬಿಜೆಪಿ ಸದ್ಯ ಹಲವು ಹಿರಿಯ ನಾಯಕರಿಗೆ ಟಿಕೆಟ್​ ನಿರಾಕರಿಸಿದೆ. ಜೊತೆಗೆ ಹೊಸ ಅಭ್ಯರ್ಥಿಗಳಿಗೆ ಟಿಕೆಟ್​ ನೀಡುವ ಮೂಲಕ ಅವಕಾಶ ಮಾಡಿಕೊಟ್ಟಿದೆ. ಬಿಜೆಪಿ ಈ ಭಾರಿ 24 ಹಾಲಿ ಶಾಸಕರ ಬದಲಾವಣೆ ಮಾಡಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 5:04 pm, Thu, 20 April 23

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ