AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Elections 2023: ಬಿಜೆಪಿ ಘೋಷಣೆ ಮಾಡಿರುವ ಅಭ್ಯರ್ಥಿಗಳ ವಿಶೇಷತೆಗಳಿವು

224 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಬಿಡುಗಡೆ ಮಾಡಿದೆ. ಈ ಬಾರಿ ಬಿಜೆಪಿಯ ಹಲವು ಹಿರಿಯ ನಾಯಕರಿಗೆ ಟಿಕೆಟ್​ ನಿರಾಕರಿಸಲಾಗಿದ್ದು, ಹಲವು ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ.

Karnataka Assembly Elections 2023: ಬಿಜೆಪಿ ಘೋಷಣೆ ಮಾಡಿರುವ ಅಭ್ಯರ್ಥಿಗಳ ವಿಶೇಷತೆಗಳಿವು
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Apr 20, 2023 | 5:05 PM

Share

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Assembly Elections 2023) ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮತ್ತೊಮ್ಮೆ ಅಧಿಕಾರಕ್ಕೆ ಬರಲು ತಂತ್ರ-ಪ್ರತಿತಂತ್ರಗಳನ್ನು ರೂಪಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಎಲ್ಲಾ 224 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಬಿಡುಗಡೆ ಮಾಡಿದೆ. ಈ ಬಾರಿ ಬಿಜೆಪಿಯ ಹಲವು ಹಿರಿಯ ನಾಯಕರಿಗೆ ಟಿಕೆಟ್​ ನಿರಾಕರಿಸಲಾಗಿದ್ದು, ಹಲವು ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ. ಪ್ರತಿಯೊಂದು ಕ್ಷೇತ್ರದ ಅಭ್ಯರ್ಥಿಗಳು ಆಯಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಿಜೆಪಿ ಮಾಡಿರುವ ಟಿಕೆಟ್​ ಹಂಚಿಕೆಯಲ್ಲಿ ಯಾವ ಜಾತಿಯವರಿಗೆ ಎಷ್ಟು ಟಿಕೆಟ್​ ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.

ಬಿಜೆಪಿ 224 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಅದರಲ್ಲಿ 12 ಮಹಿಳಾ ಆಭ್ಯರ್ಥಿಗಳಾಗಿದ್ದು, 212 ಪುರುಷ ಅಭ್ಯರ್ಥಿಗಳಾಗಿದ್ದಾರೆ. ಅದೇ ರೀತಿಯಾಗಿ ಜಾತಿ ಆಧಾರವಾಗಿ ವಿತರಣೆ ಮಾಡಿದ್ದು, ಸಾಮಾನ್ಯ ವರ್ಗ: 132, ಅಲ್ಪಸಂಖ್ಯಾತರು (ಜೈನ್​): 1, ಓಬಿಸಿ: 36, ಎಸ್ಸಿ; 37, ಎಸ್​ಟಿ: 18 ಟಿಕೆಟ್​ ಹಂಚಿಕೆ ಮಾಡಲಾಗಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಹಣಿಯಲು ವರುಣಾ ಅಖಾಡಕ್ಕಿಳಿದ ಬಿವೈ ವಿಜಯೇಂದ್ರ, ವಿ ಸೋಮಣ್ಣ ಪರ ಪ್ರಚಾರ

ಬಿಜೆಪಿ ಟಿಕೆಟ್​ ನೀಡಿರುವ 224 ಕ್ಷೇತ್ರಗಳ ಅಭ್ಯರ್ಥಿಗಳು ಪಡೆದುಕೊಂಡಿರುವ ಶಿಕ್ಷಣ ಹೀಗಿದೆ.     

  • ಡಾಕ್ಟರೇಟ್: 1
  • ಸ್ನಾತಕೋತ್ತರ ಪದವೀಧರರು: 37
  • ಪದವೀಧರ: 134
  • 12ನೇ ತರಗತಿ ತೇರ್ಗಡೆ: 26
  • 10ನೇ ತರಗತಿ ತೇರ್ಗಡೆ:  20
  • 8 ನೇ ಪಾಸ್: 4
  • 7 ನೇ ಪಾಸ್:  2

ವೃತ್ತಿವಾರು ವಿಂಗಡಣೆ:

  • ವಕೀಲ: 5
  • ಕೃಷಿಕ: 38
  • ಉದ್ಯಮಿ: 147
  • ಡಾಕ್ಟರ್​: 9
  • ಶಿಕ್ಷಣತಜ್ಞ: 3
  • ಸಿನಿಮಾ ರಂಗ: 1
  • ನಿವೃತ್ತ ಐಎಎಸ್​: 1
  • ಕೈಗಾರಿಕೋದ್ಯಮಿ: 1
  • ನಿವೃತ್ತ ಐಪಿಎಸ್​: 1
  • ನಿವೃತ್ತ ಸರ್ಕಾರಿ ನೌಕರ: 5
  • ಸಮಾಜ ಸೇವಕ: 13

ಇದನ್ನೂ ಓದಿ: Karnataka Assembly Elections 2023: ಚುನಾವಣೆಗೆ ಮತದಾರರು ಗಮನ ಸೆಳೆದ ವಿಷಯಗಳೇನು?

ಬಿಜೆಪಿ ಘೋಷಣೆ ಮಾಡಿರುವ ಟಿಕೆಟ್​​ ಹಂಚಿಕೆಯಲ್ಲಿ ಯಾವ ಜಾತಿಯವರಿಗೆ ಎಷ್ಟು ಟಿಕೆಟ್​ ನೀಡಲಾಗಿದೆ ಎಂಬ ವಿವರ ಹೀಗಿದೆ.

Caste

ಬಿಜೆಪಿ ಸದ್ಯ ಹಲವು ಹಿರಿಯ ನಾಯಕರಿಗೆ ಟಿಕೆಟ್​ ನಿರಾಕರಿಸಿದೆ. ಜೊತೆಗೆ ಹೊಸ ಅಭ್ಯರ್ಥಿಗಳಿಗೆ ಟಿಕೆಟ್​ ನೀಡುವ ಮೂಲಕ ಅವಕಾಶ ಮಾಡಿಕೊಟ್ಟಿದೆ. ಬಿಜೆಪಿ ಈ ಭಾರಿ 24 ಹಾಲಿ ಶಾಸಕರ ಬದಲಾವಣೆ ಮಾಡಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 5:04 pm, Thu, 20 April 23

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ