AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿಯಲ್ಲಿ ಹದ್ದಿನ ಕಣ್ಣು: ಬೆಳಗಾವಿ ಕೊಗನೊಳ್ಳಿ ಚೆಕ್​​ಪೋಸ್ಟ್​​​ ಬಳಿ 1.5 ಕೋಟಿ ರೂ. ಜಪ್ತಿ

ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್​​ಪೋಸ್ಟ್​​​ ಬಳಿ ಸಾವಿರ ಅಲ್ಲಾ, ಲಕ್ಷ ಅಲ್ಲಾ ಬರೋಬ್ಬರಿ 1.5 ಕೋಟಿ ಹಣ ವಶಕ್ಕೆ ಪಡೆಯಲಾಗಿದೆ.

ಗಡಿಯಲ್ಲಿ ಹದ್ದಿನ ಕಣ್ಣು: ಬೆಳಗಾವಿ ಕೊಗನೊಳ್ಳಿ ಚೆಕ್​​ಪೋಸ್ಟ್​​​ ಬಳಿ 1.5 ಕೋಟಿ ರೂ. ಜಪ್ತಿ
ನಿಪ್ಪಾಣಿ ಪೊಲೀಸರಿಂದ ಹಣ ಜಪ್ತಿ
ಆಯೇಷಾ ಬಾನು
|

Updated on:Apr 06, 2023 | 8:51 AM

Share

ಬೆಳಗಾವಿ: ಚುನಾವಣೆ ದಿನಾಂಕ ಘೋಷಣೆಯಾಗಿದ್ದೇ ತಡ ಮತದಾರರನ್ನು ಸೆಳೆಯಲು ಟಿಕೆಟ್ ಆಕಾಂಕ್ಷಿಗಳು ನಾನಾ ಆಮೀಷವೊಡ್ಡುತ್ತಿದ್ದು ಪ್ರತಿ ದಿನ ಅಧಿಕಾರಿಗಳು ಹಣ, ಆಭರಣ, ಕುಕ್ಕರ್, ಮದ್ಯ ಹೀಗೆ ಅನೇಕ ವಸ್ತುಗಳನ್ನು ಜಪ್ತಿ ಮಾಡುತ್ತಿದ್ದಾರೆ. ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್​​ಪೋಸ್ಟ್​​​ ಬಳಿ ಸಾವಿರ ಅಲ್ಲಾ, ಲಕ್ಷ ಅಲ್ಲಾ ಬರೋಬ್ಬರಿ 1.5 ಕೋಟಿ ಹಣ ವಶಕ್ಕೆ ಪಡೆಯಲಾಗಿದೆ. ಮುಂಬೈನಿಂದ ಬೆಂಗಳೂರಿಗೆ ತೆರಳಿದ್ದ ಖಾಸಗಿ ಬಸನ್ನು ತಪಾಸಣೆ ಮಾಡುವ ವೇಳೆ ಪ್ರಯಾಣಿಕನ ಬಳಿ ಇದ್ದ ದಾಖಲೆ ಇಲ್ಲದ 1.5 ಕೋಟಿ ಹಣ ವಶಕ್ಕೆ ಪಡೆಯಲಾಗಿದೆ. ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಐಟಿ ಅಧಿಕಾರಿಗಳಿಗೆ ಕೇಸ್ ಹಸ್ತಾಂತರಿಸಿದ್ದಾರೆ. ಇನ್ನು ನಿನ್ನೆ ಹಿರೇಬಾಗೇವಾಡಿ ಚೆಕ್ ಪೋಸ್ಟ್ ನಲ್ಲಿ ಖಾಸಗಿ ಬಸ್‌ನಲ್ಲಿ 2ಕೋಟಿ ರೂಪಾಯಿ ಪತ್ತೆಯಾಗಿತ್ತು.

ತುಮಕೂರಿನಲ್ಲಿ ದಾಖಲೆ ಇಲ್ಲದ 20.50 ಲಕ್ಷ ಹಣ ಜಪ್ತಿ

ತುಮಕೂರು ಜಿಲ್ಲೆಯಲ್ಲಿ ದಾಖಲೆ ಇಲ್ಲದ ಲಕ್ಷಾಂತರ ಹಣ ಜಪ್ತಿ ಮಾಡಲಾಗಿದೆ. ತಿಪಟೂರು ನಗರದಲ್ಲಿ ಸಿಬ್ಬಂದಿ ಇಲ್ಲದೆ ಎಟಿಎಂ ವಾಹನದಲ್ಲಿ ಅಕ್ರಮವಾಗಿ ಹಣ ಸಾಗಿಸಲಾಗುತ್ತಿದ್ದು ದಾಖಲೆ ಇಲ್ಲದ 19 ಲಕ್ಷ ಹಣ ಮತ್ತು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ತಿಪಟೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನು ಕೊರಟಗೆರೆ ತಾಲೂಕಿನ ಕಾಟೇನಹಳ್ಳಿ ಚೆಕ್​​ಪೋಸ್ಟ್​​​ ಬಳಿ ಕಾರಿನಲ್ಲಿದ್ದ ₹1.50 ಲಕ್ಷ ಜಪ್ತಿ ಮಾಡಲಾಗಿದೆ. ಹಣ ಸಾಗಿಸುತ್ತಿದ್ದ ರುದ್ರೇಶ್ ಎಂಬಾತನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಗದಗ ಜಿಲ್ಲೆಯಲ್ಲಿ ಮತ್ತೆ ಕಂತೆ ಕಂತೆ ಹಣ ಪತ್ತೆ: 1 ಲಕ್ಷಕ್ಕೂ ಹೆಚ್ಚು ಹಣ ಸೀಜ್

ಜೆ.ಕೆ.ಪುರಂ ಚೆಕ್​ಪೋಸ್ಟ್​ ಬಳಿ 1.64 ಲಕ್ಷ ಹಣ ಜಪ್ತಿ

ಕೋಲಾರ: ಕೆಜಿಎಫ್​ ತಾಲೂಕಿನ ಜೆ.ಕೆ.ಪುರಂ ಚೆಕ್​ಪೋಸ್ಟ್​ ಬಳಿ ದಾಖಲೆ ಇಲ್ಲದ 1.64 ಲಕ್ಷ ಹಣ ಜಪ್ತಿ ಮಾಡಲಾಗಿದೆ. ಮಿನಿ ಟೆಂಪೋದಲ್ಲಿ ಹಣ ಸಾಗಿಸುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕ್ಯಾಸಂಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:51 am, Thu, 6 April 23

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್