AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿಯಲ್ಲಿ ಹದ್ದಿನ ಕಣ್ಣು: ಬೆಳಗಾವಿ ಕೊಗನೊಳ್ಳಿ ಚೆಕ್​​ಪೋಸ್ಟ್​​​ ಬಳಿ 1.5 ಕೋಟಿ ರೂ. ಜಪ್ತಿ

ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್​​ಪೋಸ್ಟ್​​​ ಬಳಿ ಸಾವಿರ ಅಲ್ಲಾ, ಲಕ್ಷ ಅಲ್ಲಾ ಬರೋಬ್ಬರಿ 1.5 ಕೋಟಿ ಹಣ ವಶಕ್ಕೆ ಪಡೆಯಲಾಗಿದೆ.

ಗಡಿಯಲ್ಲಿ ಹದ್ದಿನ ಕಣ್ಣು: ಬೆಳಗಾವಿ ಕೊಗನೊಳ್ಳಿ ಚೆಕ್​​ಪೋಸ್ಟ್​​​ ಬಳಿ 1.5 ಕೋಟಿ ರೂ. ಜಪ್ತಿ
ನಿಪ್ಪಾಣಿ ಪೊಲೀಸರಿಂದ ಹಣ ಜಪ್ತಿ
ಆಯೇಷಾ ಬಾನು
|

Updated on:Apr 06, 2023 | 8:51 AM

Share

ಬೆಳಗಾವಿ: ಚುನಾವಣೆ ದಿನಾಂಕ ಘೋಷಣೆಯಾಗಿದ್ದೇ ತಡ ಮತದಾರರನ್ನು ಸೆಳೆಯಲು ಟಿಕೆಟ್ ಆಕಾಂಕ್ಷಿಗಳು ನಾನಾ ಆಮೀಷವೊಡ್ಡುತ್ತಿದ್ದು ಪ್ರತಿ ದಿನ ಅಧಿಕಾರಿಗಳು ಹಣ, ಆಭರಣ, ಕುಕ್ಕರ್, ಮದ್ಯ ಹೀಗೆ ಅನೇಕ ವಸ್ತುಗಳನ್ನು ಜಪ್ತಿ ಮಾಡುತ್ತಿದ್ದಾರೆ. ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್​​ಪೋಸ್ಟ್​​​ ಬಳಿ ಸಾವಿರ ಅಲ್ಲಾ, ಲಕ್ಷ ಅಲ್ಲಾ ಬರೋಬ್ಬರಿ 1.5 ಕೋಟಿ ಹಣ ವಶಕ್ಕೆ ಪಡೆಯಲಾಗಿದೆ. ಮುಂಬೈನಿಂದ ಬೆಂಗಳೂರಿಗೆ ತೆರಳಿದ್ದ ಖಾಸಗಿ ಬಸನ್ನು ತಪಾಸಣೆ ಮಾಡುವ ವೇಳೆ ಪ್ರಯಾಣಿಕನ ಬಳಿ ಇದ್ದ ದಾಖಲೆ ಇಲ್ಲದ 1.5 ಕೋಟಿ ಹಣ ವಶಕ್ಕೆ ಪಡೆಯಲಾಗಿದೆ. ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಐಟಿ ಅಧಿಕಾರಿಗಳಿಗೆ ಕೇಸ್ ಹಸ್ತಾಂತರಿಸಿದ್ದಾರೆ. ಇನ್ನು ನಿನ್ನೆ ಹಿರೇಬಾಗೇವಾಡಿ ಚೆಕ್ ಪೋಸ್ಟ್ ನಲ್ಲಿ ಖಾಸಗಿ ಬಸ್‌ನಲ್ಲಿ 2ಕೋಟಿ ರೂಪಾಯಿ ಪತ್ತೆಯಾಗಿತ್ತು.

ತುಮಕೂರಿನಲ್ಲಿ ದಾಖಲೆ ಇಲ್ಲದ 20.50 ಲಕ್ಷ ಹಣ ಜಪ್ತಿ

ತುಮಕೂರು ಜಿಲ್ಲೆಯಲ್ಲಿ ದಾಖಲೆ ಇಲ್ಲದ ಲಕ್ಷಾಂತರ ಹಣ ಜಪ್ತಿ ಮಾಡಲಾಗಿದೆ. ತಿಪಟೂರು ನಗರದಲ್ಲಿ ಸಿಬ್ಬಂದಿ ಇಲ್ಲದೆ ಎಟಿಎಂ ವಾಹನದಲ್ಲಿ ಅಕ್ರಮವಾಗಿ ಹಣ ಸಾಗಿಸಲಾಗುತ್ತಿದ್ದು ದಾಖಲೆ ಇಲ್ಲದ 19 ಲಕ್ಷ ಹಣ ಮತ್ತು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ತಿಪಟೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನು ಕೊರಟಗೆರೆ ತಾಲೂಕಿನ ಕಾಟೇನಹಳ್ಳಿ ಚೆಕ್​​ಪೋಸ್ಟ್​​​ ಬಳಿ ಕಾರಿನಲ್ಲಿದ್ದ ₹1.50 ಲಕ್ಷ ಜಪ್ತಿ ಮಾಡಲಾಗಿದೆ. ಹಣ ಸಾಗಿಸುತ್ತಿದ್ದ ರುದ್ರೇಶ್ ಎಂಬಾತನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಗದಗ ಜಿಲ್ಲೆಯಲ್ಲಿ ಮತ್ತೆ ಕಂತೆ ಕಂತೆ ಹಣ ಪತ್ತೆ: 1 ಲಕ್ಷಕ್ಕೂ ಹೆಚ್ಚು ಹಣ ಸೀಜ್

ಜೆ.ಕೆ.ಪುರಂ ಚೆಕ್​ಪೋಸ್ಟ್​ ಬಳಿ 1.64 ಲಕ್ಷ ಹಣ ಜಪ್ತಿ

ಕೋಲಾರ: ಕೆಜಿಎಫ್​ ತಾಲೂಕಿನ ಜೆ.ಕೆ.ಪುರಂ ಚೆಕ್​ಪೋಸ್ಟ್​ ಬಳಿ ದಾಖಲೆ ಇಲ್ಲದ 1.64 ಲಕ್ಷ ಹಣ ಜಪ್ತಿ ಮಾಡಲಾಗಿದೆ. ಮಿನಿ ಟೆಂಪೋದಲ್ಲಿ ಹಣ ಸಾಗಿಸುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕ್ಯಾಸಂಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:51 am, Thu, 6 April 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ