AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದ ಕಾಂಗ್ರೆಸ್: ಇಂದಿನಿಂದ ಜಿಲ್ಲಾವಾರು ಸರಣಿ ಸಭೆ ಆರಂಭ

ಮುಂದಿನ ವಿಧಾನಸಭಾ ಚುನಾವಣೆ ವೇಳೆ ಅನುಸರಿಸಬೇಕಾದ ತಂತ್ರಗಳ ಕುರಿತು ಸಭೆಯಲ್ಲಿ ಆಯಾ ಜಿಲ್ಲೆಗಳ ನಾಯಕರು, ಅಧ್ಯಕ್ಷರ ಜೊತೆ ಚರ್ಚೆ ನಡೆಯಲಿದೆ.

ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದ ಕಾಂಗ್ರೆಸ್: ಇಂದಿನಿಂದ ಜಿಲ್ಲಾವಾರು ಸರಣಿ ಸಭೆ ಆರಂಭ
ಸಿದ್ದರಾಮಯ್ಯ, ಡಿಕೆ ಶಿವಕುಮಾರ್
TV9 Web
| Edited By: |

Updated on: Nov 04, 2022 | 12:37 PM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯು ಕಾಂಗ್ರೆಸ್​ ಮತ್ತು ಬಿಜೆಪಿಗೆ ಹಲವು ಕಾರಣಗಳಿಂದ ಮುಖ್ಯವಾಗಿದೆ. ಭಾರತದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಸಾಧ್ಯತೆಯಿರುವ ಕೆಲವೇ ರಾಜ್ಯಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಮತ್ತೊಂದೆಡೆ ದಕ್ಷಿಣ ಭಾರತದಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿಗೆ ಇರುವ ಏಕೈಕ ಆಸರೆ ಕರ್ನಾಟಕವೇ ಆಗಿದೆ. ಹೀಗಾಗಿ ಎರಡೂ ಪಕ್ಷಗಳ ನಡುವೆ ಜಿದ್ದಾಜಿದ್ದಿ ಹೋರಾಟ ಆರಂಭವಾಗಿದ್ದು, ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ಸಂಘಟನೆ ಚುರುಕುಗೊಂಡಿದೆ.

ಪ್ರತಿ ಬಾರಿ ಟಿಕೆಟ್ ಹಂಚಿಕೆಯಲ್ಲಿ ಗೊಂದಲ ಮಾಡಿಕೊಳ್ಳುತ್ತಿದ್ದ ಕಾಂಗ್ರೆಸ್ ಈ ಬಾರಿ ಸ್ವಲ್ಪ ಬೇಗನೇ ಎಚ್ಚೆತ್ತುಕೊಂಡಿದೆ. ಸಂಘಟನೆ ಬಲಗೊಳಿಸುವ ಉದ್ದೇಶದಿಂದ ಇಂದಿನಿಂದ (ನ 4) ಜಿಲ್ಲಾವಾರು ಸರಣಿ ಸಭೆಗಳನ್ನು ಕಾಂಗ್ರೆಸ್ ಆಯೋಜಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಏರ್ ಪೋರ್ಟ್ ರಸ್ತೆಯ ಖಾಸಗಿ ಹೋಟೆಲ್​ನಲ್ಲಿ ಸಭೆಗಳನ್ನು ನಿಗದಿಪಡಿಸಲಾಗಿದೆ. ಇಂದು ಕೋಲಾರ, ಹಾವೇರಿ, ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ನಾಯಕರನ್ನು ಸಭೆಗೆ ಆಹ್ವಾನಿಸಲಾಗಿದೆ.

ನಾಳೆ (ನ 5) ಹಾಸನ, ದಕ್ಷಿಣ ಕನ್ನಡ, ಬೆಳಗಾವಿ ಜಿಲ್ಲೆಗಳ ನಾಯಕರನ್ನು ಸಭೆಗೆ ಆಹ್ವಾನಿಸಲಾಗಿದೆ. ನಾಡಿದ್ದು (ನ 8-9) ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ರಾಯಚೂರು, ವಿಜಯಪುರ, ತುಮಕೂರು ಸೇರಿದಂತೆ ಹಲ ಜಿಲ್ಲೆಗಳ ಅಧ್ಯಕ್ಷರು, ಸ್ಥಳೀಯ ನಾಯಕರ ಜೊತೆಗೆ ವರಿಷ್ಠರು ಸಭೆ ನಡೆಸಲಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆ ವೇಳೆ ಅನುಸರಿಸಬೇಕಾದ ತಂತ್ರಗಳ ಕುರಿತು ಸಭೆಯಲ್ಲಿ ಆಯಾ ಜಿಲ್ಲೆಗಳ ನಾಯಕರು, ಅಧ್ಯಕ್ಷರ ಜೊತೆ ಚರ್ಚೆ ನಡೆಯಲಿದೆ. ಯಾರಿಗೆ ಟಿಕೆಟ್ ಕೊಡಬಹುದು? ಜಿಲ್ಲೆಯಲ್ಲಿ ಪಕ್ಷದ ಪರಿಸ್ಥಿತಿ ಹೇಗಿದೆ? ಜಿಲ್ಲೆಗಳಲ್ಲಿನ ಗೊಂದಲಗಳನ್ನು ಹೇಗೆ ಪರಿಹರಿಸಿಕೊಳ್ಳಬಹುದು? ಒಗ್ಗೂಡಿ ಪಕ್ಷದ ಕೆಲಸ ಮಾಡುವುದೂ ಸೇರಿದಂತೆ ಹಲವು ವಿಚಾರಗಳ ಬಗ್ಗೆ ನಾಯಕರು ಸಮಾಲೋಚನೆ ನಡೆಸಲಿದ್ದಾರೆ.

Follow Us
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?