AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಬಿಜೆಪಿ ಈವರೆಗೆ ಖಾತೆ ತೆರೆಯದ ಸಿಂಧನೂರಿನಲ್ಲಿ ಪ್ರಧಾನಿ ಮೋದಿ ಮೇ 2ರಂದು ಬೃಹತ್ ಸಮಾವೇಶ

ಮೇ 2ರಂದು‌ ಮೋದಿ ಅವರು ರಾಯಚೂರಿಗೆ ಆಗಮಿಸಲಿದ್ದು, ಸಿಂಧನೂರು ಕ್ಷೇತ್ರದಲ್ಲಿ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ರಾಯಚೂರು: ಬಿಜೆಪಿ ಈವರೆಗೆ ಖಾತೆ ತೆರೆಯದ ಸಿಂಧನೂರಿನಲ್ಲಿ ಪ್ರಧಾನಿ ಮೋದಿ ಮೇ 2ರಂದು ಬೃಹತ್ ಸಮಾವೇಶ
ನರೇಂದ್ರ ಮೋದಿ
ಗಣಪತಿ ಶರ್ಮಾ
|

Updated on: Apr 24, 2023 | 2:58 PM

Share

ರಾಯಚೂರು: ವಿಧಾನಸಭೆ ಚುನಾವಣೆ (Karnataka Assembly Elections 2023) ಪ್ರಚಾರದ ಭರಾಟೆ ಜೋರಾಗಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಕೇಂದ್ರ ನಾಯಕತ್ವದ ವರ್ಚಸ್ಸನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಂಡು ರಾಜ್ಯದಲ್ಲಿ ಮರಳಿ ಅಧಿಕಾರದ ಗದ್ದುಗೆಗೆ ಏರಬೇಕೆಂಬ ಹಂಬಲದಲ್ಲಿ ಬಿಜೆಪಿ ಇದೆ. ಹೀಗಾಗಿ ಮೋದಿ ಸೇರಿದಂತೆ ಕೇಂದ್ರ ನಾಯಕರು ರಾಜ್ಯದಲ್ಲಿ ಭರ್ಜರಿ ಪ್ರಚಾರಕ್ಕೆ ಮುಂದಾಗಿದ್ದಾರೆ. ಬಿಜೆಪಿ ಈವರೆಗೆ ಖಾತೆ ತೆರೆಯದ ಕ್ಷೇತ್ರದಲ್ಲೇ ಮೋದಿ ನೇತೃತ್ವದಲ್ಲಿ ಬೃಹತ್ ಸಮಾವೇಶ ನಡೆಸಲು ಬಿಜೆಪಿ ಮುಂದಾಗಿದೆ. ಮೇ 2ರಂದು‌ ಮೋದಿ ಅವರು ರಾಯಚೂರಿಗೆ ಆಗಮಿಸಲಿದ್ದು, ಸಿಂಧನೂರು ಕ್ಷೇತ್ರದಲ್ಲಿ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಿಂಧನೂರು ತಾಲ್ಲೂಕು ಹೊಸಳ್ಳಿ ಗ್ರಾಮದ ಹೊರವಲಯದಲ್ಲಿ ಸಮಾವೇಶ ನಡೆಯಲಿದೆ. ಒಟ್ಟು 20 ಎಕರೆ ಪ್ರದೇಶದಲ್ಲಿ ಸಮಾವೇಶ ನಡೆಯಲಿದೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ. ಸಮಾವೇಶದ ಸ್ಥಳದಲ್ಲಿ ಸೋಮವಾರ ಭೂಮಿ ಪೂಜೆ ನೆರೆವೇರಿಸಲಾಗಿದೆ.

ರಾಯಚೂರು ಗಡಿಯ ಕೊಪ್ಪಳ, ಬಳ್ಳಾರಿ ಭಾಗದ ಕ್ಷೇತ್ರಗಳಿಗೂ ಅನಕೂಲವಾಗುವ ನಿಟ್ಟಿನಲ್ಲಿ ಸಮಾವೇಶದ ಸ್ಥಳ ನಿಗದಿಪಡಿಸಲಾಗಿದೆ. ಸುಮಾರು 5-6 ಲಕ್ಷ ಜನರನ್ನು ಸೇರಿಸುವ ಗುರಿ ಹೊಂದಲಾಗಿದೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.

ಈ ಹಿಂದಿನ ನಾಲ್ಕು ಚುನಾವಣೆಗಳಲ್ಲಿ ಒಂದು ಬಾರಿ ಕಾಂಗ್ರೆಸ್‌ ಗೆದ್ದರೆ ಮತ್ತೂಂದು ಬಾರಿ ಜೆಡಿಎಸ್‌ ಗೆದ್ದುಕೊಂಡು ಬಂದಿರುವುದು ಸಿಂಧನೂರು ಕ್ಷೇತ್ರ ವಿಶೇಷ. ಈ ಲೆಕ್ಕಾಚಾರದ ಪ್ರಕಾರ ಈ ಬಾರಿ ಕಾಂಗ್ರೆಸ್ ಗೆಲುವು ಸಾಧಿಸಬೇಕು. ಆದರೆ ಸದ್ಯದ ರಾಜಕೀಯ ಚಿತ್ರಣ ಬದಲಾಗಿದ್ದು, ಬಿಜೆಪಿಯೂ ಪ್ರಬಲ ಪೈಪೋಟಿ ಒಡ್ಡುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ.

ಅಧಿಕೃತಗೊಳ್ಳದ ಸುದೀಪ್, ಯೋಗಿ ವೇಳಾಪಟ್ಟಿ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ನಟ ಸುದೀಪ್ ಅವರ ಚುನಾವಣಾ ಪ್ರಚಾರದ ವೇಳಾಪಟ್ಟಿ ಇನ್ನೂ ಅಧಿಕೃತಗೊಂಡಿಲ್ಲ. ಜಿಲ್ಲೆಯ ನಾಲ್ಕು ಎಸ್​​ಟಿ ಮೀಸಲು ಕ್ಷೇತ್ರಗಳಲ್ಲಿ ಸುದೀಪ್ ಪ್ರಚಾರ ಕಾರ್ಯಕ್ರಮ ಆಯೋಜಿಸುವ ಬಗ್ಗೆ ಪ್ರಸ್ತಾವನೆ ಇದೆ. ಈ ಬಗ್ಗೆ ನಟ ಸುದೀಪ್ ಹಾಗೂ ರಾಜ್ಯ ನಾಯಕರ ಜೊತೆ ಚರ್ಚೆ ಮಾಡಲಾಗಿದೆ. ಮಾನ್ವಿ ಕ್ಷೇತ್ರದಲ್ಲಿ ನಟ ಸುದೀಪ್ ನೇತೃತ್ವದ ಬೃಹತ್ ಕಾರ್ಯಕ್ರಮ ನಡೆಸುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಏಪ್ರಿಲ್​ 29ರಂದು ಬೆಳಗಾವಿಯ ಕುಡಚಿಗೆ ಮೋದಿ

ಏಪ್ರಿಲ್ 29ರಂದು ಬೆಳಗಾವಿ ಜಿಲ್ಲೆಯ ಕುಡಚಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಹೇಳಿದ್ದಾರೆ. ರಾಜ್ಯದಲ್ಲಿ ಈ ಬಾರಿ ಬಿಜೆಪಿ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲಿದೆ. ಎರಡು ಬಾರಿ ನಾವು ಸ್ವಂತ ಬಲದಿಂದ ಅಧಿಕಾರಕ್ಕೆ ಬರಲಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಏಪ್ರಿಲ್​ 29ರಂದು ಕುಡಚಿಗೆ ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್​ ಆಗಮನ: ಪ್ರಹ್ಲಾದ್​ ಜೋಶಿ

ಚುನಾವಣೆಗೆ ನಾಮಪತ್ರ ವಾಪಸ್ ಪಡೆಯುವ ಅವಧಿ ಇಂದಿಗೆ (ಸೋಮವಾರ) ಮುಕ್ತಾಯಗೊಳ್ಳುತ್ತಿದ್ದು, ಇನ್ನು ಪ್ರಚಾರದ ತೀವ್ರತೆ ಹೆಚ್ಚಿಸಲು ಬಿಜೆಪಿ ಮುಂದಾಗಿದೆ. ಮೋದಿ ಅವರನ್ನು ಹಲವು ಬಾರಿ ರಾಜ್ಯಕ್ಕೆ ಕರೆಸಿ ಪ್ರಚಾರ ಸಮಾವೇಶಗಳನ್ನು ಆಯೋಜಿಸುವುದಾಗಿ ಬಿಜೆಪಿ ತಿಳಿಸಿದೆ. ಈಗಾಗಲೇ ಸುಮಾರು 8 ಬಾರಿ ಪ್ರಧಾನಿಯವರು ರಾಜ್ಯಕ್ಕೆ ಆಗಮಿಸಿ ಹಲವು ಸರ್ಕಾರಿ ಹಾಗೂ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ