AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​​ಡಿ ರೇವಣ್ಣ ಭೇಟಿಯಾದ ಸ್ವರೂಪ್, ಕುತೂಹಲ ಮೂಡಿಸಿದ ಹಾಸನ ಟಿಕೆಟ್ ಆಕಾಂಕ್ಷಿಗಳ ರಹಸ್ಯ ಮಾತುಕತೆ

ಹಾಸನ ಜೆಡಿಎಸ್​ ಟಿಕೆಟ್​​ಗಾಗಿ ಪೈಪೋಟಿ ನಡೆಸಿರುವ ಹೆಚ್​ಡಿ ರೇವಣ್ಣ ಅವರನ್ನು ಟಿಕೆಟ್ ಆಕಾಂಕ್ಷಿ ಸ್ವರೂಪ್ ಪ್ರಕಾಶ್ ಭೇಟಿ ಮಾಡಿ ರಹಸ್ಯ ಮಾತುಕತೆ ನಡೆಸಿದ್ದಾರೆ. ಇದು ಜಿಲ್ಲಾ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಹೆಚ್​​ಡಿ ರೇವಣ್ಣ ಭೇಟಿಯಾದ ಸ್ವರೂಪ್, ಕುತೂಹಲ ಮೂಡಿಸಿದ ಹಾಸನ ಟಿಕೆಟ್ ಆಕಾಂಕ್ಷಿಗಳ ರಹಸ್ಯ ಮಾತುಕತೆ
ಸ್ವರೂಪ್, ಹೆಚ್​​.ಡಿ.ರೇವಣ್ಣ
ರಮೇಶ್ ಬಿ. ಜವಳಗೇರಾ
| Edited By: |

Updated on:Mar 08, 2023 | 4:57 PM

Share

ಹಾಸನ: ಹಾಸನ ಜೆಡಿಎಸ್​ ಟಿಕೆಟ್​​ಗಾಗಿ (Hassan JDS Ticket) ಹೆಚ್​ಡಿ ರೇವಣ್ಣ(HD Revanna) ಹಾಗೂ ಕುಮಾರಸ್ವಾಮಿ ಮಧ್ಯೆ ಮುಸುಕಿನ ಗುದ್ದಾಟ ನಡೆದಿದೆ. ಈ ಬಾರಿ ಹಾಸನ ವಿಧಾನಸಭೆ ಟಿಕೆಟ್ (Hassan JDS Ticket)​​ ಸ್ವರೂಪ್ ಅವರಿಗೆ ಕೊಡಿಸಲು ಹೆಚ್​​ಡಿಕೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇತ್ತ ರೇವಣ್ಣ ಕುಟುಂಬ ಸಹ ಟಿಕೆಟ್​​ಗಾಗಿ ಪಟ್ಟು ಹಿಡಿದಿದೆ. ಇದರ ಮಧ್ಯೆ ಇದೀಗ ಟಿಕೆಟ್​ ಆಕಾಂಕ್ಷಿಗಳಾದ ಎಚ್.ಪಿ.ಸ್ವರೂಪ್‌ ಪ್ರಕಾಶ್(Swaroop Prakash) ಹಾಗೂ ಹೆಚ್​ಡಿ ರೇವಣ್ಣ ಭೇಟಿಯಾಗಿದ್ದು, ರಹಸ್ಯ ಮಾತುಕತೆ ನಡೆಸಿದ್ದಾರೆ. ಇದು ಹಾಸನ ಜಿಲ್ಲಾ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ಇದನ್ನೂ ಓದಿ: ಮಾರ್ಚ್ 10 ರಿಂದ ಹಾಸನ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆ ಆರಂಭ: ಹೆಚ್​. ಡಿ ರೇವಣ್ಣ

ಇಂದು ಹಾಸನದಲ್ಲಿ H.D.ರೇವಣ್ಣ ಭೇಟಿಯಾದ ಟಿಕೆಟ್ ಆಕಾಂಕ್ಷಿ ಸ್ವರೂಪ್, ಅರ್ಧಗಂಟೆಗೂ ಹೆಚ್ಚು ಮಾತುಕತೆ ನಡೆಸಿದ್ದಾರೆ. ಕಳೆದ ಒಂದು ತಿಂಗಳಿಂದ ಹಾಸನ ಟಿಕೆಟ್​ ಚರ್ಚೆ ನಡುವೆ ಮೊದಲ ಬಾರಿಗೆ ಸ್ವರೂಪ್ ಹಾಗೂ ರೇವಣ್ಣ ಭೇಟಿಯಾಗಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ನಾಳೆಯಿಂದ(ಮಾ.10) ಹಾಸನ ಜಿಲ್ಲೆಯಲ್ಲಿ ಜೆಡಿಎಸ್​ ಪಂಚರತ್ನ ರಥಯಾತ್ರೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಥಯಾತ್ರೆ ಯಶಸ್ವಿಗಾಗಿ ಎಲ್ಲರನ್ನು ಒಗ್ಗೂಡಿಸಲು ರೇವಣ್ಣ ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.

ಇನ್ನು ರೇವಣ್ಣ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವರೂಪ್, ರೇವಣ್ಣ ಸಾಹೇಬರನ್ನು ಭೇಟಿಯಾಗಿ ವಾರ, ಹತ್ತು ದಿನ ಆಗಿತ್ತು. ಹೊಸದು ಏನಿಲ್ಲ, ಸಾಹೇಬ್ರು ನಮ್ಮ ಪಕ್ಷದ ವರಿಷ್ಠರು, ನಾಯಕರು ಜನರಲ್ ಆಗಿ ಭೇಟಿ ಮಾಡಲು ಬಂದೆ. ಪಂಚರತ್ನ ಯಾತ್ರೆ ಬಗ್ಗೆ ಕುಳಿತು ಮಾತನಾಡೋಣ ಅಂತ ಹೇಳಿದ್ದಾರೆ ಅಷ್ಟೇ. ಟಿಕೆಟ್ ವಿಚಾರ ಮಾತನಾಡಿಲ್ಲ. ಮಾತನಾಡೋಣ ಎಂದು ಹೇಳಿದ್ದಾರೆ. ದೊಡ್ಡವರೆಲ್ಲ ಕುಳಿತುಕೊಂಡು ತೀರ್ಮಾನ ಮಾಡೋಣ ಎಂದಿದ್ದಾರೆ ಎಂದು ಸ್ಪಷ್ಟಪಡಿಸಿದರು.

ದೇವೇಗೌಡರ ಅಂಗಳದಲ್ಲಿ ಹಾಸನ ಟಿಕೆಟ್​

ಹೌದು…ಈಗಾಗಲೇ ರೇವಣ್ಣ ಕುಟುಂಬ ಹಾಗೂ ಕುಮಾರಸ್ವಾಮಿ ನಡುವೆ ಹಾಸನ ಟಿಕೆಟ್​ ವಿಚಾರವಾಗಿ  ಪರಸ್ಪರ ಒಂದು ಸುತ್ತಿನ ಮಾತಿನ ಸಮರ ನಡೆದಿದೆ. ಇದು ತಾರಕಕ್ಕೇರುತ್ತಿದ್ದಂತೆಯೇ ದೊಡ್ಡಗೌಡ್ರು ಮಧ್ಯೆ ಪ್ರವೇಶಿಸಿ ಅಣ್ಣ-ತಮ್ಮರ ಮುಸುಕಿನ ಗುದ್ದಾಟಕ್ಕೆ ಬ್ರೇಕ್​ ಹಾಕಿದ್ದರು. ಅಲ್ಲದೇ ಟಿಕೆಟ್​ ವಿಚಾರವಾಗಿ ಯಾವುದೇ ದಿಢೀರ್ ನಿರ್ಧಾರ ತೆಗೆದುಕೊಳ್ಳುವುದ ಬೇಡ ಎಂದು ದೇವೇಗೌಡ್ರು ಕುಮಾರಸ್ವಾಮಿಗೆ ಸಲಹೆ ಕೊಟ್ಟಿದ್ದಾರೆ. ಈ ಮೂಲಕ ನಾನು ಎಲ್ಲವನ್ನು ಚರ್ಚಿಸಿ ತಿಳಿಸುವುದಾಗಿ ಹೇಳಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಹಾಸನ ಟಿಕೆಟ್​ ವಿಚಾರವಾಗಿ ಯಾವುದೇ ಮಾತುಗಳನ್ನಾಡದೇ ದೊಡ್ಡಗೌಡ್ರತ್ತ ಬೆರಳು ತೋರಿಸಿದ್ದಾರೆ.

ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಹಾಸನ ಟಿಕೆಟ್​ ಯಾರಿಗೆ ಎಂದು ದೇವೇಗೌಡ್ರು ಅಂತಿಮಗೊಳಿಸಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಒಟ್ಟಿನಲ್ಲಿ ಹಾಸನ ಟಿಕೆಟ್​ಗಾಗಿ ತೀವ್ರ ಪೈಪೋಟಿ ನಡೆಸುತ್ತಿದ್ದರು ಇದೀಗ ದಿಢೀರ್​ ಮುಖಾಮುಖಿ ಭೇಟಿಯಾಗಿದ್ದು, ಸಂಚಲನ ಮೂಡಿಸಿದೆ. ​

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 4:02 pm, Wed, 8 March 23

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?