AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​​ನ 20 ಮಂದಿ ರಾಜೀನಾಮೆ ನೀಡಿ ಬಿಜೆಪಿ ಸೇರುತ್ತಾರೆ; ಲಖನ್ ಜಾರಕಿಹೊಳಿ

ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಶನಿವಾರ ಬೆಳಿಗ್ಗೆ ಆರಂಭವಾಗಲಿದೆ. ಈ ಮಧ್ಯೆ, ಇನ್ನೂ ಶಾಸಕರಾಗಿ ಆಯ್ಕೆಯಾಗುವ ಮೊದಲೇ ರಾಜೀನಾಮೆ ಮಾತು ಕೇಳಿಬರಲು ಆರಂಭವಾಗಿದೆ.

ಕಾಂಗ್ರೆಸ್​​ನ 20 ಮಂದಿ ರಾಜೀನಾಮೆ ನೀಡಿ ಬಿಜೆಪಿ ಸೇರುತ್ತಾರೆ; ಲಖನ್ ಜಾರಕಿಹೊಳಿ
ಲಖನ್ ಮತ್ತು ಸತೀಶ್ ಜಾರಕಿಹೊಳಿ
Follow us
Ganapathi Sharma
|

Updated on: May 12, 2023 | 4:36 PM

ಬೆಳಗಾವಿ: ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಶನಿವಾರ ಬೆಳಿಗ್ಗೆ ಆರಂಭವಾಗಲಿದೆ. ಈ ಮಧ್ಯೆ, ಇನ್ನೂ ಶಾಸಕರಾಗಿ ಆಯ್ಕೆಯಾಗುವ ಮೊದಲೇ ರಾಜೀನಾಮೆ ಮಾತು ಕೇಳಿಬರಲು ಆರಂಭವಾಗಿದೆ. ಬಿಜೆಪಿಗೆ ಪೂರ್ಣ ಬಹುಮತ ದೊರೆಯದಿದ್ದರೆ ಆಪರೇಷನ್ ಕಮಲದ ಸಾಧ್ಯತೆ ಇದೆ. ಆದರೆ ಹಾಗಾಗದು. ರಾಜ್ಯದಲ್ಲಿ ‌120 ಸ್ಥಾನ ಬಿಜೆಪಿಗೆ ದೊರೆಯಲಿದೆ. ಕಾಂಗ್ರೆಸ್ 85 ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಲಿದೆ. ಇದರಿಂದಾಗಿ ಇಪ್ಪತ್ತು ಜನ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಬೆಳಗಾವಿಯಲ್ಲಿ ಪಕ್ಷೇತರ ಎಂಎಲ್‌ಸಿ ಲಖನ್ ಜಾರಕಿಹೊಳಿ (Lakhan Jarkiholi) ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಅಧಿಕಾರ ದೊರೆಯದಿದ್ದರೆ ಅವರು ಎನೂ ಮಾಡುತ್ತಾರೆ. ರಾಜೀನಾಮೆ ಕೊಟ್ಟು ಅಧಿಕಾರ ಇರುವವರ ಜತೆ ಬರುತ್ತಾರೆ. ಗೋವಾದಲ್ಲಿ ಆದ ಹಾಗೆಯೇ ಇಲ್ಲಿಯೂ ಆಗಲಿದೆ. ಯಾರ ನೇತೃತ್ವದಲ್ಲಿ ಇವೆಲ್ಲ ನಡೆಯಲಿದೆ ಗೊತ್ತಿಲ್ಲ ಆದರೆ ಮತ್ತೆ ಇಪ್ಪತ್ತು ಜನ ಬರುತ್ತಾರೆ ಎಂದು ಅವರು ಹೇಳಿದ್ದಾರೆ. ನಾನು ಪಕ್ಷೇತರನಾಗಿಯೇ ಇರುತ್ತೇನೆ ಎಂದೂ ಅವರು ಹೇಳಿದ್ದಾರೆ.

ಇನ್ನು ಲಖನ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸತೀಶ್ ಜಾರಕಿಹೊಳಿ, ರಾಜೀನಾಮೆ ನೀಡಿ ಹೊದರೂ ಅವರಿಗೆ ಬಹುಮತ ಆಗುವುದಿಲ್ಲವಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಚುನಾವಣಾ ಫಲಿತಾಂಶದ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದ ಕೋಡಿಮಠ ಶ್ರೀ? ಇಲ್ಲಿದೆ ನೋಡಿ

ಬಿಜೆಪಿ ಬಹುಮತ ಪಡೆಯಲು ಅಂತರ ಬಹಳ ಇರಲಿದೆ. 35ರಷ್ಟು ಶಾಸಕರು ರಾಜೀನಾಮೆ ಕೂಡಬೇಕಾಗಬಹುದು. ಅಷ್ಟೆಲ್ಲ ಶಾಸಕರನ್ನು ಸೇರಿಸಲು ಅವರಿಂದ ಸಾಧ್ಯವಾಗದು. ಬಿಜೆಪಿಯವರು ಆಪರೇಷನ್ ಕಮಲ ಮಾಡುತ್ತಾರಾ ಎಂಬುದು ಪ್ರಶ್ನೆ. ಸದ್ಯಕ್ಕೆ ಮಾಡಲ್ಲ, ಒಂದು ವರ್ಷ ಶಾಂತವಾಗಿ ಇರುತ್ತಾರೆ, ಕಾದು ನೋಡುತ್ತಾರೆ. ಲೋಕಸಭಾ ಚುನಾವಣೆ ಆಗುವವರೆಗೆ ಶಾಂತವಾಗಿ ಇರುತ್ತಾರೆ. ಈ ಅವಧಿಯಲ್ಲಿ ನಾವು ಗಟ್ಟಿಯಾಗಬೇಕು. ಈ ವಿಧಾನಸಭೆ ಚುನಾವಣೆ ಫಲಿತಾಂಶ ರಾಷ್ಟ್ರ ರಾಜಕಾರಣಕ್ಕೆ ಒಂದು ತಿರುವು ಆಗಲಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ