AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ಸರ್ಕಾರದಿಂದ ಸೋಮವಾರದಿಂದ ಮೂರು ದಿನ ವಿಧಾನಸಭಾ ಅಧಿವೇಶನ

ಸೋಮವಾರದಿಂದ ಮೂರು ದಿನ ವಿಧಾನಸಭಾ ಅಧಿವೇಶನ ನಡೆಸಲು ನೂತನ ಸರ್ಕಾರ ನಿರ್ಧಾರ ಕೈಗೊಂಡಿದೆ. ಅಧಿವೇಶನದಲ್ಲಿ ನೂತನ ಸದಸ್ಯರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ನೂತನ ಸರ್ಕಾರದಿಂದ ಸೋಮವಾರದಿಂದ ಮೂರು ದಿನ ವಿಧಾನಸಭಾ ಅಧಿವೇಶನ
ಸಿದ್ದರಾಮಯ್ಯ
ಆಯೇಷಾ ಬಾನು
ಆಯೇಷಾ ಬಾನು|

Updated on: May 21, 2023 | 7:33 AM

Share

ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ(Siddaramaiah Government) ರಚನೆಯಾಗಿದ್ದು ಸೋಮವಾರದಿಂದ ಮೂರು ದಿನ ವಿಧಾನಸಭಾ ಅಧಿವೇಶನ(Assembly Session) ನಡೆಸಲು ನೂತನ ಸರ್ಕಾರ ನಿರ್ಧಾರ ಕೈಗೊಂಡಿದೆ. ಅಧಿವೇಶನದಲ್ಲಿ ನೂತನ ಸದಸ್ಯರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹಾಗೂ ಹೊಸ ವಿಧಾನಸಭಾ ಸ್ಪೀಕರ್​​​ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಎರಡು ದಿನ ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧನೆ ಮಾಡಲಾಗುತ್ತೆ. ಹಂಗಾಮಿ ಸ್ಪೀಕರ್ ಆಗಿ R.V.ದೇಶಪಾಂಡೆ ಕಾರ್ಯನಿರ್ವಹಣೆ ಮಾಡಲಿದ್ದು ಮೂರನೇ ದಿನ ಹೊಸ ಸ್ಪೀಕರ್ ನೇಮಕ ಪ್ರಕ್ರಿಯೆ ನಡೆಯಲಿದೆ.

ಅತ್ಯಂತ ಹಿರಿಯ ಶಾಸಕರಾಗಿರುವ ಆರ್.ವಿ. ದೇಶಪಾಂಡೆ ಅವರನ್ನು ವಿಧಾನಸಭೆಯ ಹಂಗಾಮಿ ಅಧ್ಯಕ್ಷರಾಗಿ ನೂತನ ಶಾಸಕರಿಗೆ ಪ್ರಮಾಣವಚನ ಬೋಧಿಸುವಂತೆ ಮನವಿ ಮಾಡಲಾಗುವುದು. ಹಿಂದಿನ ವಿಧಾನಸಭೆಯ ಅವಧಿ ಮೇ 23ಕ್ಕೆ ಅಂತ್ಯವಾಗಲಿದ್ದು, ಅಷ್ಟರೊಳಗೆ ಶಾಸಕರ ಪ್ರಮಾಣವಚನ ಸ್ವೀಕಾರ ಪೂರ್ಣಗೊಳ್ಳಬೇಕಿದೆ. ಜುಲೈ ತಿಂಗಳಿನಲ್ಲಿ ಬಜೆಟ್ ಮಂಡಿಸಲಾಗುವುದು.‌ ಐದು ಗ್ಯಾರಂಟಿಗಳ ಅನುಷ್ಠಾನ ಸೇರಿದಂತೆ ಸರ್ಕಾರದ ಹೊಸ ಕಾರ್ಯಕ್ರಮಗಳಿಗೆ ಅಗತ್ಯ ಅನುದಾನ ಒದಗಿಸಲಾಗುವುದು.

ಇದನ್ನೂ ಓದಿ: KJ George: ಜನಕ್ಕೆ ನೀಡಿದ ಭರವಸೆಗಳನ್ನು ಕಾಂಗ್ರೆಸ್ ಸರ್ಕಾರ ಈಡೇರಿಸಲು ಅಣಿಯಾಗುತ್ತಿರುವುದು ಹೆಚ್ಚು ಸಂತಸ ನೀಡುತ್ತಿದೆ: ಕೆಜೆ ಜಾರ್ಜ್

ಮಹಿಳೆಯರ ಬ್ಯಾಂಕ್ ಖಾತೆಗೆ 2 ಸಾವಿರ ಗ್ಯಾರಂಟಿ: ಗೃಹ ಲಕ್ಷ್ಮೀ ಯೋಜನೆ ಜಾರಿಗೆ ಅಧಿಕೃತ ಆದೇಶ

ಗೃಹ ಲಕ್ಷ್ಮೀ ಯೋಜನೆ ಜಾರಿಗೆ ತರಲು ಕರ್ನಾಟಕ ಸರ್ಕಾರದಿಂದ ತಾತ್ವಿಕ ಆದೇಶ ಹೊರಬಿದ್ದಿದೆ. ಆ ಮೂಲಕ ಕರ್ನಾಟಕ ರಾಜ್ಯದ ಪ್ರತಿ ಮನೆಯ ಯಜಮಾನಿಯ ಬ್ಯಾಂಗ್ ಖಾತೆಗೆ ಪ್ರತಿ ತಿಂಗಳು ಸರ್ಕಾರದಿಂದ 2 ಸಾವಿರ ರೂಪಾಯಿ ಬೀಳುವುದು ಗ್ಯಾರಂಟಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್ ನೀಡಿದ್ದ ಐದು ಭರವಸೆಗಳಿಗೆ ತಾತ್ವಿಕ ಅನುಮೋದನೆ ದೊರಕಿದೆ. ಈ ಪೈಕಿ ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸರ್ಕಾರದ ಜಂಟಿ ಕಾರ್ಯದರ್ಶಿ ಬಿಎಂ ಚಂದ್ರಶೇಖರ್ ತಾತ್ವಿಕ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು