ವಿಧಾನಸಭಾ ಚುನಾವಣೆಯಲ್ಲಿ ಸೋಲಿಗೆ ಕೆಲವು ನಿಖರ ಕಾರಣಗಳನ್ನು ಹುಡುಕಿದ ಬಿಜೆಪಿ: ಅವು ಇಲ್ಲಿವೆ

|

Updated on: May 16, 2023 | 2:22 PM

ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳ್ಲಿ ಗೆಲ್ಲುವ ಮೂಲಕ ಪ್ರಚಂಡ ಬಹುಮತ ಪಡೆದುಕೊಮಡಿದೆ. ಇನ್ನು ಬಿಜೆಪಿ ಕೇವಲ 66 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಈ ಹೀನಾಯ ಸೋಲಿಗೆ ಬಿಜೆಪಿ ಕೆಲ ಕಾರಣಗಳನ್ನು ಕಂಡುಕೊಂಡಿದೆ.

ವಿಧಾನಸಭಾ ಚುನಾವಣೆಯಲ್ಲಿ ಸೋಲಿಗೆ ಕೆಲವು ನಿಖರ ಕಾರಣಗಳನ್ನು ಹುಡುಕಿದ ಬಿಜೆಪಿ: ಅವು ಇಲ್ಲಿವೆ
Follow us on

ಬೆಂಗಳೂರು:  ಚುನಾವಣಾ ಸಮೀಕ್ಷೆಗಳ ವರದಿಗಳನ್ನು ಮೀರಿ ಕರ್ನಾಟಕದಲ್ಲಿ ಕಾಂಗ್ರೆಸ್ (Congress)​ ಭಾರಿ ಗೆಲುವು ಸಾಧಿಸಿದೆ. ಬರೋಬ್ಬರಿ 135 ಸ್ಥಾನಗಳ್ಲಲಿ ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಇನ್ನು ಬಿಜೆಪಿ ಈ ರೀತಿ ಸೋಲನ್ನು ನಿರೀಕ್ಷೆ ಮಾಡಿರಲಿಲ್ಲ. ಈ ಫಲಿತಾಶದಿಂದ ಬಿಜೆಪಿ(BJP) ನಾಯಕರಿಗೆ ಶಾಕ್ ಆಗಿದೆ. ಅಲ್ಲದೇ ಹೀನಾಯ ಸೋಲಿಗೆ ಬಿಜೆಪಿ ಕಾರಣಗಳನ್ನು ಹುಡುಕುತ್ತಿದೆ. ಹೌದು.. ಸೋಲಿಗೆ ಒಂದೊಂದೇ ಕಾರಣ ಹುಡುಕುವಲ್ಲಿ ಬಿಜೆಪಿ ಮಗ್ನವಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕಾತಿಯಲ್ಲಿನ ಬದಲಾವಣೆ ಸೋಲಿಗೆ ಪ್ರಧಾನ ಕಾರಣ ಎಂಬ ಮಾಹಿತಿ ಬಿಜೆಪಿ ಪಡೆದುಕೊಂಡಿದೆ. ಹಾಗಾದ್ರೆ, ಇನ್ನುಳಿದ ಕಾರಣಗಳೇನು ಎನ್ನುವುದು ಈ ಕೆಳಗಿನಂತಿದೆ ನೋಡಿ.

ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ, ವಿರೋಧ ಪಕ್ಷದ ನಾಯಕನ ಆಯ್ಕೆ ಬಗ್ಗೆ ಪ್ರಲ್ಹಾದ್​ ಜೋಶಿ ಹೇಳಿದ್ದಿಷ್ಟು

ಸೋಲಿಗೆ ಕೆಲವು ನಿಖರ ಕಾರಣಗಳನ್ನು ಹುಡುಕಿರುವ ಬಿಜೆಪಿ, ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕಾತಿಯಲ್ಲಿನ ಬದಲಾವಣೆ ಸೋಲಿಗೆ ಪ್ರಧಾನ ಕಾರಣ ಎಂಬ ಮಾಹಿತಿ ಪಡೆದಿದೆ. ಅಯಾಯ ಜಿಲ್ಲೆಗಳ ಸಚಿವರನ್ನು ಬಿಟ್ಟು ಬೇರೆ ಜಿಲ್ಲೆಗಳ ಸಚಿವರನ್ನು ಉಸ್ತುವಾರಿ ಮಾಡಿ ಪ್ರಯೋಗ ಮಾಡಿದ್ದೇ ಸೋಲಿಗೆ ಪ್ರಮುಖ ಕಾರಣ ಎಂದು ತಿಳಿದುಬಂದಿದೆ. ಉಸ್ತುವಾರಿ ಸಚಿವರು ಜಿಲ್ಲೆಗಳಿಂದ ನಿಖರ ಮಾಹಿತಿ ತೆಗೆಯುವಲ್ಲಿ ವಿಫಲವಾಗಿದ್ದು, ತಮ್ಮ ಸ್ವಂತ ಜಿಲ್ಲೆ ಅಲ್ಲ ಎಂಬ ಕಾರಣಕ್ಕೆ ಉಸ್ತುವಾರಿ ಸಚಿವರು ಆಸಕ್ತಿ ತೋರಿಸಿಲ್ಲ. ಹೀಗಾಗಿ ಜಿಲ್ಲೆಗಳ ವಾಸ್ತವ ಸ್ಥಿತಿ ಮಾಹಿತಿ ಪಡೆಯುವಲ್ಲಿ ರಾಜ್ಯ ಬಿಜೆಪಿ ವಿಫಲವಾಗಿದೆ.

ಬಿಜೆಪಿ ಕಂಡುಕೊಂಡ ಕಾರಣಗಳು

  • ಚುನಾವಣೆಯಲ್ಲಿ ಜಿಲ್ಲಾ ಉಸ್ತುವಾರಿ ಪ್ರಯೋಗ ಬಿಜೆಪಿಗೆ ಹೊಡೆತ ಕೊಟ್ಟಿದ್ದು, ತಮ್ಮ ಸ್ವಂತ ಜಿಲ್ಲೆ ಅಲ್ಲ ಎಂಬ ಕಾರಣಕ್ಕೆ ಉಸ್ತುವಾರಿ ಸಚಿವರು ಆಸಕ್ತಿ ತೋರಿಸಿಲ್ಲ
  • ನಿಗಮ ಮತ್ತು ಮಂಡಳಿಗಳ ಸೂಕ್ತವಲ್ಲದ ನೇಮಕಾತಿಯಿಂದಲೂ ಪಕ್ಷಕ್ಕೆ ನಷ್ಟವಾಗಿದೆ. ಬೆಂಗಳೂರು ವ್ಯಾಪ್ತಿಗೆ ಸಂಬಂಧಿಸಿದ ನಿಗಮ-ಮಂಡಳಿಗೆ ಹೊರಗಿನವರ ನೇಮಕಾತಿಯಿಂದ ಕೂಡಾ ಸಮಸ್ಯೆಯಾಗಿದೆ.
  • ಬೆಂಗಳೂರಿನಲ್ಲಿ ಮಾತ್ರ ಪ್ರಧಾನಿ ಮೋದಿ ವರ್ಚಸ್ಸು ಪಕ್ಷಕ್ಕೆ ವರ್ಕೌಟ್ ಆಗಿದೆ. ಮೋದಿ ಅಲೆ ಇದೆ ಎಂದು ಅತಿಯಾಗಿ ನಂಬಿಕೊಂಡಿದ್ದು ಕೂಡಾ ಹಿನ್ನೆಡೆಗೆ ಕಾರಣವಾಗಿದೆ.
  • ಹಳೆ ಮೈಸೂರು ಭಾಗದಲ್ಲಿ 1:10 ಮತ ಪ್ರಮಾಣ ಹೆಚ್ಚಳವಾದರೂ ಲಾಭವಾಗಿಲ್ಲ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಜೆಡಿಎಸ್ ಮತಗಳನ್ನು ಕಸಿದಿದ್ದು ಕಾಂಗ್ರೆಸ್ ಪಕ್ಷಕ್ಕೆ ಲಾಭ
  • ನಿಗಮ-ಮಂಡಳಿಗಳ ನೇಮಕಾತಿ ವಿಚಾರದಲ್ಲಿನ ವಿಳಂಬ ನೀತಿಯಿಂದಾಗಿ ಬೇಸತ್ತಿದ್ದ ಕಾರ್ಯಕರ್ತರು
  • ಕೆಲವು ಕಡೆ ಅಭ್ಯರ್ಥಿಗಳ ಬದಲಾವಣೆಯಿಂದ ಕೈಕೊಟ್ಟ ಗೆಲ್ಲುವ ಅವಕಾಶ
  • ಬಿಜೆಪಿ ಲೆಕ್ಕಾಚಾರ ಬದಲಿಸಿದ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಸ್ಕೀಮ್ ಗಳು
  • ಮತದಾನದ ಕೊನೆಯ 10 ದಿನಗಳಲ್ಲಿ ಅಂಡರ್ ಕರೆಂಟ್ ರೀತಿ ವರ್ಕ್ ಆದ ಗ್ಯಾರಂಟಿ ಸ್ಕೀಮ್ ಗಳು
  • ಮಹಿಳಾ ಮತದಾರರು, ಸ್ತ್ರೀ ಶಕ್ತಿ ಸಂಘಗಳು ಮತ್ತಿತರ ಕಡೆ ಅಂಡರ್ ಕರೆಂಟ್ ಆದ ಗ್ಯಾರಂಟಿ ಸ್ಕೀಮ್ ಗಳು.

Published On - 2:18 pm, Tue, 16 May 23