ಕರ್ನಾಟಕ ಬಿಜೆಪಿ ಅಧ್ಯಕ್ಷರ ಬದಲಾವಣೆ ಚರ್ಚೆ: ನಳಿನ್ ಕುಮಾರ್ ಕಟೀಲ್ ಸ್ಥಾನಕ್ಕೆ ಯಾರು? ಇಲ್ಲಿವೆ ಕೆಲವು ಹೆಸರುಗಳು

ನಳಿನ್ ಕುಮಾರ್ ಕಟೀಲ್ ಅವರ ರಾಜ್ಯಾಧ್ಯಕ್ಷ ಅವಧಿ ಕಳೆದ ವರ್ಷ ಮುಗಿದಿದ್ದು, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ನಾಯಕರು ಅವಧಿ ವಿಸ್ತರಣೆ ಮಾಡಿದ್ದರು. ಆದರೆ ಇದೀಗ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಯಾರು ಊಹಿಸಲಾಗದಷ್ಟು ಬಿಜೆಪಿ ಸೋತಿದೆ. ರಾಜ್ಯದಲ್ಲಿ ಪಕ್ಷ ಸೋಲುತ್ತಿದ್ದಂತೆ ರಾಜ್ಯಾಧ್ಯಕ್ಷರ ಬದಲಾವಣೆಯ ಮಾತುಗಳು ರಾಜ್ಯ ಬಿಜೆಪಿ ಘಟಕ ಅಂಗಳದಲ್ಲಿ ಜೋರಾಗಿ ಕೇಳಿಬುರುತ್ತಿದೆ.

ಕರ್ನಾಟಕ ಬಿಜೆಪಿ ಅಧ್ಯಕ್ಷರ ಬದಲಾವಣೆ ಚರ್ಚೆ: ನಳಿನ್ ಕುಮಾರ್ ಕಟೀಲ್ ಸ್ಥಾನಕ್ಕೆ ಯಾರು? ಇಲ್ಲಿವೆ ಕೆಲವು ಹೆಸರುಗಳು
ನಳೀನ್​ ಕುಮಾರ್​ ಕಟೀಲ್​
Follow us
|

Updated on:May 17, 2023 | 3:07 PM

ಬೆಂಗಳೂರು: ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರ ರಾಜ್ಯಾಧ್ಯಕ್ಷ ಅವಧಿ ಕಳೆದ ವರ್ಷ ಮುಗಿದಿದ್ದು, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ನಾಯಕರು ಅವಧಿ ವಿಸ್ತರಣೆ ಮಾಡಿದ್ದರು. ಆದರೆ ಇದೀಗ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election 2023) ಯಾರು ಊಹಿಸಲಾಗದಷ್ಟು ಹೀನಾಯವಾಗಿ ಬಿಜೆಪಿ (BJP) ಸೋತಿದೆ. ರಾಜ್ಯದಲ್ಲಿ ಪಕ್ಷ ಸೋಲುತ್ತಿದ್ದಂತೆ ರಾಜ್ಯಾಧ್ಯಕ್ಷರ ಬದಲಾವಣೆಯ ಮಾತುಗಳು ರಾಜ್ಯ ಬಿಜೆಪಿ ಘಟಕ ಅಂಗಳದಲ್ಲಿ ಜೋರಾಗಿ ಕೇಳಿಬುರುತ್ತಿದೆ. ಅಲ್ಲದೇ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಬದಲಾಯಿಸಿ 2024ರ ಲೋಕಸಭೆ ಚುನಾವಣೆ ಮುನ್ನ ಹೊಸ ಮುಖವನ್ನು ತರುವಂತೆ ಬಿಜೆಪಿ ಕೇಂದ್ರ ನಾಯಕರ ಮೇಲೆ ಒತ್ತಡ ಹೆಚ್ಚುತ್ತಿದೆ.

ಈ ಹಿನ್ನೆಲೆ ರಾಜ್ಯಾಧ್ಯಕ್ಷರ ಬದಲಾವಣೆಗೆ ಕಾಲ ಸನ್ನಿಹಿತವಾಗುತ್ತಿದ್ದು, ನಿನ್ನೆ (ಮೇ.17) ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಈ ಬಗ್ಗೆ ಮಾತನಾಡಿ ನಳೀನ್​ ಕುಮಾರ್​ ಕಟೀಲ್​ ಅವರ ಅವಧಿ ಈಗಾಗಲೇ ಮುಗಿದು ಹೋಗಿದೆ ಚುನಾವಣಾ ದೃಷ್ಟಿಯಿಂದ ಅವರಿಗೆ ರಾಷ್ಟ್ರೀಯ ನಾಯಕರು ಜವಾಬ್ದಾರಿ ಕೊಟ್ಟಿದ್ದರು. ಮುಂದಿನ ತೀರ್ಮಾನವನ್ನು ರಾಷ್ಟ್ರೀಯ ನಾಯಕರೇ ಮಾಡುತ್ತಾರೆ ಎಂದು ಹೇಳಿದ್ದರು. ಇದೀಗ ರಾಜ್ಯಾಧ್ಯಾಕ್ಷ ಸ್ಥಾನಕ್ಕೆ ಪೈಪೋಟಿ ಏರ್ಪಟ್ಟಿದ್ದು, ರೇಸ್​​ನಲ್ಲಿ ಯಾರೆಲ್ಲಾ ಇದ್ದಾರೆ ಪಟ್ಟಿ ಇಲ್ಲಿದೆ.

ಶೋಭಾ ಕರಂದ್ಲಾಜೆ

ಜಾತಿ: ಒಕ್ಕಲಿಗ

ಪ್ರಸ್ತುತ ಹುದ್ದೆ: ಕೇಂದ್ರ ಸಚಿವ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಒಕ್ಕಲಿಗ ಸಮುದಾಯಕ್ಕೆ ಸೇರಿದ ಇವರು ಉತ್ತಮ ವಾಗ್ಮಿಯಾಗಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಕಮಲ ಅರಳಿಸಲು, ಮತ್ತು ಈ ಭಾಗದಲ್ಲಿ ಮತ್ತಷ್ಟು ಮತಗಳನ್ನು ಕ್ರೋಢೀಕರಿಸಲು, ಪಕ್ಷವು ಅವರನ್ನು ರಾಜ್ಯ ಘಟಕದ ಮುಖ್ಯಸ್ಥರನ್ನಾಗಿ ಮಾಡುವ ಸಾಧ್ಯತೆ ಇದೆ.

ಆದರೆ, ಪಕ್ಷವು ಒಬ್ಬ ವ್ಯಕ್ತಿ-ಒಂದು ಹುದ್ದೆಯ ಸೂತ್ರವನ್ನು ಅನುಸರಿಸುತ್ತದೆ. ಅಂದರೆ ಶೋಭಾ ಕರಂದ್ಲಾಜೆ ಅವರನ್ನು ಮುಂದಿನ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ ಕೇಂದ್ರ ಸಚಿವ ಸ್ಥಾನವನ್ನು ಬಿಟ್ಟುಕೊಡಬೇಕು. ಏತನ್ಮಧ್ಯೆ, ಪ್ರಚಾರದ ಸಮಯದಲ್ಲಿ, ಅವರು ರಾಜ್ಯ ರಾಜಕೀಯದಲ್ಲಿ ಆಸಕ್ತಿ ಹೊಂದಿಲ್ಲ ಮತ್ತು ತಮ್ಮ ಪ್ರಸ್ತುತ ಹುದ್ದೆಯಲ್ಲಿ ಮುಂದುವರಿಯಲು ಬಯಸುತ್ತೇನೆ ಎಂದು ಅನೇಕ ಸಂದರ್ಭಗಳಲ್ಲಿ ಹೇಳಿದ್ದರು.

ಸಿಟಿ ರವಿ

ಜಾತಿ: ಒಕ್ಕಲಿಗ

ಪ್ರಸ್ತುತ ಹುದ್ದೆ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

ಮಾಜಿ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಈ ಸ್ಥಾನಕ್ಕೆ ಮತ್ತೊಬ್ಬ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಒಕ್ಕಲಿಗರಾದ ರವಿ ಅವರು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಮಾಜಿ ಆಪ್ತ ಮತ್ತು ಪ್ರಸ್ತುತ ಕಾಂಗ್ರೆಸ್ ನಾಯಕ ಎಚ್‌ಡಿ ತಮ್ಮಯ್ಯ ವಿರುದ್ಧ ಸೋತಿದ್ದಾರೆ. ರವಿ, ಫೈರ್‌ಬ್ರಾಂಡ್ ಹಿಂದುತ್ವದ ನಾಯಕ ಮತ್ತು ಪಕ್ಷದೊಳಗೆ ತಮ್ಮ ನಾಯಕತ್ವದ ಕೌಶಲ್ಯವನ್ನು ತೋರಿಸಿದ್ದು, ಮುಂದಿನ ರಾಜ್ಯಾಧ್ಯಕ್ಷರನ್ನಾಗಿ ಮಾಡಿದರೆ ಆಶ್ಚರ್ಯವಿಲ್ಲ.

ಡಾ. ಸಿಎನ್ ಅಶ್ವಥ್ ನಾರಾಯಣ

ಜಾತಿ: ಒಕ್ಕಲಿಗ

ಹಾಲಿ ಹುದ್ದೆ: ಮಲ್ಲೇಶ್ವರಂ ಶಾಸಕ

ಮತ್ತೊಬ್ಬ ಒಕ್ಕಲಿಗ ಹಾಗೂ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ 4 ಬಾರಿ ಶಾಸಕರಾಗಿರುವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರು ಹಲವು ಖಾತೆಗಳನ್ನು ನಿರ್ವಹಿಸಿದ್ದು, 2019ರಲ್ಲಿ ಬಿ.ಎಸ್.ಯಡಿಯೂರಪ್ಪ ಸರ್ಕಾರದಲ್ಲಿ ಮೂವರು ಉಪಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿದ್ದರು. ಅವರಿಗೆ ರಾಮನಗರ ಜಿಲ್ಲೆಯ ಜವಾಬ್ದಾರಿಯನ್ನು ನೀಡಲಾಗಿತ್ತು. ಇನ್ನು ಚುನಾವಣಾ ಪ್ರಚಾರ ತಾರಕಕ್ಕೇರಿದ ಅವಧಿಯಲ್ಲಿ “ಊರಿಗೌಡ ಮತ್ತು ನಂಜೇಗೌಡ” ಹೆಸರನ್ನು ಮೊದಲು ಬಳಸಿದ್ದು ಅಶ್ವಥ್ ನಾರಾಯಣ್. ಆದರೆ ಅವರು ಪಕ್ಷದ ಕೆಲವು ಹಿರಿಯ ನಾಯಕರಿಂದ ವಿರೋಧ ಎದುರಿಸುತ್ತಿದ್ದಾರೆ.

ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ, ವಿರೋಧ ಪಕ್ಷದ ನಾಯಕನ ಆಯ್ಕೆ ಬಗ್ಗೆ ಪ್ರಲ್ಹಾದ್​ ಜೋಶಿ ಹೇಳಿದ್ದಿಷ್ಟು

ವಿ ಸುನಿಲ್ ಕುಮಾರ್

ಜಾತಿ: ಬಿಲ್ಲವ

ಹಾಲಿ ಹುದ್ದೆ: ಕಾರ್ಕಳ ಶಾಸಕ

ಮಾಜಿ ಸಚಿವ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳದಿಂದ 4 ಬಾರಿ ಶಾಸಕರಾಗಿರುವ ವಿ ಸುನೀಲ್ ಕುಮಾರ್ ಅವರು ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಮತ್ತೊಬ್ಬ ಆಕಾಂಕ್ಷಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಇವರು ಬಿಲ್ಲವ ಸಮುದಾಯದಿಂದ ಬಂದವರು. ಈ ಪ್ರದೇಶದಲ್ಲಿ ಪಕ್ಷವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಕರಾವಳಿ ಕರ್ನಾಟಕದಿಂದ ಬಂದಿರುವ ಸುನೀಲ್ ಕುಮಾರ್ ಅವರನ್ನು ಪಕ್ಷವು ಆಯ್ಕೆ ಮಾಡುವ ಸಾಧ್ಯತೆ ಇದೆ. ಏಕೆಂದರೇ ಸುನೀಲ್ ಕುಮಾರ್ ಆರೆಸ್ಸೆಸ್ ಹಿನ್ನೆಲೆಯಿಂದ ಬಂದವರಾಗಿದ್ದು, ಸಂಘ ಪರಿವಾರದ ಬೆಂಬಲವನ್ನು ಪಡೆದಿದ್ದಾರೆ.

ಅರವಿಂದ ಲಿಂಬಾವಳಿ

ಜಾತಿ: ಎಸ್ಸಿ

ಹಾಲಿ ಹುದ್ದೆ: ಮಾಜಿ ಸಚಿವ.

ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಹಿರಿಯ ಮುಖಂಡ ಮತ್ತು ಮಾಜಿ ಸಚಿವರಿಗೆ ಈ ವರ್ಷ ಬಿಜೆಪಿ ಟಿಕೆಟ್ ನಿಡಿರಲಿಲ್ಲ. ಬದಲಿಗೆ ಅವರ ಪತ್ನಿ ಮಂಜುಳಾ ಲಿಂಬಾವಳಿ ಅವರಿಗೆ ಟಿಕೆಟ್​ ನೀಡಿತ್ತು. ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಮತಬ್ಯಾಂಕ್ ಕ್ರೋಢೀಕರಿಸಲು ರಾಜ್ಯ ಘಟಕವನ್ನು ಮುನ್ನಡೆಸಲು ಬಿಜೆಪಿ ಅವರನ್ನು ಆಯ್ಕೆ ಮಾಡುವ ಸಾಧ್ಯೆತೆ ಇದೆ.

ಅರವಿಂದ್ ಬೆಲ್ಲದ್

ಜಾತಿ- ಲಿಂಗಾಯತ

ಹಾಲಿ ಹುದ್ದೆ- ಹುಬ್ಬಳ್ಳಿ-ಧಾರವಾಡ (ಪಶ್ಚಿಮ) ಶಾಸಕ

ತ್ತೂರು-ಕರ್ನಾಟಕದಲ್ಲಿ ಗಮನಾರ್ಹ ಸಂಖ್ಯೆಯ ಸ್ಥಾನಗಳನ್ನು ಕಳೆದುಕೊಂಡಿರುವ ಬಿಜೆಪಿಯು 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಲಿಂಗಾಯತ ಸಮುದಾಯದ ನಿಷ್ಠೆಯನ್ನು ಮರಳಿ ಪಡೆಯಲು ಬೆಲ್ಲದ್ ಅವರನ್ನು ಮುಂದಿನ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಬಹುದು. 2021 ರಲ್ಲಿ ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಾಗ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ ಬೆಲ್ಲದ ಹೆಸರು ಕೇಳಿಬರುತ್ತಿತ್ತು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:37 pm, Wed, 17 May 23