Karnataka Polls: ರಾಜ್ಯದಲ್ಲೆಷ್ಟಿದ್ದಾರೆ ಹೊಸ ಮತದಾರರು? ಎಷ್ಟು ಮಂದಿಗೆ ವೋಟ್ ಫ್ರಂ ಹೋಮ್? ಇಲ್ಲಿದೆ ವಿವರ

|

Updated on: Apr 26, 2023 | 3:49 PM

Election Commission Press Meet; ರಾಜ್ಯದಲ್ಲಿ ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಚುನಾವಣೆ ಪ್ರಕ್ರಿಯೆಗೆ ಸಂಬಂಧಿಸಿದ ಸಮಗ್ರ ಮಾಹಿತಿಯನ್ನು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಬಹಿರಂಗಪಡಿಸಿದ್ದಾರೆ. ಚುನಾವಣಾಧಿಕಾರಿ ಪತ್ರಿಕಾಗೋಷ್ಠಿಯ ಪೂರ್ಣ ಮಾಹಿತಿ ಇಲ್ಲಿದೆ

Karnataka Polls: ರಾಜ್ಯದಲ್ಲೆಷ್ಟಿದ್ದಾರೆ ಹೊಸ ಮತದಾರರು? ಎಷ್ಟು ಮಂದಿಗೆ ವೋಟ್ ಫ್ರಂ ಹೋಮ್? ಇಲ್ಲಿದೆ ವಿವರ
ಮನೋಜ್ ಕುಮಾರ್ ಮೀನಾ
Follow us on

ಬೆಂಗಳೂರು: ರಾಜ್ಯದಲ್ಲಿ ಮೇ 10 ರಂದು ವಿಧಾನಸಭೆ ಚುನಾವಣೆ (Karnataka Assembly Elections 202) ನಡೆಯಲಿದ್ದು, ಚುನಾವಣೆ ಪ್ರಕ್ರಿಯೆಗೆ ಸಂಬಂಧಿಸಿದ ಸಮಗ್ರ ಮಾಹಿತಿಯನ್ನು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಬುಧವಾರ ಬಹಿರಂಗಪಡಿಸಿದರು. ಈ ಬಾರಿ ಎಷ್ಟು ಮಂದಿ ಹೊಸ ಮತದಾರರಿದ್ದಾರೆ? ಮನೆಯಿಂದಲೇ ಮತದಾನ ಮಾಡುವವರು ಎಷ್ಟು ಮಂದಿ? ಎಷ್ಟು ನಗದು, ಉಡುಗೊರೆ ವಸ್ತುಗಳ ಜಪ್ತಿ ಮಾಡಲಾಗಿದೆ ಇತ್ಯಾದಿ ವಿವರಗಳನ್ನು ಅವರು ಪತ್ರಿಕಾಗೋಷ್ಠಿಯಲ್ಲಿ ಬಹಿರಂಗಪಡಿಸಿದರು. ಚುನಾವಣಾಧಿಕಾರಿ ನೀಡಿರುವ ಪೂರ್ಣ ಮಾಹಿತಿ ಇಲ್ಲಿದೆ.

  1. ರಾಜ್ಯದಲ್ಲಿ ಒಟ್ಟಾರೆ 5,30,85,566 ಮತದಾರರು ಇದ್ದಾರೆ.
  2. ಪುರುಷ ಮತದಾರರ ಸಂಖ್ಯೆ 2,66,82,156 ಹಾಗೂ ಮಹಿಳಾ ಮತದಾರರ ಸಂಖ್ಯೆ 2,63,98,483 ಆಗಿದೆ.
  3. 16,04,285 ಮಂದಿ ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.
  4. ಹೊಸದಾಗಿ ಸೇರ್ಪಡೆಯಾದವರಲ್ಲಿ 11,71,558 ಯುವ ಮತದಾರರಾಗಿದ್ದು, 18-19 ವಯಸ್ಸಿನವರಾಗಿದ್ದಾರೆ.
  5. 2022ರ ಸೆಪ್ಟೆಂಬರ್ 1 ರಿಂದ 38 ಲಕ್ಷ ವೋಟರ್ ಐಡಿ ನೀಡಲಾಗಿದೆ.
  6. ರಾಜ್ಯದಲ್ಲಿ 58,545 ಪೋಲಿಂಗ್ ಸ್ಟೇಷನ್ ಸ್ಥಾಪಿಸಲಾಗುವುದು.
  7. 1,15,709 ಇವಿಎಂ, 89379 ವಿವಿಪ್ಯಾಟ್ ಯಂತ್ರ ಅಳವಡಿಸಲಾಗುವುದು.
  8. 47,488 ಯೋಧರಿಗೆ ಅಂಚೆ ಮತಪತ್ರಗಳನ್ನು ಕಳುಹಿಸಲಾಗಿದೆ.
  9. 80 ವರ್ಷ ದಾಟಿದ 80,250 ಜನರು ಮನೆಯಿಂದಲೇ ಮತದಾನಕ್ಕೆ ನೋಂದಾಯಿಸಿದ್ದಾರೆ.
  10. ಪ್ರತಿ ಬೂತ್ ನಲ್ಲಿ ನೋಂದಾಯಿಸಿದ ಮತದಾರರಿಗೆ ಪೂರ್ವ ಮಾಹಿತಿ ನೀಡಲಾಗುವುದು.
  11. 19279 ವಿಕಲ ಚೇತನರು, 13771 ಅಗತ್ಯ ಸೇವೆ ಒದಗಿಸುವವರು ನೋಂದಾಯಿಸಿದ್ದಾರೆ.

ಮನೆಯಿಂದಲೇ ಮತದಾನ ಪ್ರಕ್ರಿಯೆ ಹೇಗೆ ನಡೆಯಲಿದೆ?

ಒಬ್ಬರು ಮತದಾನ ಸಿಬ್ಬಂದಿ, ಪೊಲೀಸರು, ಪೋಲಿಂಗ್ ಏಜೆಂಟ್ ಮನೆಯಿಂದಲೇ ಮತದಾನ ಪ್ರಕ್ರಿಯೆಗಾಗಿ ಅರ್ಜಿ ಸಲ್ಲಿಸಿದವರ ಮನೆಗೆ ತೆರಳಲಿದ್ದಾರೆ. ಮತಪತ್ರದ ಮೂಲಕ ಮತದಾನ ಮಾಡಬಹುದಾಗಿದೆ. ಮನೆಯಿಂದಲೇ ಮತದಾನದ ವಿಡಿಯೋಗ್ರಾಫ್ ಮಾಡಲಾಗುವುದು ಎಂದು ಚುನಾವಣಾಧಿಕಾರಿ ಮಾಹಿತಿ ನೀಡಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಅನಧಿಕೃತ ರ‍್ಯಾಲಿಗಳ ವಿರುದ್ಧ ಕ್ರಮ, 265 ಕೋಟಿ ರೂ. ಜಪ್ತಿ

ಅನಧಿಕೃತ ರ‍್ಯಾಲಿಗಳ ಸಂಬಂಧ ಈವರೆಗೆ 53 ಎಫ್ಐಆರ್ ದಾಖಲಿಸಲಾಗಿದೆ. ಗುಂಪು ಘರ್ಷಣೆ ಸಂಬಂಧ 15 ಎಫ್ಐಆರ್ ಹಾಗೂ ದ್ವೇಷ ಭಾಷಣ ಸಂಬಂಧ 5 ಎಫ್ಐಆರ್ ಸೇರಿದಂತೆ ಒಟ್ಟು 673 ಎಫ್ಐಆರ್​ಗಳನ್ನು ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಈವರೆಗೆ 265 ಕೋಟಿ ರೂ. ಹಣ ವಶಪಡಿಸಿಕೊಳ್ಳಲಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:31 pm, Wed, 26 April 23