AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Congress Bus Yatra:ಕರ್ನಾಟಕ ಕಾಂಗ್ರೆಸ್​ ಬಸ್ ಯಾತ್ರೆಗೆ ಮುಹೂರ್ತ ಫಿಕ್ಸ್, ಇಲ್ಲಿದೆ ವೇಳಾಪಟ್ಟಿ

ಕರ್ನಾಟಕ ಕಾಂಗ್ರೆಸ್​ ನಾಯಕರ ಜಂಟಿ ಬಸ್​ ಯಾತ್ರೆಗೆ ದಿನಾಂಕ ನಿಗದಿಯಾಗಿದ್ದು, ಬೆಳಗಾವಿಯಿಂದ ಪ್ರಾರಂಭವಾಗಲಿದೆ. ಇನ್ನು ಕಾಂಗ್ರೆಸ್​ನ ಬಸ್ ಯಾತ್ರೆಯ ವೇಳಾಪಟ್ಟಿ ಇಲ್ಲಿದೆ.

Congress Bus Yatra:ಕರ್ನಾಟಕ ಕಾಂಗ್ರೆಸ್​ ಬಸ್ ಯಾತ್ರೆಗೆ ಮುಹೂರ್ತ ಫಿಕ್ಸ್, ಇಲ್ಲಿದೆ ವೇಳಾಪಟ್ಟಿ
ಸಿದ್ದರಾಮಯ್ಯ, ಡಿಕೆ ಶಿವಕುಮಾರ್
TV9 Web
| Edited By: |

Updated on: Dec 19, 2022 | 8:29 PM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನೆಲೆಯಲ್ಲಿ ಕಾಂಗ್ರೆಸ್​ ಬಸ್ ಯಾತ್ರೆಗೆ (Congress Bus Yatra) ಮುಹೂರ್ತ ಫಿಕ್ಸ್​ ಆಗಿದ್ದು, ಜನವರಿ 11ರಿಂದ ಕಾಂಗ್ರೆಸ್ ನಾಯಕರ ಜಂಟಿ ಬಸ್ ಯಾತ್ರೆ ಆರಂಭವಾಗಲಿದೆ. ಬೆಳಗಾವಿಯಿಂದ ಶುರುವಾಗಲಿದ್ದು, ಒಟ್ಟೂ 21 ಜಿಲ್ಲೆಗಳಲ್ಲಿ ಬಸ್ ಯಾತ್ರೆ ಸಂಚರಿಸಲಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar) ಮಾಹಿತಿ ನೀಡಿದ್ದು, ಯಾವ ದಿನಾಂಕದಂದು ಎಲ್ಲಿ ಬಸ್ ಯಾತ್ರೆ ನಡೆಯಲಿದೆ ಎನ್ನುವ ರೂಟ್ ಮ್ಯಾಪ್​ ಈ ಕೆಳಗಿನಂತಿದೆ ನೋಡಿ.

ಇದನ್ನೂ ಓದಿ: Karnataka Assembly Poll 2023: ವಿಧಾನಸಭೆ ಚುನಾವಣೆಗೆ ಜೆಡಿಎಸ್​ ಮೊದಲ ಪಟ್ಟಿ ಪ್ರಕಟ: ಇಲ್ಲಿದೆ ವಿವರ

ಬೆಳಗಾವಿ ಜಿಲ್ಲೆ ದೊಡ್ಡದಿರುವುದರಿಂದ 2 ವಿಭಾಗ ಮಾಡಿಕೊಂಡಿದ್ದು, ಚಿಕ್ಕೋಡಿ, ಬೆಳಗಾವಿಯಲ್ಲಿ ತಲಾ ಒಂದು ಸಭೆ ನಡೆಸಲಿದ್ದಾರೆ. ಇನ್ನು ಜನವರಿ 14, 15ರಂದು ಸಂಕ್ರಾಂತಿ ಹಬ್ಬದ ಸಲುವಾಗಿ ಯಾತ್ರೆಗೆ ವಿರಾಮ ನೀಡಲಾಗಿದೆ. ಬೆಳಗಾವಿಯಲ್ಲೇ ಕಾಂಗ್ರೆಸ್​ನ ಪ್ರಥಮ ಅಧಿವೇಶನ ನಡೆದಿತ್ತು. ಹಾಗಾಗಿ ಬೆಳಗಾವಿಯಿಂದ ಬಸ್​ ಯಾತ್ರೆ ಆರಂಭ ಮಾಡುತ್ತಿರುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬಸ್​ ಯಾತ್ರೆ ವೇಳಾಪಟ್ಟಿ ಇಲ್ಲಿದೆ

* ಜನವರಿ 11ರಂದು ಬೆಳಗಾವಿ ಜಿಲ್ಲೆ * ಜನವರಿ 16ರಂದು ಹೊಸಪೇಟೆ * ಜನವರಿ 17ರಂದು ಕೊಪ್ಪಳದಲ್ಲಿ ಯಾತ್ರೆ * ಜನವರಿ 18ರಂದು ಬಾಗಲಕೋಟೆ, ಗದಗ ಜಿಲ್ಲೆಯಲ್ಲಿ ಬಸ್ ಯಾತ್ರೆ * ಜನವರಿ 19ರಂದು ಹಾವೇರಿ, ದಾವಣಗೆರೆ ಜಿಲ್ಲೆ * ಜನವರಿ 21 ಹಾಸನ, ಚಿಕ್ಕಮಗಳೂರು * ಜನವರಿ 22 ಉಡುಪಿ, ದಕ್ಷಿಣ ಕನ್ನಡ. * ಜನವರಿ 23 ಕೋಲಾರ, ಚಿಕ್ಕಬಳ್ಳಾಪುರ * ಜನವರಿ 24 ತುಮಕೂರು, ಬೆಂಗಳೂರು ಗ್ರಾಮಾಂತರ * ಜನವರಿ 25 ಚಾಮರಾಜನಗರ, ಮೈಸೂರು * ಜನವರಿ 26 ಮಂಡ್ಯ ಮತ್ತು ರಾಮನಗರ * ಜನವರಿ 27 ಯಾದಗಿರಿ-ಕಲಬುರಗಿ

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ