AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Congress Bus Yatra:ಕರ್ನಾಟಕ ಕಾಂಗ್ರೆಸ್​ ಬಸ್ ಯಾತ್ರೆಗೆ ಮುಹೂರ್ತ ಫಿಕ್ಸ್, ಇಲ್ಲಿದೆ ವೇಳಾಪಟ್ಟಿ

ಕರ್ನಾಟಕ ಕಾಂಗ್ರೆಸ್​ ನಾಯಕರ ಜಂಟಿ ಬಸ್​ ಯಾತ್ರೆಗೆ ದಿನಾಂಕ ನಿಗದಿಯಾಗಿದ್ದು, ಬೆಳಗಾವಿಯಿಂದ ಪ್ರಾರಂಭವಾಗಲಿದೆ. ಇನ್ನು ಕಾಂಗ್ರೆಸ್​ನ ಬಸ್ ಯಾತ್ರೆಯ ವೇಳಾಪಟ್ಟಿ ಇಲ್ಲಿದೆ.

Congress Bus Yatra:ಕರ್ನಾಟಕ ಕಾಂಗ್ರೆಸ್​ ಬಸ್ ಯಾತ್ರೆಗೆ ಮುಹೂರ್ತ ಫಿಕ್ಸ್, ಇಲ್ಲಿದೆ ವೇಳಾಪಟ್ಟಿ
ಸಿದ್ದರಾಮಯ್ಯ, ಡಿಕೆ ಶಿವಕುಮಾರ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Dec 19, 2022 | 8:29 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನೆಲೆಯಲ್ಲಿ ಕಾಂಗ್ರೆಸ್​ ಬಸ್ ಯಾತ್ರೆಗೆ (Congress Bus Yatra) ಮುಹೂರ್ತ ಫಿಕ್ಸ್​ ಆಗಿದ್ದು, ಜನವರಿ 11ರಿಂದ ಕಾಂಗ್ರೆಸ್ ನಾಯಕರ ಜಂಟಿ ಬಸ್ ಯಾತ್ರೆ ಆರಂಭವಾಗಲಿದೆ. ಬೆಳಗಾವಿಯಿಂದ ಶುರುವಾಗಲಿದ್ದು, ಒಟ್ಟೂ 21 ಜಿಲ್ಲೆಗಳಲ್ಲಿ ಬಸ್ ಯಾತ್ರೆ ಸಂಚರಿಸಲಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar) ಮಾಹಿತಿ ನೀಡಿದ್ದು, ಯಾವ ದಿನಾಂಕದಂದು ಎಲ್ಲಿ ಬಸ್ ಯಾತ್ರೆ ನಡೆಯಲಿದೆ ಎನ್ನುವ ರೂಟ್ ಮ್ಯಾಪ್​ ಈ ಕೆಳಗಿನಂತಿದೆ ನೋಡಿ.

ಇದನ್ನೂ ಓದಿ: Karnataka Assembly Poll 2023: ವಿಧಾನಸಭೆ ಚುನಾವಣೆಗೆ ಜೆಡಿಎಸ್​ ಮೊದಲ ಪಟ್ಟಿ ಪ್ರಕಟ: ಇಲ್ಲಿದೆ ವಿವರ

ಬೆಳಗಾವಿ ಜಿಲ್ಲೆ ದೊಡ್ಡದಿರುವುದರಿಂದ 2 ವಿಭಾಗ ಮಾಡಿಕೊಂಡಿದ್ದು, ಚಿಕ್ಕೋಡಿ, ಬೆಳಗಾವಿಯಲ್ಲಿ ತಲಾ ಒಂದು ಸಭೆ ನಡೆಸಲಿದ್ದಾರೆ. ಇನ್ನು ಜನವರಿ 14, 15ರಂದು ಸಂಕ್ರಾಂತಿ ಹಬ್ಬದ ಸಲುವಾಗಿ ಯಾತ್ರೆಗೆ ವಿರಾಮ ನೀಡಲಾಗಿದೆ. ಬೆಳಗಾವಿಯಲ್ಲೇ ಕಾಂಗ್ರೆಸ್​ನ ಪ್ರಥಮ ಅಧಿವೇಶನ ನಡೆದಿತ್ತು. ಹಾಗಾಗಿ ಬೆಳಗಾವಿಯಿಂದ ಬಸ್​ ಯಾತ್ರೆ ಆರಂಭ ಮಾಡುತ್ತಿರುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬಸ್​ ಯಾತ್ರೆ ವೇಳಾಪಟ್ಟಿ ಇಲ್ಲಿದೆ

* ಜನವರಿ 11ರಂದು ಬೆಳಗಾವಿ ಜಿಲ್ಲೆ * ಜನವರಿ 16ರಂದು ಹೊಸಪೇಟೆ * ಜನವರಿ 17ರಂದು ಕೊಪ್ಪಳದಲ್ಲಿ ಯಾತ್ರೆ * ಜನವರಿ 18ರಂದು ಬಾಗಲಕೋಟೆ, ಗದಗ ಜಿಲ್ಲೆಯಲ್ಲಿ ಬಸ್ ಯಾತ್ರೆ * ಜನವರಿ 19ರಂದು ಹಾವೇರಿ, ದಾವಣಗೆರೆ ಜಿಲ್ಲೆ * ಜನವರಿ 21 ಹಾಸನ, ಚಿಕ್ಕಮಗಳೂರು * ಜನವರಿ 22 ಉಡುಪಿ, ದಕ್ಷಿಣ ಕನ್ನಡ. * ಜನವರಿ 23 ಕೋಲಾರ, ಚಿಕ್ಕಬಳ್ಳಾಪುರ * ಜನವರಿ 24 ತುಮಕೂರು, ಬೆಂಗಳೂರು ಗ್ರಾಮಾಂತರ * ಜನವರಿ 25 ಚಾಮರಾಜನಗರ, ಮೈಸೂರು * ಜನವರಿ 26 ಮಂಡ್ಯ ಮತ್ತು ರಾಮನಗರ * ಜನವರಿ 27 ಯಾದಗಿರಿ-ಕಲಬುರಗಿ

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!