AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Congress Bus Yatra:ಕರ್ನಾಟಕ ಕಾಂಗ್ರೆಸ್​ ಬಸ್ ಯಾತ್ರೆಗೆ ಮುಹೂರ್ತ ಫಿಕ್ಸ್, ಇಲ್ಲಿದೆ ವೇಳಾಪಟ್ಟಿ

ಕರ್ನಾಟಕ ಕಾಂಗ್ರೆಸ್​ ನಾಯಕರ ಜಂಟಿ ಬಸ್​ ಯಾತ್ರೆಗೆ ದಿನಾಂಕ ನಿಗದಿಯಾಗಿದ್ದು, ಬೆಳಗಾವಿಯಿಂದ ಪ್ರಾರಂಭವಾಗಲಿದೆ. ಇನ್ನು ಕಾಂಗ್ರೆಸ್​ನ ಬಸ್ ಯಾತ್ರೆಯ ವೇಳಾಪಟ್ಟಿ ಇಲ್ಲಿದೆ.

Congress Bus Yatra:ಕರ್ನಾಟಕ ಕಾಂಗ್ರೆಸ್​ ಬಸ್ ಯಾತ್ರೆಗೆ ಮುಹೂರ್ತ ಫಿಕ್ಸ್, ಇಲ್ಲಿದೆ ವೇಳಾಪಟ್ಟಿ
ಸಿದ್ದರಾಮಯ್ಯ, ಡಿಕೆ ಶಿವಕುಮಾರ್
TV9 Web
| Edited By: |

Updated on: Dec 19, 2022 | 8:29 PM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನೆಲೆಯಲ್ಲಿ ಕಾಂಗ್ರೆಸ್​ ಬಸ್ ಯಾತ್ರೆಗೆ (Congress Bus Yatra) ಮುಹೂರ್ತ ಫಿಕ್ಸ್​ ಆಗಿದ್ದು, ಜನವರಿ 11ರಿಂದ ಕಾಂಗ್ರೆಸ್ ನಾಯಕರ ಜಂಟಿ ಬಸ್ ಯಾತ್ರೆ ಆರಂಭವಾಗಲಿದೆ. ಬೆಳಗಾವಿಯಿಂದ ಶುರುವಾಗಲಿದ್ದು, ಒಟ್ಟೂ 21 ಜಿಲ್ಲೆಗಳಲ್ಲಿ ಬಸ್ ಯಾತ್ರೆ ಸಂಚರಿಸಲಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar) ಮಾಹಿತಿ ನೀಡಿದ್ದು, ಯಾವ ದಿನಾಂಕದಂದು ಎಲ್ಲಿ ಬಸ್ ಯಾತ್ರೆ ನಡೆಯಲಿದೆ ಎನ್ನುವ ರೂಟ್ ಮ್ಯಾಪ್​ ಈ ಕೆಳಗಿನಂತಿದೆ ನೋಡಿ.

ಇದನ್ನೂ ಓದಿ: Karnataka Assembly Poll 2023: ವಿಧಾನಸಭೆ ಚುನಾವಣೆಗೆ ಜೆಡಿಎಸ್​ ಮೊದಲ ಪಟ್ಟಿ ಪ್ರಕಟ: ಇಲ್ಲಿದೆ ವಿವರ

ಬೆಳಗಾವಿ ಜಿಲ್ಲೆ ದೊಡ್ಡದಿರುವುದರಿಂದ 2 ವಿಭಾಗ ಮಾಡಿಕೊಂಡಿದ್ದು, ಚಿಕ್ಕೋಡಿ, ಬೆಳಗಾವಿಯಲ್ಲಿ ತಲಾ ಒಂದು ಸಭೆ ನಡೆಸಲಿದ್ದಾರೆ. ಇನ್ನು ಜನವರಿ 14, 15ರಂದು ಸಂಕ್ರಾಂತಿ ಹಬ್ಬದ ಸಲುವಾಗಿ ಯಾತ್ರೆಗೆ ವಿರಾಮ ನೀಡಲಾಗಿದೆ. ಬೆಳಗಾವಿಯಲ್ಲೇ ಕಾಂಗ್ರೆಸ್​ನ ಪ್ರಥಮ ಅಧಿವೇಶನ ನಡೆದಿತ್ತು. ಹಾಗಾಗಿ ಬೆಳಗಾವಿಯಿಂದ ಬಸ್​ ಯಾತ್ರೆ ಆರಂಭ ಮಾಡುತ್ತಿರುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬಸ್​ ಯಾತ್ರೆ ವೇಳಾಪಟ್ಟಿ ಇಲ್ಲಿದೆ

* ಜನವರಿ 11ರಂದು ಬೆಳಗಾವಿ ಜಿಲ್ಲೆ * ಜನವರಿ 16ರಂದು ಹೊಸಪೇಟೆ * ಜನವರಿ 17ರಂದು ಕೊಪ್ಪಳದಲ್ಲಿ ಯಾತ್ರೆ * ಜನವರಿ 18ರಂದು ಬಾಗಲಕೋಟೆ, ಗದಗ ಜಿಲ್ಲೆಯಲ್ಲಿ ಬಸ್ ಯಾತ್ರೆ * ಜನವರಿ 19ರಂದು ಹಾವೇರಿ, ದಾವಣಗೆರೆ ಜಿಲ್ಲೆ * ಜನವರಿ 21 ಹಾಸನ, ಚಿಕ್ಕಮಗಳೂರು * ಜನವರಿ 22 ಉಡುಪಿ, ದಕ್ಷಿಣ ಕನ್ನಡ. * ಜನವರಿ 23 ಕೋಲಾರ, ಚಿಕ್ಕಬಳ್ಳಾಪುರ * ಜನವರಿ 24 ತುಮಕೂರು, ಬೆಂಗಳೂರು ಗ್ರಾಮಾಂತರ * ಜನವರಿ 25 ಚಾಮರಾಜನಗರ, ಮೈಸೂರು * ಜನವರಿ 26 ಮಂಡ್ಯ ಮತ್ತು ರಾಮನಗರ * ಜನವರಿ 27 ಯಾದಗಿರಿ-ಕಲಬುರಗಿ

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ