AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Politics: ಕಾಂಗ್ರೆಸ್​​ನಿಂದ ರಾತ್ರಿ ಶಾಲೆ; ಆನ್​​ಲೈನ್​ ಪಾಠದ ಮೂಲಕ ಅಭ್ಯರ್ಥಿಗಳಿಗೆ ಖಡಕ್​ ಸೂಚನೆ ಕೊಟ್ಟ ನಾಯಕರು

ಸರ್ಕಾರ ರಚನೆಗೆ ಕಾಂಗ್ರೆಸ್ ನಾಯಕರು​​ ಸಿದ್ದವಾಗಿದ್ದು, ಸೂಟು-ಬೂಟು ಖರೀದಿಸಿದ್ದಾರೆ. ಇನ್ನೂ ಕೈ ಪಾಳಯ ಫಲಿತಾಂಶಕ್ಕೂ ಮುನ್ನ ಅಲರ್ಟ್ ಆಗಿದ್ದು, ಎಚ್ಚರಿಕೆಯ ಹೆಜ್ಜೆ ಇಡಲು ನಿರ್ಧರಿಸಿದೆ. ಸರ್ಕಾರ ನಮ್ಮದೇ ಎಂಬ ಬಿಜೆಪಿ ಹೇಳಿಕೆ ನಿರ್ಲಕ್ಷ್ಯ ಮಾಡದ ಕಾಂಗ್ರೆಸ್, ರಾತ್ರಿ ಶಾಲೆ ತೆರೆದಿದೆ.

Karnataka Politics: ಕಾಂಗ್ರೆಸ್​​ನಿಂದ ರಾತ್ರಿ ಶಾಲೆ; ಆನ್​​ಲೈನ್​ ಪಾಠದ ಮೂಲಕ ಅಭ್ಯರ್ಥಿಗಳಿಗೆ ಖಡಕ್​ ಸೂಚನೆ ಕೊಟ್ಟ ನಾಯಕರು
ಕಾಂಗ್ರೆಸ್​ ನಾಯಕರು
ವಿವೇಕ ಬಿರಾದಾರ
|

Updated on: May 12, 2023 | 9:01 AM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ (Karnataka Assembly Election 2023) ಮತದಾನ (Voting) ಮುಕ್ತಾಯವಾಗಿದ್ದು ಮೇ.13 ರಂದು ಮತ ಎಣಿಕೆ (Vote Counting) ಆರಂಭವಾಗಲಿದೆ. ಮೂರು ಪಕ್ಷಗಳು ನಾವು ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುತ್ತೇವೆ ಎಂಬ ವಿಶ್ವಾಸದಲ್ಲಿವೆ. ಈಗಾಗಲೆ ಎಕ್ಸಿಟ್​ ಪೋಲ್​​​ನಲ್ಲಿ (Exit Poll) ಕಾಂಗ್ರೆಸ್​​ಗೆ (Congress) ಪೂರ್ಣ ಬಹುಮತ ಸಿಗಲಿದೆ ಎಂದು ರಿಪೋರ್ಟ್​​ ಬಂದಿದೆ. ಇದರಿಂದ ಕಾಂಗ್ರೆಸ್​ ನಾಯಕರು ಹಿರಿ ಹಿರಿ ಹಿಗ್ಗಿದಂತೆ ಕಾಣುತ್ತಿದ್ದು, ಬಿಜೆಪಿ (BJP) ಪಾಳಯದಲ್ಲಿ ಬೇಸರದ ಛಾಯೆ ಕಾಣುತ್ತಿದೆ. ಸರ್ಕಾರ ರಚನೆಗೆ ಕಾಂಗ್ರೆಸ್ ನಾಯಕರು​​ ಸಿದ್ದವಾಗಿದ್ದು, ಸೂಟು-ಬೂಟು ಖರೀದಿಸಿದ್ದಾರೆ. ಇನ್ನೂ ಕೈ ಪಾಳಯ ಫಲಿತಾಂಶಕ್ಕೂ ಮುನ್ನ ಅಲರ್ಟ್ ಆಗಿದ್ದು, ಎಚ್ಚರಿಕೆಯ ಹೆಜ್ಜೆ ಇಡಲು ನಿರ್ಧರಿಸಿದೆ.

ಸರ್ಕಾರ ನಮ್ಮದೇ ಎಂಬ ಬಿಜೆಪಿ ಹೇಳಿಕೆ ನಿರ್ಲಕ್ಷ್ಯ ಮಾಡದ ಕಾಂಗ್ರೆಸ್, ರಾತ್ರಿ ಶಾಲೆ ತೆರೆದಿದೆ. ಈ ಶಾಲೆಯಲ್ಲಿ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೇವಾಲ, ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​​ ​ಅಭ್ಯರ್ಥಿಗಳಿಗೆ ಎರಡು ತಾಸು ವರ್ಚುವಲ್​ ಮೂಲಕ ಪಾಠ ಮಾಡಿದ್ದಾರೆ.

ಇದನ್ನೂ ಓದಿ: ‘ಮೈತ್ರಿಗೆ ನಾವು ಸಿದ್ಧ’ ಆದ್ರೆ ಕೆಲವು ಷರತ್ತುಗಳಿಗೆ ಒಪ್ಪಬೇಕು; ನಿಲುವು ಸ್ಪಷ್ಟಪಡಿಸಿದ ಹೆಚ್​ಡಿ ಕುಮಾರಸ್ವಾಮಿ

ವರ್ಚೂವಲ್​ ಸಭೆಯಲ್ಲಿ ನಾಯಕರು, ಸ್ಟ್ರಾಂಗ್​ ರೂಂಗಳ ಮೇಲೆ ಗಮನ ಇಡುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ. ಈ ಬಾರಿ ಕಾಂಗ್ರೆಸ್​​ ಪಕ್ಷಕ್ಕೆ ಸರ್ಕಾರ ರಚಿಸು​ವ ಅವಕಾಶ ಸಿಗಲಿದೆ. ಆಪರೇಷನ್​‌ಗೆ ಒಳಗಾಗಬೇಡಿ, ಅನ್ಯ ಪಕ್ಷಗಳ ಆಮಿಷಗಳಿಗೆ ಬಲಿಯಾಗಬೇಡಿ. ಲೀಡ್​ ಸಿಗುತ್ತಿದ್ದಂತೆ ಬೆಂಗಳೂರಿಗೆ ಬನ್ನಿ. ಸರ್ಕಾರ ರಚನೆಯಾಗುವವರೆಗೂ ನಾವು ಸೂಚಿಸಿದ ಸ್ಥಳದಲ್ಲಿ ಇರಬೇಕು ಎಂದು ಅಭ್ಯರ್ಥಿಗಳಿಗೆ ನಾಯಕರು ಸೂಚನೆ ನೀಡಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ