AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Politics: ಕಾಂಗ್ರೆಸ್​​ನಿಂದ ರಾತ್ರಿ ಶಾಲೆ; ಆನ್​​ಲೈನ್​ ಪಾಠದ ಮೂಲಕ ಅಭ್ಯರ್ಥಿಗಳಿಗೆ ಖಡಕ್​ ಸೂಚನೆ ಕೊಟ್ಟ ನಾಯಕರು

ಸರ್ಕಾರ ರಚನೆಗೆ ಕಾಂಗ್ರೆಸ್ ನಾಯಕರು​​ ಸಿದ್ದವಾಗಿದ್ದು, ಸೂಟು-ಬೂಟು ಖರೀದಿಸಿದ್ದಾರೆ. ಇನ್ನೂ ಕೈ ಪಾಳಯ ಫಲಿತಾಂಶಕ್ಕೂ ಮುನ್ನ ಅಲರ್ಟ್ ಆಗಿದ್ದು, ಎಚ್ಚರಿಕೆಯ ಹೆಜ್ಜೆ ಇಡಲು ನಿರ್ಧರಿಸಿದೆ. ಸರ್ಕಾರ ನಮ್ಮದೇ ಎಂಬ ಬಿಜೆಪಿ ಹೇಳಿಕೆ ನಿರ್ಲಕ್ಷ್ಯ ಮಾಡದ ಕಾಂಗ್ರೆಸ್, ರಾತ್ರಿ ಶಾಲೆ ತೆರೆದಿದೆ.

Karnataka Politics: ಕಾಂಗ್ರೆಸ್​​ನಿಂದ ರಾತ್ರಿ ಶಾಲೆ; ಆನ್​​ಲೈನ್​ ಪಾಠದ ಮೂಲಕ ಅಭ್ಯರ್ಥಿಗಳಿಗೆ ಖಡಕ್​ ಸೂಚನೆ ಕೊಟ್ಟ ನಾಯಕರು
ಕಾಂಗ್ರೆಸ್​ ನಾಯಕರು
Follow us
ವಿವೇಕ ಬಿರಾದಾರ
|

Updated on: May 12, 2023 | 9:01 AM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ (Karnataka Assembly Election 2023) ಮತದಾನ (Voting) ಮುಕ್ತಾಯವಾಗಿದ್ದು ಮೇ.13 ರಂದು ಮತ ಎಣಿಕೆ (Vote Counting) ಆರಂಭವಾಗಲಿದೆ. ಮೂರು ಪಕ್ಷಗಳು ನಾವು ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುತ್ತೇವೆ ಎಂಬ ವಿಶ್ವಾಸದಲ್ಲಿವೆ. ಈಗಾಗಲೆ ಎಕ್ಸಿಟ್​ ಪೋಲ್​​​ನಲ್ಲಿ (Exit Poll) ಕಾಂಗ್ರೆಸ್​​ಗೆ (Congress) ಪೂರ್ಣ ಬಹುಮತ ಸಿಗಲಿದೆ ಎಂದು ರಿಪೋರ್ಟ್​​ ಬಂದಿದೆ. ಇದರಿಂದ ಕಾಂಗ್ರೆಸ್​ ನಾಯಕರು ಹಿರಿ ಹಿರಿ ಹಿಗ್ಗಿದಂತೆ ಕಾಣುತ್ತಿದ್ದು, ಬಿಜೆಪಿ (BJP) ಪಾಳಯದಲ್ಲಿ ಬೇಸರದ ಛಾಯೆ ಕಾಣುತ್ತಿದೆ. ಸರ್ಕಾರ ರಚನೆಗೆ ಕಾಂಗ್ರೆಸ್ ನಾಯಕರು​​ ಸಿದ್ದವಾಗಿದ್ದು, ಸೂಟು-ಬೂಟು ಖರೀದಿಸಿದ್ದಾರೆ. ಇನ್ನೂ ಕೈ ಪಾಳಯ ಫಲಿತಾಂಶಕ್ಕೂ ಮುನ್ನ ಅಲರ್ಟ್ ಆಗಿದ್ದು, ಎಚ್ಚರಿಕೆಯ ಹೆಜ್ಜೆ ಇಡಲು ನಿರ್ಧರಿಸಿದೆ.

ಸರ್ಕಾರ ನಮ್ಮದೇ ಎಂಬ ಬಿಜೆಪಿ ಹೇಳಿಕೆ ನಿರ್ಲಕ್ಷ್ಯ ಮಾಡದ ಕಾಂಗ್ರೆಸ್, ರಾತ್ರಿ ಶಾಲೆ ತೆರೆದಿದೆ. ಈ ಶಾಲೆಯಲ್ಲಿ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೇವಾಲ, ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​​ ​ಅಭ್ಯರ್ಥಿಗಳಿಗೆ ಎರಡು ತಾಸು ವರ್ಚುವಲ್​ ಮೂಲಕ ಪಾಠ ಮಾಡಿದ್ದಾರೆ.

ಇದನ್ನೂ ಓದಿ: ‘ಮೈತ್ರಿಗೆ ನಾವು ಸಿದ್ಧ’ ಆದ್ರೆ ಕೆಲವು ಷರತ್ತುಗಳಿಗೆ ಒಪ್ಪಬೇಕು; ನಿಲುವು ಸ್ಪಷ್ಟಪಡಿಸಿದ ಹೆಚ್​ಡಿ ಕುಮಾರಸ್ವಾಮಿ

ವರ್ಚೂವಲ್​ ಸಭೆಯಲ್ಲಿ ನಾಯಕರು, ಸ್ಟ್ರಾಂಗ್​ ರೂಂಗಳ ಮೇಲೆ ಗಮನ ಇಡುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ. ಈ ಬಾರಿ ಕಾಂಗ್ರೆಸ್​​ ಪಕ್ಷಕ್ಕೆ ಸರ್ಕಾರ ರಚಿಸು​ವ ಅವಕಾಶ ಸಿಗಲಿದೆ. ಆಪರೇಷನ್​‌ಗೆ ಒಳಗಾಗಬೇಡಿ, ಅನ್ಯ ಪಕ್ಷಗಳ ಆಮಿಷಗಳಿಗೆ ಬಲಿಯಾಗಬೇಡಿ. ಲೀಡ್​ ಸಿಗುತ್ತಿದ್ದಂತೆ ಬೆಂಗಳೂರಿಗೆ ಬನ್ನಿ. ಸರ್ಕಾರ ರಚನೆಯಾಗುವವರೆಗೂ ನಾವು ಸೂಚಿಸಿದ ಸ್ಥಳದಲ್ಲಿ ಇರಬೇಕು ಎಂದು ಅಭ್ಯರ್ಥಿಗಳಿಗೆ ನಾಯಕರು ಸೂಚನೆ ನೀಡಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?