AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Congress Manifesto 2023: ಈ ಬಾರಿ ಚುನಾವಣೆಯಲ್ಲಿ ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಕಾಂಗ್ರೆಸ್, ಶೇ.50ರಿಂದ ಶೇ.75ಕ್ಕೇರಿಸುವ ಭರವಸೆ

ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್​ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಈ ಬಾರಿ ಚುನಾವಣೆಗೆ ಮೀಸಲಾತಿ ಅಸ್ತ್ರವನ್ನು ಪ್ರಯೋಗಿಸಿದೆ.

Congress Manifesto 2023: ಈ ಬಾರಿ ಚುನಾವಣೆಯಲ್ಲಿ ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಕಾಂಗ್ರೆಸ್, ಶೇ.50ರಿಂದ ಶೇ.75ಕ್ಕೇರಿಸುವ ಭರವಸೆ
ರಮೇಶ್ ಬಿ. ಜವಳಗೇರಾ
|

Updated on: May 02, 2023 | 11:09 AM

Share

ಬೆಂಗಳೂರು: ಕಾಂಗ್ರೆಸ್​ ಈಗಾಗಲೇ ಆರು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿರುವ ಕಾಂಗ್ರೆಸ್‌, ಇನ್ನೂ ಹತ್ತು ಹಲವು ಭರವಸೆಗಳನ್ನು ಒಳಗೊಂಡ ‘ಸರ್ವ ಜನಾಂಗದ ಶಾಂತಿಯ ತೋಟ ಇದುವೆ ಕಾಂಗ್ರೆಸ್​ ಬದ್ಧತೆ’ ಎನ್ನುವ ಹೆಸರಿನಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಇಂದು(ಮೇ 02) ಬಿಡುಗಡೆ ಮಾಡಿದೆ. ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಕರಾವಳಿ ಕರ್ನಾಟಕ, ಮಲೆನಾಡು ಪ್ರದೇಶ ಹಾಗೂ ಬೆಂಗಳೂರು ನಗರಗಳಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಪ್ರಣಾಳಿಕೆಯಲ್ಲಿ ಕರ್ನಾಟಕದ ಜನತೆಗೆ ಹಲವು ಭರಪೂರ ಕೊಡುಗೆಗಳ ಭರವಸೆ ನೀಡಿದೆ. ಅದರಲ್ಲೂ ಮುಖ್ಯವಾಗಿ ಕಾಂಗ್ರೆಸ್​, ಈಗಿರುವ ಒಟ್ಟಾರೆ ಮೀಸಲಾತಿಯನ್ನು ಶೇ.50ರಿಂದ ಶೇ75ಕ್ಕೆ ಹೆಚ್ಚಿಸುವುದಾಗಿ ಮಹತ್ವದ ಭರಸವೆ ನೀಡಿದೆ.

ಇದನ್ನೂ ಓದಿ: Karnataka Congress Manifesto: ಕಾಂಗ್ರೆಸ್​ನ ಪ್ರಣಾಳಿಕೆ ಬಿಡುಗಡೆ, ಕರ್ನಾಟಕಕ್ಕೆ ಏನೆಲ್ಲಾ ಭರವಸೆ?

ಹೌದು….ಎಸ್.ಸಿ ಎಸ್.ಟಿ ಮೀಸಲಾತಿ ಸೇರಿದಂತೆ ಶೇ.50 ರಿಂದ ಶೇ.75ಕ್ಕೆ ಏರಿಕೆಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಕಾಂಗ್ರೆಸ್​ ತನ್ನ ಸರ್ವಜನಾಂಗದ ಶಾಂತಿಯ ತೋಟ ವಾಗ್ದಾನಗಳ ಪಟ್ಟಿಯಲ್ಲಿ ತಿಳಿಸಿದೆ. ಎಸ್.ಸಿ ಮೀಸಲಾತಿ ಶೇ.17ಕ್ಕೆ ಏರಿಕೆ, ಎಸ್.ಟಿ ಮೀಸಲಾತಿ ಶೇ. 7ಕ್ಕೆ ಏರಿಕೆ ಮಾಡುವುದಾಗಿ ಹೇಳಿದೆ. ಅಲ್ಲದೇ ಅಲ್ಪ ಸಂಖ್ಯಾತರಿಗೆ ಶೇ.4 ರ ಮೀಸಲಾತಿ ಮರು ಸ್ಥಾಪನೆ ಮಾಡುವುದಾಗಿ ಭರವಸೆ ನೀಡಿದೆ.

ಇತ್ತೀಚೆಗೆಷ್ಟೇ ಕರ್ನಾಟಕದಲ್ಲಿ ಜಾತಿ ಮೀಸಲಾತಿ ಹೋರಾಟಗಳೇ ಸದ್ದು ಮಾಡಿದ್ದವು. ಪಂಚಮಸಾಲಿ, ಕುರುಬ, ಒಕ್ಕಲಿಗ ಸಮುದಾಯಗಳುಸೇರಿ ಹಲವು ಸಮುದಾಯಗಳು ಮೀಸಲಾತಿ ವಿಚಾರವಾಗಿ ಬೀದಿಗಿಳಿದಿದ್ದವು. ಎಸ್‌ಸಿ/ಎಸ್‌ಟಿ ಸಮುದಾಯಗಳು ಕೂಡ ಮೀಸಲು ಹೆಚ್ಚಳಕ್ಕೆ ಹೋರಾಟ ಮಾಡಿ ಭಾಗಶಃ ಯಶಸ್ವಿಯಾಗಿವೆ. ಸಾಲು ಸಾಲು ಮೀಸಲಾತಿ ಹೋರಾಟಗಳಿಂದ ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಇದರ ಮಧ್ಯೆ ಇದೀಗ ಕಾಂಗ್ರೆಸ್, ಈ ವಿಧಾನಸಭೆ ಚುನಾವಣೆಯಲ್ಲಿ ಈ ಮೂಲಕ ಕಾಂಗ್ರೆಸ್​ ಈ ಬಾರಿಯ ಚುನಾವಣೆಗೆ ಮೀಸಲಾತಿ ಅಸ್ತ್ರ ಪ್ರಯೋಗಿಸಿದೆ.

ಈಗಿರುವ ಒಟ್ಟಾರೆ ಮೀಸಲಾತಿ  ಶೇ 50ರಿಂದ ಹೇಗೆ ಹೆಚ್ಚಿಸಬಹುದು?

ಶೇ.50ರಷ್ಟು ಮೀಸಲು ಹೆಚ್ಚಿಸಬೇಕೆಂದರೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕಿದೆ. ಇದಕ್ಕಾಗಿ ಸಂಸತ್‌ನ ಎರಡು ಸದನಗಳಲ್ಲಿ ಮಸೂದೆ ಪಾಸ್‌ ಮಾಡಿಕೊಂಡು ಬಳಿಕ, ಶೇ.50ಕ್ಕೂ ಹೆಚ್ಚು ರಾಜ್ಯಗಳು ಒಪ್ಪಿಗೆ ಸೂಚಿಸಬೇಕಿದೆ. ಬಳಿಕ ರಾಷ್ಟ್ರಪತಿಗಳ ಅಂಕಿತ ಬೇಕು. ಇಷ್ಟೊಂದು ಸಂಕೀರ್ಣ ಪ್ರಕ್ರಿಯೆ ಮುಗಿದ ಬಳಿಕ ಸಂವಿಧಾನದ ತಿದ್ದುಪಡಿಯಾಗಿ ಮೀಸಲಾತಿ ಹೆಚ್ಚಳವಾಗುತ್ತದೆ.

ವಿವಿಧ ರಾಜ್ಯಗಳಲ್ಲಿ ಮೀಸಲಾತಿ ಪ್ರಮಾಣ ಎಷ್ಟಿದೆ ಎನ್ನುವುದನ್ನು ನೋಡುವುದಾದರೆ ಕರ್ನಾಟಕ – 50, ಮಹಾರಾಷ್ಟ್ರ – 73, ತಮಿಳುನಾಡು – 69. ತೆಲಂಗಾಣ – 62. ಕೇರಳ – 50. ಆಂಧ್ರ ಪ್ರದೇಶ – 50ರಷ್ಟು ಒಟ್ಟು ಮೀಸಲಾತಿ ಇದೆ. ಮೀಸಲು ಪ್ರಮಾಣ ಶೇ.50 ಅನ್ನು ಮೀರಬಾರದು ಎಂಬ ಸುಪ್ರೀಂ ಕೋರ್ಟ್ ಕಟ್ಟಪ್ಪಣೆ ಇರುವುದರಿಂದ ಸರ್ಕಾರಗಳು ಶೇ.50ರಷ್ಟು ಮೀಸಲಾತಿಯಲ್ಲೇ ಎಲ್ಲ ಸಮುದಾಯಗಳ ಬೇಡಿಕೆಯನ್ನು ಈಡೇರಿಸಬೇಕಾದ ಅನಿವಾರ್ಯತೆಗೆ ಸಿಲುಕಿವೆ. ಒಂದು ಸಮುದಾಯದ ಮೀಸಲಾತಿ ಹೆಚ್ಚಿಸಿದರೆ ಮತ್ತೊಂದು ಜಾತಿಯ ಮೀಸಲು ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.

ಮೀಸಲಾತಿಯಲ್ಲಿ ಬದಲಾವಣೆ ಮಾಡಿದ್ದ ಸರ್ಕಾರ

ಇನ್ನು ಇತ್ತೀಚೆಗಷ್ಟೇ ಆಡಳಿತರೂಢ ಬಿಜೆಪಿ ಸರ್ಕಾರ ಕೆಲ ಸಮುದಾಯಗಳ ಮೀಸಲಾತಿಯಲ್ಲಿ ಬದಲಾವಣೆ ಮಾಡಿತ್ತು. ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿ ಪ್ರಮಾಣವನ್ನು ಶೇ. 15 ರಿಂದ ಶೇ 17ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ. 3 ರಿಂದ ಶೇ.7ಕ್ಕೆ ಹೆಚ್ಚಳ ಮಾಡಿ ಅಧಿಸೂಚನೆ ಹೊರಡಿಸಿತ್ತು. ಇನ್ನುಅಲ್ಪ ಸಂಖ್ಯಾತರಿಗೆ ಈ ಹಿಂದೆ 2ಬಿಯಡಿ ನೀಡುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಿ ಕರ್ನಾಟಕದ ಎರಡು ಪ್ರಬಲ ಸಮುದಾಯಗಳಾದ ಒಕ್ಕಲಿಗ ಮತ್ತು ಲಿಂಗಾಯಿತ ಸಮುದಾಯಕ್ಕೆ ಸೇರಿಸಲು ನಿರ್ಧರಿಸಲಾಗಿತ್ತು. ಒಕ್ಕಲಿಗ ಸಮುದಾಯಕ್ಕೆ ಮತ್ತು ಲಿಂಗಾಯಿತರಿಗೆ 2ಸಿ ಮತ್ತು 2ಡಿಯಡಿ ನೀಡುತ್ತಿದ್ದ ಮೀಸಲಾತಿ ಪ್ರಮಾಣವನ್ನು ಶೇಕಡ 4ರಿಂದ 6ಕ್ಕೆ ಹಾಗೂ ಶೇಕಡ 5ರಿಂದ 7ಕ್ಕೆ ಏರಿಕೆ ಮಾಡಲಾಗಿದ್ದು, ಈ ಬಗ್ಗೆ ಕೋರ್ಟ್​ನಲ್ಲಿ ವಿಚಾರಣೆಯಲ್ಲಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ