AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಆಯ್ಕೆ ಕಗ್ಗಂಟಿಗೆ ಮುಕ್ತಿ, ಈಗ ಸಚಿವ ಸ್ಥಾನಕ್ಕಾಗಿ ಲಾಬಿ ಶುರು: ತಂಡೋಪತಂಡವಾಗಿ ದೆಹಲಿಗೆ ತೆರಳಿದ ಶಾಸಕರು

ಸಿಎಂ ಆಯ್ಕೆ ಕಗ್ಗಂಟು ಬಿಡಿಸಿದ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಹೈಕಮಾಂಡ್​ಗೆ ಸಂಪುಟ ರಚನೆ ಸವಾಲ್ ಎದುರಾಗಿದೆ. ಸಚಿವ ಸ್ಥಾನಕ್ಕಾಗಿ ಭರ್ಜರಿ ಲಾಬಿ ನಡೆಸುತ್ತಿರುವ ಶಾಸಕರು ತಂಡೋಪತಂಡವಾಗಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಸಿಎಂ ಆಯ್ಕೆ ಕಗ್ಗಂಟಿಗೆ ಮುಕ್ತಿ, ಈಗ ಸಚಿವ ಸ್ಥಾನಕ್ಕಾಗಿ ಲಾಬಿ ಶುರು: ತಂಡೋಪತಂಡವಾಗಿ ದೆಹಲಿಗೆ ತೆರಳಿದ ಶಾಸಕರು
ಕರ್ನಾಟಕ ಕಾಂಗ್ರೆಸ್ ಶಾಸಕರು
ರಮೇಶ್ ಬಿ. ಜವಳಗೇರಾ
|

Updated on: May 19, 2023 | 8:31 AM

Share

ಬೆಂಗಳೂರು:  ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹೆಗಲಿಗೆ ಕಾಂಗ್ರೆಸ್ ಹೈಕಮಾಂಡ್​ ಕರ್ನಾಟಕ ಆಡಳಿತದ ನೊಗ ಕಟ್ಟಿದ್ದಾರೆ. ನಾಳೆಯಿಂದಲೇ (ಮೇ 20) ರಾಜ್ಯದಲ್ಲಿ ಕಾಂಗ್ರೆಸ್ ಆಡಳಿ ಶುರುವಾಗಲಿದೆ. ಸಿಎಂ ಆಯ್ಕೆ ಸರ್ಕಸ್ ಬಳಿಕ ಕೈ ಪಾಳಯದಲ್ಲಿ ಸಚಿವ ಸಂಪುಟ ಕಸರತ್ತು ನಡೆಯುತ್ತಿದೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಂಪುಟದಲ್ಲಿ ಯಾರ್ಯಾರಿಗೆ ಮಂತ್ರಿ ಭಾಗ್ಯ ಎನ್ನುವ ಕುತೂಹಲ ಮನೆ ಮಾಡಿದೆ. ಯಾರಿಗೆಲ್ಲ ಮಂತ್ರಿ ಸ್ಥಾನ ಕೊಡಬೇಕೆಂದು ಅಂತಿಮಗೊಳಿಸಲು ಸಿದ್ದರಾಮಯ್ಯ ಅವರು ಇಂದು(ಮೇ 19) ದೆಹಲಿಗೆ ತೆರಳಿ ಹೈಕಮಾಂಡ್​ ಜೊತೆ ಚರ್ಚಿಸಲಿದ್ದಾರೆ. ಆದ್ರೆ, ಸಿದ್ದರಾಮಯ್ಯ ದಿಲ್ಲಿಗೆ ಹೋಗುವ ಮೊದಲೇ ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ತಂಡೋಪತಂಡವಾಗಿ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.

ಇದನ್ನೂ ಓದಿ: ಸಿಎಂ ಆಯ್ಕೆ ಮಧ್ಯೆ ನೂತನ ಸಚಿವರ ಶಾರ್ಟ್ ಲಿಸ್ಟ್ ಸಿದ್ಧ: ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ

ಹೌದು…ಸಚಿವ ಸಂಪುಟ ರಚನೆಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ದೆಹಲಿಗೆ ತೆರಳುವ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ಮೂರು ತಂಡಗಳಾಗಿ ಬೆಳ್ಳಂ ಬೆಳಗ್ಗೆ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂದು ಬೆಳಗ್ಗೆ 06 ರಿಂದ 7 ಗಂಟೆ ಮೂರು ವಿಮಾನಗಳಲ್ಲಿ ಒಟ್ಟು 22 ಶಾಸಕರು ದಹಲಿಗೆ ಹೋದರು.

ಮೊದಲ ಗುಂಪಿನಲ್ಲಿ ಬೆಳಗ್ಗೆ 06:05 ರ ಏರ್ ಇಂಡಿಯಾ ವಿಮಾನದಲ್ಲಿ ಒಟ್ಟು 09 ಶಾಸಕರು ದೆಹಲಿಗೆ ತೆರಳಿದ್ದಾರೆ. ಶಾಸಕರಾದ ಕೆಸಿ‌ ವಿರೇಂದ್ರ, ಗೋವಿಂದಪ್ಪ, ಡಿ.ಸುಧಾಕರ್, ರಘುಮೂರ್ತಿ ಟಿ, ಅಜಯ್ ಸಿಂಗ್, ಯಶ್ವಂತ್ ರಾಜ್ ಗೌಡ ಪಾಟೀಲ್, ಎಂಸಿ ಸುಧಾಕರ್, ಪ್ರದೀಪ್ ಈಶ್ವರ್ ಮತ್ತು ಬೆಲೂರು ಗೋಪಾಲಕೃಷ್ಣ ದೆಹಲಿಗೆ ತೆರಳಿದರು.

ಇನ್ನು ಎರಡನೇ ಗುಂಪಿನಲ್ಲಿ 06 ಜನ ಶಾಸಕರು 06:15 ರ ಸ್ಪೈಸ್ ಜೆಟ್ ವಿಮಾನದ ಮೂಲಕ ದೆಹಲಿಗೆ ಹಾರಿದ್ದಾರೆ. ಶಾಸಕರಾದ ಕೃಷ್ಣಬೈರೆಗೌಡ, ಎನ್ಎ ಹ್ಯಾರೀಸ್, ಶ್ರೀನಿವಾಸ್ ಮಾನೆ, ರಿಜ್ಚಾನ್ ಹರ್ಷದ್, ಈಶ್ವರ್ ಖಂಡ್ರೆ, ರಹಿಂ ಖಾನ್ ತೆರಳಿದ್ದಾರೆ.

ಬೆಳಗ್ಗೆ 07:20 ರ ಏರ್ ಇಂಡಿಯಾ ವಿಮಾನದಲ್ಲಿ ಮೂರನೇ ತಂಡ ಹೋಗಿದೆ. ಕೆಹೆಚ್ ಮುನಿಯಪ್ಪ, ಶಿವರಾಜ್ ತಂಗಡಗಿ, ಸಿಎಸ್ ನಾಡಗೌಡ, ಅಶೋಕ್ ರೈ, ಕೆಎನ್ ರಾಜಣ್ಣ,ಕೆಆರ್ ರಾಜೇಂದ್ರ, ಎಂಎಲ್ಸಿ ಅರವಿಂದ ಅರಳಿ ಸಹ ದೆಹಲಿಗೆ ಪ್ರಯಾಣಗೆ ಹೋಗಿದ್ದಾರೆ.

ಮುಖ್ಯಮಂತ್ರಿ ಹಗ್ಗಜಗ್ಗಾಟದ ಬಳಿಕ ಇದೀಗ ಕಾಂಗ್ರೆಸ್ ಹೈಕಮಾಂಡ್​ಗೆ ಸಂಪುಟ ರಚನೆ ಮಾಡುವ ದೊಡ್ಡ ಸವಾಲ್ ಎದುರಾಗಿದೆ. ಜಾತಿವಾರು, ಪ್ರಾದೇಶಿಕವಾರು ಸಚಿವ ಸ್ಥಾನ ಹಂಚಬೇಕಿದೆ. ಆದ್ರೆ, ಇಡೀ ಶಾಸಕರ ದಂಡೇ ನನಗೆ ಸಚಿವ ಸ್ಥಾನ ಬೇಕೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಹಾಗು ಡಿಕೆ ಶಿವಕುಮಾರ್​ ಯಾರಿಗೆ ಮಣೆ ಹಾಕುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ