AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯಗೆ 2 ಕ್ಷೇತ್ರದ ಟಿಕೆಟ್​ ನೀಡದಂತೆ ಹೈಕಮಾಂಡ್​ಗೆ ರಾಜ್ಯ ಕಾಂಗ್ರೆಸ್​ ನಾಯಕರ ಪತ್ರ

 ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎರಡು ಕ್ಷೇತ್ರದ ಟಿಕೆಟ್​ ಕೊಟ್ಟರೆ ತಪ್ಪು ಸಂದೇಶ ಹೋಗುತ್ತೆ. ಪಕ್ಷದ ಸಾಮಾನ್ಯ ಕಾರ್ಯಕರ್ತರಿಗೆ ವಂಚನೆ ಮಾಡಿದಂತೆ ಆಗುತ್ತದೆ ಎಂದು ರಾಜ್ಯ ಕಾಂಗ್ರೆಸ್​ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.

ಸಿದ್ದರಾಮಯ್ಯಗೆ 2 ಕ್ಷೇತ್ರದ ಟಿಕೆಟ್​ ನೀಡದಂತೆ ಹೈಕಮಾಂಡ್​ಗೆ ರಾಜ್ಯ ಕಾಂಗ್ರೆಸ್​ ನಾಯಕರ ಪತ್ರ
ವಿಪಕ್ಷ ನಾಯಕ ಸಿದ್ದರಾಮಯ್ಯ
ವಿವೇಕ ಬಿರಾದಾರ
|

Updated on:Apr 04, 2023 | 12:13 PM

Share

ಬೆಂಗಳೂರು: ವಿಧಾನಸಭೆ ಚುನಾವಣೆಗೆ (Karnataka Assembly Election) ಟಿಕೆಟ್​ ಹಂಚಿಕೆ ವಿಚಾರವಾಗಿ ಮೂರು ಪ್ರಕ್ಷದಲ್ಲಿ ಸಾಕಷ್ಟು ಹಗ್ಗ-ಜಗ್ಗಾಟ ನಡೆಯುತ್ತಿದೆ. ಒಂದು ಕ್ಷೇತ್ರಕ್ಕೆ ಇಬ್ಬರು ಟಿಕೆಟ್​ ಆಕಾಂಕ್ಷಿಗಳಿದ್ದು, ಪೈಪೋಟಿ ಜೋರಾಗಿ ನಡೆಯುತ್ತಿದ್ದರಿಂದ ನಾಯಕರಿಗೆ ತೆಲೆನೋವಾಗಿದೆ. ಇನ್ನು ಕಾಂಗ್ರೆಸ್​ (Congress) ಈಗಾಗಲೆ 125 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಉಳಿದ 100 ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ. ಮೊದಲ ಪಟ್ಟಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramiah) ಅವರು ವರುಣಾ ಕ್ಷೇತ್ರದ (Varuna) ಅಭ್ಯರ್ಥಿಯೆಂದು ಘೋಷಿಸಿದೆ. ಈಗ 2ನೇ ಪಟ್ಟಿ ಹೊರ ಬೀಳಲಿದ್ದು, ಕೊಲಾರ ಕ್ಷೇತ್ರದಿಂದಲೂ ಸಿದ್ದರಾಮಯ್ಯ ಅವರಿಗೆ ಟಿಕೆಟ್​ ಸಿಗುವ ಸಾಧ್ಯತೆ ಇದೆ. ಈ ವಿಚಾರಾಗಿ ರಾಜ್ಯ ಕಾಂಗ್ರೆಸ್​​ ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ (Rahul Gandhi) ಅವರಿಗೆ ಪತ್ರ ಬರೆದಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎರಡು ಕ್ಷೇತ್ರದ ಟಿಕೆಟ್​ ಕೊಟ್ಟರೆ ತಪ್ಪು ಸಂದೇಶ ಹೋಗುತ್ತೆ. ಪಕ್ಷದ ಸಾಮಾನ್ಯ ಕಾರ್ಯಕರ್ತರಿಗೆ ವಂಚನೆ ಮಾಡಿದಂತೆ ಆಗುತ್ತದೆ. ಡಾ. ಜಿ ಪರಮೇಶ್ವರ್ ಸೇರಿದಂತೆ ಉಳಿದ ನಾಯಕರು ಕೂಡ 2 ಕ್ಷೇತ್ರ ಕೇಳುತ್ತಾರೆ. ವಿರೋಧ ಪಕ್ಷದ ನಾಯಕ ಸಿದರಾಮಯ್ಯ ಅವರಿಗೆ ಎರಡು ಕ್ಷೇತ್ರಗಳನ್ನು ನೀಡುವ ಬದಲು, ಒಂದು ಕ್ಷೇತ್ರವನ್ನು ಪಕ್ಷ ಸಂಘಟನೆ ಮಾಡಿದವರಿಗೆ ಕೊಡಿ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಚುನಾವಣೆ ಹೊಸ್ತಿಲಲ್ಲೇ ಡಿಕೆ ಶಿವಕುಮಾರ್​ಗೆ ಎದುರಾಯ್ತು ಸಂಕಷ್ಟ!

ಇನ್ನೂ ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರದ ಟಿಕೆಟ್​ ಘೋಷಣೆಯಾಗುವುದಕ್ಕಿಂತ ಮುಂಚೆ ಕೋಲಾರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದು, ಈ ಮೂಲಕ ಕೋಲಾರದತ್ತ ರಾಜ್ಯದ ಚಿತ್ತ ನೆಟ್ಟಿತ್ತು. ಈ ಸಂಬಂಧ ಮಗ, ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಆಕ್ಟಿವ್​ ಆಗಿ ತಂದೆಯ ಪರ ಪ್ರಚಾರ, ಸಂಘಟನೆ ಪ್ರಾರಂಭಸಿದ್ದರು. ದಿನಕ್ಕೊಂದು ಬೆಳವಣಿಗೆಯಂತೆ ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಪರ-ವಿರೋಧದ ಹೇಳಿಕೆಗಳು ಶುರುವಾದ್ದವು.

ಈ ನಡುವೆ ಕೆಲ ದಿನಗಳ ಹಿಂದೆ ದೆಹಲಿ ಭೇಟಿ ವೇಳೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಯವರು ಕೋಲಾರದಿಂದ ಸ್ಪರ್ಧೆ ಬೇಡ ಮರಳಿ ವರುಣಾಗೆ ಹೋಗಿ ಎನ್ನುವ ಮೂಲಕ ಚಿನ್ನದ ನಾಡಲ್ಲಿ ಪರಾಭವದ ಗಾಳಿ ಬೀಸುತ್ತಿದೆ ಎಂದು ಸಂದೇಶ ರವಾನಿಸಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಮಹತ್ವದ ಚರ್ಚೆಗೆ ಕಾರಣವಾಗಿತ್ತು. ನಂತರ ಪುತ್ರ ಯತೀಂದ್ರ ಸಿದ್ದರಾಮಯ್ಯ, ತಂದೆಗೆ ಕ್ಷೇತ್ರ ಬಿಟ್ಟುಕೊಡಲು ಸಿದ್ದರಾಗಿ, ಬಿಟ್ಟುಕೊಟ್ಟರು. ಈಗ ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧಿಸುತ್ತಿದ್ದರೂ, ಕೋಲಾರದಿಂದಲೂ ಸ್ಪರ್ಧಿಸುವುದಾಗಿ ಆಸೆ ಹೊಂದಿದ್ದಾರೆ.

ಇದರ ಹಿಂದೆ ರಾಜಕೀಯ ಕಾರಣವೂ ಇದ್ದು, ಒಂದು ವೇಳೆ ಸಿದ್ದರಾಮಯ್ಯ ಎರಡೂ ಕ್ಷೇತ್ರದಿಂದ ಜಯಗಳಿಸಿದರೆ, ಒಂದು ಕ್ಷೇತ್ರಕ್ಕೆ ರಾಜಿನಾಮೆ ನೀಡಿ, ಮುಂದೆ ನಡೆಯುವ ಉಪಚುನಾವಣೆಯಲ್ಲಿ ಪುತ್ರನನ್ನು ಆ ಕ್ಷೇತ್ರದಲ್ಲಿ ನಿಲ್ಲಿಸಿ ಗೆಲ್ಲಿಸುವ ವಿಚಾರವಿದೆ. ಆದರೆ ಈಗ ಸಿದ್ದರಾಮಯ್ಯ ಅವರಿಗೆ ಎರಡು ಕ್ಷೇತ್ರದಿಂದ ಟಿಕೆಟ್​ ನೀಡಬೇಡಿ ಎಂಬ ಕೂಗು ರಾಜ್ಯ ಕಾಂಗ್ರೆಸ್​ನಲ್ಲೇ ಕೇಳಿಬುರತ್ತಿದೆ.

ಕಳೆದ ಚುನಾವಣೆಯಲ್ಲಿ ಎರಡು ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿದ್ದರಾಮಯ್ಯ

2018ರ ವಿಧಾನಸಭೆ ಚುನಾವಣೆಯಲ್ಲೂ ಸಿದ್ದರಾಮಯ್ಯ ಚಾಮುಂಡೇಶ್ವರಿ ಮತ್ತು ಬದಾಮಿಯಿಂದ ಸ್ಪರ್ಧೆ ಮಾಡಿದ್ದರು. ಆಗ ಚಾಮುಂಡೇಶ್ವರಿಯಲ್ಲಿ ಸೋತಿದ್ದು, ಬಾದಾಮಿಯಲ್ಲಿ ಗೆದ್ದಿದ್ದರು. ಈಗ ಬಾದಾಮಿ ದೂರವಾಗುತ್ತೆ ಎನ್ನುವ ಕಾರಣಕ್ಕೆ, ಬಾದಾಮಿ ಕ್ಷೇತ್ರ ಕೈ ಬಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:34 am, Tue, 4 April 23

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು