AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚಾರದ ಕಣದಲ್ಲಿ ಒಂದಷ್ಟು ಗಮ್ಮತ್ತು; ಡೇಟ್ ಆಫ್ ಬರ್ತೇ ಗೊತ್ತಿಲ್ಲ ಎಂದ ಸಿದ್ದರಾಮಯ್ಯ, ರಾಹುಲ್ ಗಾಂಧಿಗೆ ಕೊಟ್ರು ಹಸಿ ಮೀನು

ಗುರುವಾರದ (ಏಪ್ರಿಲ್ 27) ಪ್ರಚಾರದ ಕಣದಲ್ಲಿ ಹಲವು ಸ್ವಾರಸ್ಯಕರ ವಿದ್ಯಮಾನಗಳು ನಡೆದಿವೆ. ಅವುಗಳ ಮಾಹಿತಿ ಇಲ್ಲಿದೆ.

ಪ್ರಚಾರದ ಕಣದಲ್ಲಿ ಒಂದಷ್ಟು ಗಮ್ಮತ್ತು; ಡೇಟ್ ಆಫ್ ಬರ್ತೇ ಗೊತ್ತಿಲ್ಲ ಎಂದ ಸಿದ್ದರಾಮಯ್ಯ, ರಾಹುಲ್ ಗಾಂಧಿಗೆ ಕೊಟ್ರು ಹಸಿ ಮೀನು
ರಾಹುಲ್​ಗೆ ಹಸಿ ಮೀನು ಗಿಫ್ಟ್
Ganapathi Sharma
|

Updated on: Apr 27, 2023 | 11:03 PM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Elections 2023) ಸಮೀಪಿಸುತ್ತಿದ್ದಂತೆಯೇ ಪ್ರಚಾರದ ಭರಾಟೆ ಜೋರಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ, ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಪ್ರಚಾರದ ಬಿರುಸು ಜೋರಾಗಿದ್ದರೆ, ನಟ ಕಿಚ್ಚ ಸುದೀಪ್, ನಟಿ ಶ್ರುತಿ ಸೇರಿದಂತೆ ಚಿತ್ರ ತಾರೆಯರೂ ಪ್ರಚಾರದ ಕಣದಲ್ಲಿ ಹವಾ ಸೃಷ್ಟಿಸಿದ್ದಾರೆ. ಮತ್ತೊಂದೆಡೆ ಕೇಂದ್ರ ನಾಯಕರೂ ಅಖಾಡಕ್ಕೆ ಧುಮುಕಿದ್ದಾರೆ. ಕಾಂಗ್ರೆಸ್​ನಿಂದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಪ್ರಚಾರ ಕಣಕ್ಕೆ ಧುಮುಕಿದ್ದರೆ ಬಿಜೆಪಿಯಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಸಚಿವರಾದ ರಾಜನಾಥ್ ಸಿಂಗ್, ಸ್ಮೃತಿ ಇರಾನಿ ಮತ್ತಿತರರು ಸಕ್ರಿಯವಾಗಿ ಪ್ರಚಾರದಲ್ಲಿ ತೊಡಗಿದ್ದಾರೆ.

ಈ ಮಧ್ಯೆ, ಗುರುವಾರದ (ಏಪ್ರಿಲ್ 27) ಪ್ರಚಾರದ ಕಣದಲ್ಲಿ ಹಲವು ಸ್ವಾರಸ್ಯಕರ ವಿದ್ಯಮಾನಗಳು ನಡೆದಿವೆ. ಅವುಗಳ ಮಾಹಿತಿ ಇಲ್ಲಿದೆ.

ಡೇಟ್ ಆಫ್ ಬರ್ತ್ ಗೊತ್ತಿಲ್ಲ ಎಂದ ಸಿದ್ದರಾಮಯ್ಯ

ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದರು. ಸಿದ್ದರಾಮಯ್ಯ ಬರ್ತಿದ್ದಂತೆ ಕೈ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಡೊಳ್ಳು ಬಾರಿಸಿ ಪ್ರಚಾರಕ್ಕೆ ಚಾಲನೆ ನೀಡುವ ಮೂಲಕ ಅವರು ಗಮನ ಸೆಳೆದರು. ಇದೇ ವೇಳೆ, ‘ನಾನು ಕಾನೂನು ಓದಿದ್ದರೂ ನನ್ನ ಡೇಟ್ ಆಫ್ ಬರ್ತ್ ನನಗೆ ಗೊತ್ತಿಲ್ಲ’ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ನೆರೆದಿದ್ದವರನ್ನು ನಗೆಗಡಲಲ್ಲಿ ಮುಳುಗಿಸಿದರು.

ಮುಸ್ಲಿಂ ಕಾರ್ಯಕರ್ತನ ಜತೆ ಬೊಮ್ಮಾಯಿ ಆತ್ಮೀಯ ಮಾತುಕತೆ

ಹಾನಗಲ್ ಕ್ಷೇತ್ರದ ಬೊಮ್ಮನಹಳ್ಳಿ ಗ್ರಾಮದಲ್ಲಿ ಸಿಎಂ ಬೊಮ್ಮಾಯಿ ಪ್ರಚಾರ ನಡೆಸಿದ್ದು, ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್ ಪರವಾಗಿ ಮತಯಾಚನೆ ಮಾಡಿದ್ದಾರೆ. ರೋಡ್ ಶೋ ಮೂಲಕ ಮತಯಾಚನೆ ಮಾಡಿದ ಬೊಮ್ಮಾಯಿ ಮುಸ್ಲಿಂ ಕಾರ್ಯಕರ್ತನ ಜತೆ ಆತ್ಮೀಯವಾಗಿ ಮಾತನಾಡುತ್ತಿರುವುದು ಕಂಡುಬಂತು.

ಆಜಾನ್ ನಡುವೆ ಸಿ‌ಎಂ ಬೊಮ್ಮಾಯಿ ಭಾಷಣ

ಹಾವೇರಿಯಲ್ಲಿ ಬೊಮ್ಮಾಯಿ ಮಾತನಾಡುತ್ತಿರುವಾಗ ಆಜಾನ್ ಸದ್ದು ಜೋರಾಯಿತು. ಧ್ವನಿವರ್ಧಕದ ಸದ್ದು ಜೋರಾದರೂ ಬೊಮ್ಮಾಯಿ ಭಾಷಣ ಮುಂದುವರಿಸಿದರು.

ಆಜಾನ್​ ವೇಳೆ ಭಾಷಣ ನಿಲ್ಲಿಸಿದ ರಾಹುಲ್ ಗಾಂಧಿ

ಮಂಗಳೂರಿನ ಅಡ್ಯಾರು ಬಳಿ ಕಾಂಗ್ರೆಸ್ ಪಕ್ಷದ ಬೃಹತ್‌ ಸಮಾವೇಶ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಸರ್ಕಾರಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸಲಾಗುವುದು ಎಂದು ಘೋಷಿಸಿದರು. ರಾಹುಲ್ ಗಾಂಧಿ ಭಾಷಣ ಮಾಡುತ್ತಿದ್ದಾಗ ಆಜಾನ್‌ ಕೂಗುವುದು ಕೇಳಿಬಂತು. ಕೂಡಲೇ ಕೆಲ ಕಾಲ ಭಾಷಣ ನಿಲ್ಲಿಸಿದ ಅವರು, ಆಜಾನ್‌ ಮುಗಿದ ಬಳಿಕ ಭಾಷಣ ಮುಂದುವರಿಸಿದರು. ಇದೇ ವೇಳೆ ವೇದಿಕೆಯಲ್ಲಿ ಸುಸ್ತಾದಂತೆ ಕಂಡುಬಂದ ಡಿಕೆ ಶಿವಕುಮಾರ್ ಅವರನ್ನು, ಆರ್​​ ಯೂ ಆಲ್​ರೈಟ್ ಎಂದು ರಾಹುಲ್ ಗಾಂಧಿ ವಿಚಾರಿಸಿದ್ದು ಕಂಡುಬಂತು.

ರಾಹುಲ್​ಗೆ ಹಸಿ ಮೀನು ಗಿಫ್ಟ್

ಮಂಗಳೂರಿನ ಸಮಾವೇಶಕ್ಕೂ ಮುನ್ನ ಉಡುಪಿಯ ಕಾಪು ಉಚ್ಚಿಲದಲ್ಲಿ ಅವರು ಮೀನುಗಾರರೊಂದಿಗೆ ಸಂವಾದ ನಡೆಸಿದರು. ಇದೇ ವೇಳೆ ಅವರಿಗೆ ಮಹಿಳೆಯೊಬ್ಬರು ಆಂಜಲ್​ ಮೀನನ್ನು ಉಡುಗೊರೆಯಾಗಿ ನೀಡಿದರು.

ಉತ್ತರ ಕರ್ನಾಟಕದಲ್ಲಿ ಕಿಚ್ಚನ ಹವಾ

ನಟ ಕಿಚ್ಚ ಸುದೀಪ್ ಅವರು ಬಳ್ಳಾರಿ, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ರೋಡ್ ಶೋ ನಡೆಸಿ ಬಿಜೆಪಿ ಪರ ಅಲೆ ಎಬ್ಬಿಸಿದ್ದಾರೆ. ರೋಡ್ ಶೋ ವೇಳೆ ಜನರು ತೋರಿದ ಅಭಿಮಾನಕ್ಕೆ ಕಿಚ್ಚ ತಲೆಬಾಗಿದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ