AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಚುನಾವಣಾ ಪ್ರಚಾರದ ಅಬ್ಬರ, ನರೇಗಾಗೆ ಕಾರ್ಮಿಕರ ಬರ, ಏನಿದು ಅಂತೀರಾ ಈ ಸ್ಟೋರಿ ನೋಡಿ

ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದ್ದು, ರಾಜಕೀಯ ಪಕ್ಷಗಳ ಪ್ರಚಾರ ಭರಾಟೆ ಜೋರಾಗಿದೆ. ಪೈಪೋಟಿಗೆ ಬಿದ್ದವರಂತೆ ರಾಜಕೀಯ ಪಕ್ಷಗಳ ನಾಯಕರು ಜನ ಸೇರಿಸಿ ಶಕ್ತಿ ಪ್ರದರ್ಶನ ಮಾಡುತ್ತಿದ್ದಾರೆ. ಜನರಿಗೆ ವಿವಿಧ ರೀತಿಯ ಆಮೀಷಗಳನ್ನೊಡ್ಡಿ ಚುನಾವಣಾ ಪ್ರಚಾರಕ್ಕೆ ಕರೆತರುತ್ತಿದ್ದಾರೆ. ಹೀಗಾಗಿ ನರೇಗಾ ಕಾಮಗಾರಿಗಳಿಗೆ ಕಾರ್ಮಿಕರ ಕೊರತೆ ಎದುರಾಗಿದೆ. ಅಷ್ಟಕ್ಕೂ ನರೇಗಾ ಕಾರ್ಮಿಕರ ಬೇಡಿಕೆ ಏನು? ಕಾರ್ಮಿಕ ಮುಖಂಡರು ಹೇಳೋದೇನು? ಅಧಿಕಾರಿಗಳ ಸಮರ್ಥನೆ ಏನು? ಇಲ್ಲಿದೆ ನೋಡಿ

ಕರ್ನಾಟಕದಲ್ಲಿ ಚುನಾವಣಾ ಪ್ರಚಾರದ ಅಬ್ಬರ, ನರೇಗಾಗೆ ಕಾರ್ಮಿಕರ ಬರ, ಏನಿದು ಅಂತೀರಾ ಈ ಸ್ಟೋರಿ ನೋಡಿ
ನರೇಗಾ ಕಾರ್ಮಿಕರ ಕೊರತೆ
ಕಿರಣ್ ಹನುಮಂತ್​ ಮಾದಾರ್
|

Updated on: May 02, 2023 | 7:49 AM

Share

ಬೆಳಗಾವಿ: ಮೇ 10ರಂದು ರಾಜ್ಯ ವಿಧಾನಸಭೆ ಚುನಾವಣೆ(karnataka Assembly Election 2023) ನಡೆಯಲಿದ್ದು ರಾಜ್ಯಾದ್ಯಂತ ಪ್ರಚಾರದ ಭರಾಟೆ ಜೋರಾಗಿದೆ. ಉರಿಬಿಸಿಲನ್ನೂ ಲೆಕ್ಕಿಸದೇ ಜನರನ್ನ ಸೇರಿಸುವಲ್ಲಿ ರಾಜಕೀಯ ನಾಯಕರು ಬ್ಯುಸಿಯಾಗಿದ್ದಾರೆ. ಇಂತಹ ಉರಿಬಿಸಿಲಿನಲ್ಲಿ ಜನರನ್ನು ಸೇರಿಸಿ ಸಮಾವೇಶ, ರೋಡ್ ಶೋ ಮಾಡುವುದೇ ರಾಜಕೀಯ ನಾಯಕರಿಗೆ ಸವಾಲಾಗಿದೆ. ಈ ಮಧ್ಯೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ(NREGA)ಕಾಮಗಾರಿ ಕೈಗೊಳ್ಳಲು ಬೆಳಗಾವಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಕಾರ್ಮಿಕರ ಕೊರತೆ ಎದುರಾಗಿದೆ. ಜಿಲ್ಲೆಯಲ್ಲಿ ಏಪ್ರಿಲ್ ತಿಂಗಳಿನಲ್ಲಿ ಸುಮಾರು 15,74,807 ಲಕ್ಷ ಕಾರ್ಮಿಕರು ಕೆಲಸಕ್ಕೆ ಹೆಸರು ನೊಂದಾಯಿಸಿಕೊಂಡಿದ್ದು, ಈ ಪೈಕಿ 1,12,227 ಲಕ್ಷ ಕಾರ್ಮಿಕರಿಗೆ ಕೆಲಸ ನೀಡಲಾಗಿದೆ. ನರೇಗಾ ಯೋಜನೆಯಡಿ ಕೆಲಸ ಮಾಡುವ ಕಾರ್ಮಿಕರಿಗೆ ನಿತ್ಯ 316 ರೂಪಾಯಿ ಕೂಲಿ ನೀಡಲಾಗುತ್ತೆ. ಆದ್ರೆ, ಸದ್ಯ ಚುನಾವಣಾ ಪ್ರಚಾರ ಭರಾಟೆ ಜೋರಾಗಿರುವುದರಿಂದ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಹಾಗೂ ನಾಯಕರು ಜನರಿಗೆ ವಿವಿಧ ರೀತಿಯ ಆಮಿಷವೊಡ್ಡಿ ಪ್ರಚಾರಕ್ಕೆ ಕರೆದೊಯ್ಯುತ್ತಿರುವ ಆರೋಪ ಕೇಳಿ ಬಂದಿದೆ.

ಹೌದು ನರೇಗಾ ಯೋಜನೆಯಡಿ ಎಂಟು ತಾಸು ಕೆಲಸ ಮಾಡಿದ್ರೆ, ಸಿಗೋದು ಕೇವಲ 316 ರೂಪಾಯಿ. ಅದೇ ಚುನಾವಣಾ ಪ್ರಚಾರಕ್ಕೆ ಬಂದ್ರೆ, 300 ರಿಂದ 500 ರೂಪಾಯಿ ಜೊತೆಗೆ ಉಚಿತ ಊಟ ಹಾಗೂ ಕೆಲವೆಡೆಯಂತೂ ಮದ್ಯವೂ ಕೊಡುತ್ತೀವಿ ಎಂದು ಕಾರ್ಮಿಕರಿಗೆ ಆಮಿಷವೊಡ್ಡಿ ಕರೆದೊಯ್ಯುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ರಾಜಕೀಯ ನಾಯಕರ ನಡೆಗೆ ಕರ್ನಾಟಕ ರೈತ, ಕಾರ್ಮಿಕ, ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ಜಯಶ್ರೀ ಗುರನ್ನವರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗ ಚುನಾವಣೆ ಇದೆ ಅಂತಾ ಆಮಿಷವೊಡ್ಡಿ ಕರೆದೊಯ್ಯುತ್ತಾರೆ. ಬಳಿಕವೂ ಅವರ ನೆರವಿಗೆ ಬರಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ. ಅಲ್ಲದೇ ನರೇಗಾ ಕಾರ್ಮಿಕರ ವೇತನ ಹೆಚ್ಚಳ ಮಾಡುವಂತೆಯೂ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಚುನಾವಣೆ ಕಣದಲ್ಲಿ ಗೋಬಿ ವ್ಯಾಪಾರಿ ಭರ್ಜರಿ ಪ್ರಚಾರ: ಈ ಯುವಕನ ಉದ್ದೇಶವೇನು ಗೊತ್ತಾ?

ಇನ್ನು ನರೇಗಾ ಯೋಜನೆಯಡಿ ಕೆರೆ ನಾಲೆಗಳನ್ನು ಹೂಳೆತ್ತುವುದು, ಗ್ರಾಮದ ಶಾಲೆಗಳಲ್ಲಿ ಆಟದ ಮೈದಾನ ನಿರ್ಮಾಣ, ಬದು ನಿರ್ಮಾಣ ಹೀಗೆ ವಿವಿಧ ಕಾಮಗಾರಿ ನಡೆಸಲಾಗುತ್ತೆ. ಬೆಳಗಾವಿ ಜಿಲ್ಲೆಯ ಹಲವೆಡೆ ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದಾರೆ. ಆದ್ರೆ, ನಿರೀಕ್ಷಿತ ಪ್ರಮಾಣದಲ್ಲಿ ಕಾರ್ಮಿಕರು ಆಗಮಿಸುತ್ತಿಲ್ಲವೆಂದು ಕಾರ್ಮಿಕ ಮುಖಂಡರು ಆರೋಪ ಮಾಡುತ್ತಿದ್ದಾರೆ. ಆದ್ರೆ, ಈ ಮಾತನ್ನು ಬೆಳಗಾವಿ ಜಿಲ್ಲಾ ಪಂಚಾಯತಿ ಸಿಇಒ ಹರ್ಷಲ್ ಭೋಯಲ್ ಅಲ್ಲಗೆಳೆಯುತ್ತಾರೆ. ‘ಕಳೆದ ವರ್ಷಕ್ಕಿಂತಲೂ ಹೆಚ್ಚು ಕಾರ್ಮಿಕರ ಹೆಸರು ಈ ಬಾರಿ ನೋಂದಾಯಿಸಿಕೊಂಡಿದ್ದು, ನಮ್ಮ ಜಿಲ್ಲೆಯಲ್ಲಿ ಕಾರ್ಮಿಕರ ಕೊರತೆ ಇಲ್ಲ ಎನ್ನುತ್ತಿದ್ದಾರೆ.

ಮತ್ತೊಂದೆಡೆ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರು ವೇತನ ಹೆಚ್ಚಳಕ್ಕೆ ಆಗ್ರಹಿಸಿದ್ದಾರೆ. ಈ ವೇಳೆ ಮಾತನಾಡಿದ ಕಾರ್ಮಿಕರು ಕನಿಷ್ಠ ಐದು ನೂರು ರೂಪಾಯಿ ವೇತನ ಹೆಚ್ಚಿಸಿದರೆ ಯಾರೂ ಎಲ್ಲಿಯೂ ಹೋಗಲ್ಲ. ಚುನಾವಣಾ ಪ್ರಚಾರ ಕೇವಲ ಮೂರು ದಿನದ ಕೆಲಸ. ಇದು ಜೀವನಪೂರ್ತಿ ಮಾಡುವ ಕೆಲಸ. ಪ್ರತಿಯೊಬ್ಬ ಕಾರ್ಮಿಕರಿಗೆ ಕನಿಷ್ಠ 200 ದಿನ ಉದ್ಯೋಗ ನೀಡಿ 500 ರೂಪಾಯಿ ವೇತನ ನೀಡುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ:Fact Check: ಸಿಯಟ್ ಜಾಹೀರಾತಿಗೂ ಕರ್ನಾಟಕ ಚುನಾವಣೆಗೂ ಸಂಬಂಧವೇ ಇಲ್ಲ; ವೈರಲ್ ವಿಡಿಯೊ ಎಡಿಟ್ ಮಾಡಿದ್ದು!

ಚುನಾವಣಾ ಆಯೋಗವೂ ಸಹ ಯಾವುದೇ ರೀತಿಯ ಅಕ್ರಮ ನಡೆಯದಂತೆ ಹದ್ದಿನ ಕಣ್ಣು ಇಟ್ಟಿದೆ. ಹಣ ಹಂಚಿಕೆ ಸೇರಿ ಯಾವುದೇ ಆಮಿಷವೊಡ್ಡುತ್ತಿರೋದು ಕಂಡು ಬಂದ್ರೆ, ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತಿದೆ. ಇತ್ತೀಚೆಗೆ ಕುಡಚಿಯಲ್ಲಿ ನಡೆದ ಪ್ರಧಾನಿ ಮೋದಿ ಸಮಾವೇಶಕ್ಕೆ ಬಂದ ಜನರಿಗೆ ಹಣ ಹಂಚುವ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕುಡಚಿ ಬಿಜೆಪಿ ಅಭ್ಯರ್ಥಿ ಪಿ.ರಾಜೀವ್ ಹಾಗೂ ಆತನ ಬೆಂಬಲಿಗನ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಅದೇನೇ ಇರಲಿ ರಾಜಕೀಯ ನಾಯಕರು ಚುನಾವಣಾ ಪ್ರಚಾರದ ವೇಳೆ ಕಾರ್ಮಿಕರ ಮೇಲೆ ತೋರಿಸುವ ಪ್ರೀತಿ ಚುನಾವಣೆ ಗೆದ್ದ ಬಳಿಕ ತೋರಿಸುತ್ತಾರಾ? ಬೆಲೆ ಏರಿಕೆಯಿಂದ ಜನ ತತ್ತರಿಸುವಂತಹ ಸಂದರ್ಭದಲ್ಲಿ ಮುಂದೆ ಚುನಾವಣೆಯಲ್ಲಿ ಗೆದ್ದು ಬರುವ ರಾಜಕೀಯ ನಾಯಕರು ನರೇಗಾ ಕಾರ್ಮಿಕರ ಬಗ್ಗೆ ಗಮನಹರಿಸಿ ಅವರ ವೇತನ ಹೆಚ್ಚಿಸಲಿ ಎಂಬುದು ಸಾರ್ವಜನಿಕರ ಆಶಯ.

ವರದಿ: ಮಹಾಂತೇಶ ಕುರಬೇಟ್ ಟಿವಿ9 ಬೆಳಗಾವಿ

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ