AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಆಯೋಗದ ಕಣ್ತಪ್ಪಿಸಲು ಹೀಗೂ ಮಾಡ್ತಾರೆ; ಎಟಿಎಂಗೆ ಹಣ ಕೊಂಡೊಯ್ಯುವ ವಾಹನದಲ್ಲೇ ಮತದಾರರಿಗೆ ಹಂಚಲು ನಗದು ಸಾಗಣೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯದಲ್ಲಿ ಮತದಾರರಿಗೆ ಆಮಿಷವೊಡ್ಡುವ, ಉಡುಗೊರೆ, ನಗದು ಹಂಚುವ ಕೃತ್ಯಗಳು ಹೆಚ್ಚಾಗಿವೆ.

ಚುನಾವಣಾ ಆಯೋಗದ ಕಣ್ತಪ್ಪಿಸಲು ಹೀಗೂ ಮಾಡ್ತಾರೆ; ಎಟಿಎಂಗೆ ಹಣ ಕೊಂಡೊಯ್ಯುವ ವಾಹನದಲ್ಲೇ ಮತದಾರರಿಗೆ ಹಂಚಲು ನಗದು ಸಾಗಣೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Apr 07, 2023 | 3:30 PM

Share

ಬೆಂಗಳೂರು: ವಿಧಾನಸಭೆ ಚುನಾವಣೆ (Karnataka Election) ಸಮೀಪಿಸುತ್ತಿದ್ದಂತೆಯೇ ರಾಜ್ಯದಲ್ಲಿ ಮತದಾರರಿಗೆ ಆಮಿಷವೊಡ್ಡುವ, ಉಡುಗೊರೆ, ನಗದು ಹಂಚುವ ಕೃತ್ಯಗಳು ಹೆಚ್ಚಾಗಿವೆ. ಇಂಥ ಕೃತ್ಯಗಳನ್ನು ತಡೆಯಲು ಚುನಾವಣಾ ಆಯೋಗವು ಹದ್ದಿನ ಕಣ್ಣಿಟ್ಟಿದ್ದರೂ ಇದನ್ನು ತಪ್ಪಿಸಿ ಹಣ, ಉಡುಗೊರೆ ಹಂಚಲು ಮತ್ತು ಸಾಗಾಟಕ್ಕೆ ರಾಜಕೀಯ ಪಕ್ಷಗಳ ಮುಖಂಡರು, ಬೆಂಬಲಿಗರು ಮತ್ತಷ್ಟು ದಾರಿಗಳನ್ನು ಕಂಡುಕೊಳ್ಳುತ್ತಿದ್ದಾರೆ. ಇದೀಗ ಎಟಿಎಂಗೆ ಹಣ ತುಂಬಲು ಕೊಂಡೊಯ್ಯುವ ವಾಹನಗಳಲ್ಲೂ ಅಕ್ರಮವಾಗಿ ನಗದು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಹೆಚ್ಚುವರಿ ಹಣ ತೆಗೆದುಕೊಂಡು ಹೋಗುತ್ತಿದ್ದ ಮೂರು ವಾಹನಗಳನ್ನು ಬೆಂಗಳೂರಿನ ಹೆಬ್ಬಗೋಡಿ ಚೆಕ್​​ಪೋಸ್ಟ್​​ನಲ್ಲಿ ಜಪ್ತಿ ಮಾಡಲಾಗಿದೆ.

ಚುನಾವಣಾ ನೀತಿಸಂಹಿತೆ ಹಿನ್ನೆಲೆಯಲ್ಲಿ ಎಟಿಎಂಗೆ ಹಣ ಸಾಗಿಸುವ 3 ವಾಹನಗಳನ್ನು ​ಚೆಕ್​​ಪೋಸ್ಟ್​​ನಲ್ಲಿ ತಪಾಸಣೆಗೆ ಒಳಪಡಿಸಲಾಗಿದೆ. ಈ ವೇಳೆ, ಮೂರು ವಾಹನಗಳ ಪೈಕಿ ಒಂದು ವಾಹನದಲ್ಲಿ ಹೆಚ್ಚುವರಿ ಹಣ ಇರುವುದು ಪತ್ತೆಯಾಗಿದೆ. ಸಿಬ್ಬಂದಿ ಹೇಳಿದ ಲೆಕ್ಕಕ್ಕೂ ಹಣಕ್ಕೂ ವ್ಯತ್ಯಾಸ ಕಂಡು ಬಂದಿದೆ. ಹೆಚ್ಚುವರಿ 10 ಲಕ್ಷ ರೂ. ಹಣ ಸಾಗಿಸುತ್ತಿದ್ದು ಕಂಡುಬಂದ ಕಾರಣ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮಕ್ಕೆ ಹಲವು ದಾರಿ

ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಬಳಿ ಚೆಕ್ ಪೋಸ್ಟ್​​ನಲ್ಲಿ ಎರಡು ದಿನಗಳ ಹಿಂದಷ್ಟೇ ಖಾಸಗಿ ಬಸ್​​ನಲ್ಲಿದ್ದ ಪ್ರಯಾಣಿಕರೊಬ್ಬರ ಬ್ಯಾಗ್​ನಲ್ಲಿ 2 ಕೋಟಿ ರೂ. ನಗದು ದೊರೆತಿತ್ತು. ಸಾರ್ವಜನಿಕ ಸಾರಿಗೆಗಳ ಮೂಲಕವೂ ಕೋಟ್ಯಂತರ ರೂ. ನಗದು ಸಾಗಾಟ ಮಾಡುವುದು ಬೆಳಕಿಗೆ ಬಂದಿತ್ತು.

ಇದನ್ನೂ ಓದಿ: Karnataka Elections 2023: ಕಂತೆ ಕಂತೆ ಹಣ ಸೊಂಟಕ್ಕೆ ಕಟ್ಟಿಕೊಂಡು ಬೈಕ್​ನಲ್ಲಿ ಸಾಗಾಟ; 7 ಲಕ್ಷ ರೂ. ಪೊಲೀಸರ ವಶಕ್ಕೆ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ನ್ಯಾಮತಿ ತಾಲೂಕಿನ ಜೀನಹಳ್ಳಿ ಚೆಕ್ ಪೊಸ್ಟ್​ನಲ್ಲಿ ಬೈಕ್ ತಡೆದ ಪೊಲೀಸರು ಸವಾರನನ್ನು ತಪಾಸಣೆ ನಡೆಸಿದ್ದಾರೆ. ಈ ವೇಳೆ ಸೊಂಟದಲ್ಲಿ ಕಂತೆಕಂತೆ ನೋಟುಗಳು ಪತ್ತೆಯಾಗಿವೆ.

ಅಫಜಲಪುರದಲ್ಲಿ 3.2 ಲಕ್ಷ ರೂ. ನಗದು ವಶ

ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಸೊನ್ನ ಚೆಕ್‌ಪೋಸ್ಟ್‌‌ನಲ್ಲಿ ದಾಖಲೆಯಿಲ್ಲದ 3.2 ಲಕ್ಷ ರೂ. ನಗದು ಹಣ ಜಪ್ತಿ ಮಾಡಲಾಗಿದೆ. ಬೈಕ್​ನಲ್ಲಿ ನಗದು ತೆಗೆದುಕೊಂಡು ಹೋಗುತ್ತಿದ್ದ ಶ್ರೀಕಾಂತ್ ಮ್ಯಾಳೇಸಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಇವರು ಅಫಜಲಪುರದಿಂದ ಬೈಕ್​ನಲ್ಲಿ ಮಹಾರಾಷ್ಟ್ರದ ನಾಗಣಸೂರ್‌ಗೆ ಹಣ ತೆಗೆದುಕೊಂಡು ಹೋಗುತ್ತಿದ್ದರು ಎನ್ನಲಾಗಿದೆ. ಅಫಜಲಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕ ವಿಧಾನಸಭಾ ಚುನಾಚವಣೆಯ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ