AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Election Results: ಚುನಾವಣಾ ಫಲಿತಾಂಶ; ಬೆಟ್ಟಿಂಗ್ ದಂಧೆ ಮೇಲೆ ಸೂಕ್ಷ್ಮ ನಿಗಾ

ಬೆಟ್ಟಿಂಗ್ ದಂಧೆ ಮೇಲೆ ಸೂಕ್ಷ್ಮ ನಿಗಾ ವಹಿಸುವಂತೆ ಸಿಸಿಬಿ ಅಧಿಕಾರಿಗಳು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಆ್ಯಪ್​ಗಳ ಮೂಲಕ ಆನ್​ಲೈನ್​ನಲ್ಲಿ ಹಾಗೂ ಆಫ್​ಲೈನ್​ನಲ್ಲಿ ನಡೆಯುವ ಬೆಟ್ಟಿಂಗ್ ಕೃತ್ಯಗಳ ಮೇಲೆ ಕಣ್ಗಾವಲಿಡುವಂತೆ ಪೊಲೀಸರಿಗೆ ಸೂಚಿಸಲಾಗಿದೆ.

Karnataka Election Results: ಚುನಾವಣಾ ಫಲಿತಾಂಶ; ಬೆಟ್ಟಿಂಗ್ ದಂಧೆ ಮೇಲೆ ಸೂಕ್ಷ್ಮ ನಿಗಾ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: May 09, 2023 | 4:23 PM

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ (Karnataka Election) ಬುಧವಾರ ನಡೆಯಲಿದ್ದು, ಶನಿವಾರ ಫಲಿತಾಂಶ ಪ್ರಕಟವಾಗಲಿದೆ. ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಮೇಲೆ ಮತ್ತು ಯಾರು ಗೆಲ್ಲಬಹುದು ಎಂಬ ಬಗ್ಗೆ ಬೆಟ್ಟಿಂಗ್ ಕೂಡ ಜೋರಾಗಿ ನಡೆಯುತ್ತಿದೆ ಎನ್ನಲಾಗಿದೆ. ಹೀಗಾಗಿ ಬೆಟ್ಟಿಂಗ್ ದಂಧೆ ಮೇಲೆ ಸೂಕ್ಷ್ಮ ನಿಗಾ ವಹಿಸುವಂತೆ ಸಿಸಿಬಿ ಅಧಿಕಾರಿಗಳು (CCB Police) ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಆ್ಯಪ್​ಗಳ ಮೂಲಕ ಆನ್​ಲೈನ್​ನಲ್ಲಿ ಹಾಗೂ ಆಫ್​ಲೈನ್​ನಲ್ಲಿ ನಡೆಯುವ ಬೆಟ್ಟಿಂಗ್ ಕೃತ್ಯಗಳ ಮೇಲೆ ಕಣ್ಗಾವಲಿಡುವಂತೆ ಪೊಲೀಸರಿಗೆ ಸೂಚಿಸಲಾಗಿದೆ.

ಚುನಾವಣೆಯಲ್ಲಿ ಸ್ಪರ್ಧಿಸಿರುವ ಗಣ್ಯ ಅಭ್ಯರ್ಥಿಗಳು, ಹಾಗೂ ಪ್ರಮುಖ ವಿಧಾನಸಭಾ ಕ್ಷೇತ್ರಗಳ ಮೇಲೆ ಬೆಟ್ಟಿಂಗ್ ನಡೆಯುತ್ತಿದೆ ಎನ್ನಲಾಗಿದೆ.

ಸದ್ಯ ಸಿಸಿಬಿ ಹೈ ಅಲರ್ಟ್​​​ ಸ್ಥಿತಿಯಲ್ಲಿದ್ದು, ಮುಂದಿನ ಒಂದು ವಾರ ಕಾಲ ಅನೇಕ ಜೂಜಿನ ಆ್ಯಪ್​ಗಳ ಮೇಲೆ ನಿಗಾವಹಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಮಧ್ಯೆ, ಚುನಾವಣೆಗೆ ಸಂಬಂಧಿಸಿದಂತೆ ಬೆಟ್ಟಿಂಗ್ ಕಂಡುಬಂದರೆ ಕಠಿಣ ಕ್ರಮ ಜರುಗಿಸುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ವಿಧಾನಸಭೆ ಚುನಾವಣೆ ಬುಧವಾರ ಬೆಳಿಗ್ಗೆ 7ಕ್ಕೆ ಆರಂಭವಾಗಲಿದ್ದು, ಸಂಜೆ ಆರು ಗಂಟೆಯ ವರೆಗೆ ನಡೆಯಲಿದೆ. ಅದಾದ ನಂತರ ಮತದಾನ ಪ್ರಮಾಣದ ಕುರಿತು ಚುನಾವಣಾ ಆಯೋಗ ಮಾಹಿತಿ ನೀಡಲಿದೆ. ನಂತರ ಎಕ್ಸಿಟ್​ಪೋಲ್ ಸಮೀಕ್ಷೆಗಳ ವರದಿಯೂ ಪ್ರಕಟವಾಗಲಿದೆ. ಆ ನಂತರ ಬೆಟ್ಟಿಂಗ್ ಚಟುವಟಿಕೆ ಮತ್ತಷ್ಟು ಹೆಚ್ಚಾಗಬಹುದು ಎನ್ನಲಾಗಿದೆ. ಈಗಾಗಲೇ ಚುನಾವಣಾಪೂರ್ವ ಸಮೀಕ್ಷಾ ವರದಿಗಳು ಪ್ರಕಟವಾಗಿವೆ.

ಇದನ್ನೂ ಓದಿ: Karnataka Election: ವಿಧಾನಸಭೆ ಚುನಾವಣೆಗೆ ವಿಶೇಷ ರೈಲು, ಹೆಚ್ಚುವರಿ ಕೋಚ್; ವಿವರ ಇಲ್ಲಿದೆ

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಮತದಾನ ನಡೆಯಲಿದ್ದು, 5,30,85,566 ಮತದಾರರು ಹಕ್ಕು ಚಲಾಯಿಸಲಿದ್ದಾರೆ. 37,777 ಸ್ಥಳಗಳ 58,545 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. 11,71,558 ಮಂದಿ ಮೊದಲ ಬಾರಿ ವೋಟ್​ ಮಾಡಲಿದ್ದಾರೆ. ರಾಜ್ಯಾದ್ಯಂತ ನಾಳೆ 4,00,000 ಮತಗಟ್ಟೆ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್