AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್​ಗೆ ಮತ ನೀಡಿದರೆ ಬಿಜೆಪಿಗೆ ನೀಡಿದಂತೆಯೇ; ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ಅಚ್ಚರಿಯ ಹೇಳಿಕೆ

ಜೆಡಿಎಸ್​ಗೆ ಮತ ನೀಡಿದರೂ ಬಿಜೆಪಿಗೆ ನೀಡಿದಂತೆಯೇ, ಹಾಗಾಗಿ ಬಿಜೆಪಿಗೇ ಮತ ನೀಡಿ ಎಂಬರ್ಥದಲ್ಲಿ ಪ್ರೀತಂ ಗೌಡ ನೀಡಿರುವ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

Prajwal D'Souza
| Updated By: Ganapathi Sharma|

Updated on: Apr 28, 2023 | 3:16 PM

Share

ಬೆಂಗಳೂರು: ವಿಧಾನಸಭೆ ಚುನಾವಣೆ (Karnataka Assembly Elections 2023) ಫಲಿತಾಂಶದ ಬಳಿಕ ಬಿಜೆಪಿ ಮತ್ತು ಜೆಡಿಎಸ್​ ಪಕ್ಷಗಳು ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆಯೇ ಎಂಬ ಅನುಮಾನ ಹಾಸನ (Hassan) ಬಿಜೆಪಿ ಶಾಸಕ ಪ್ರೀತಂ ಗೌಡ (Preetham Gowda) ಅವರ ಹೇಳಿಕೆಯಿಂದ ಬಲವಾಗಿದೆ. ಹಾಸನ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ಜೆಡಿಎಸ್​ಗೆ ಮತ ನೀಡಿದರೂ ಬಿಜೆಪಿಗೆ ನೀಡಿದಂತೆಯೇ, ಹಾಗಾಗಿ ಬಿಜೆಪಿಗೇ ಮತ ನೀಡಿ ಎಂಬರ್ಥದಲ್ಲಿ ನೀಡಿರುವ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಏಪ್ರಿಲ್ 26ರಂದು ಪ್ರೀತಂ ಗೌಡ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಪ್ರೀತಂ ಗೌಡ ಹೇಳಿದ್ದೇನು?

‘ನಾನು ನಿಮಗೆ ಹೇಳುತ್ತಿದ್ದೇನೆ. ಜೆಡಿಎಸ್​ಗೆ ಮತ ನೀಡುವುದೂ ಬಿಜೆಪಿಗೆ ನೀಡಿದಂತೆಯೇ. ಅವರಿಗೆ ನೀಡಿದರೂ ಅದು ನಮಗೇ ಸಲ್ಲಲಿದೆ. ಹೆಚ್​ಡಿ ದೇವೇಗೌಡರು ಮತ್ತು ಮೋದಿ ಸಾಹೇಬ್ರು ಈಗಾಗಲೇ ಮಾತನಾಡಿದ್ದಾರೆ. ಜೆಡಿಎಸ್​​ಗೆ ಕೇವಲ 20 ರಿಂದ 25 ಸ್ಥಾನಗಳಷ್ಟೇ ದೊರೆಯಲಿದೆ. ನೀವು ಬೆಂಗಳೂರಿಗೆ ಹೋಗಲು ಬಯಸುತ್ತೀರಿ ಎಂದಾದರೆ ಅದಕ್ಕಾಗಿ ಮೈಸೂರಿಗೆ ಹೋಗಬೇಡಿ. ಹಾಸನದಿಂದ ಬೆಳ್ಳೂರು ಕ್ರಾಸ್ ಮೂಲಕ ಹೋಗಿ. ನೀವು ಮೈಸೂರಿನಿಂದಾಗಿ ಹೋಗಲು ಬಯಸುತ್ತೀರಾದರೆ ನಾನು ಹೇಳುವುದಿಷ್ಟೇ. ಎಲ್ಲ ನದಿಗಳ ನೀರು ಹರಿದು ಕೊನೆಗೆ ಸೇರುವುದು ಸಮುದ್ರಕ್ಕೇ. ಅದೇ ರೀತಿ ನೀವು ನಮ್ಮನ್ನೇ ಸೇರಬೇಕಷ್ಟೆ. ಈ ಬಗ್ಗೆ ಯೋಚನೆ ಮಾಡಿ. ಬಿಜೆಪಿಯನ್ನೇ ಬೆಂಬಲಿಸಿ’ ಎಂದು ಪ್ರೀತಂ ಗೌಡ ಹೇಳಿರುವುದು ವಿಡಿಯೋದಲ್ಲಿದೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಪ್ರೀತಂ ಗೌಡ ಅವರು ಹಾಸನ ಕ್ಷೇತ್ರದಿಂದ ಜೆಡಿಎಸ್​ನ ಹೆಚ್​ಎಸ್ ಪ್ರಕಾಶ್ ವಿರುದ್ಧ 13,006 ಮತಗಳಿಂದ ಜಯ ಗಳಿಸಿದ್ದರು. ಇದು ವಿಧಾನಸಭೆ ಚುನಾವಣೆಯಲ್ಲಿ ಪ್ರೀತಂ ಗೌಡ ಅವರ ಮೊದಲ ಗೆಲುವಾಗಿತ್ತು. ಈ ಬಾರಿ ಜೆಡಿಎಸ್​ನ ಹೆಚ್​ಪಿ ಸ್ವರೂಪ್ ವಿರುದ್ಧ ಕಣಕ್ಕಿಳಿದಿದ್ದಾರೆ.

ಇದನ್ನೂ ಓದಿ: Karnataka Elections: ಮೈಸೂರಿನಲ್ಲಿ ಮಾತ್ರ ತಯಾರಾಗುತ್ತದೆ ಮತದಾನದ ಶಾಯಿ; ಇಲ್ಲಿದೆ ಸ್ವಾರಸ್ಯಕರ ಮಾಹಿತಿ

ಪ್ರೀತಂ ಗೌಡ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲು ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ನಿರಾಕರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಕೆಲಸ ಮಾಡಲಿದ್ದಾರೆ. ನಾವು ನಮ್ಮ ಕೆಲಸ ಮಾಡಲಿದ್ದೇವೆ ಎಂದಷ್ಟೇ ಅವರು ಹೇಳಿದ್ದಾರೆ.

ಜೆಡಿಎಸ್​​ನಿಂದಲೂ ಹಾಸನ ಟಿಕೆಟ್​ ಘೋಷಣೆ ವಿಚಾರ ಬಹಳಷ್ಟು ಚರ್ಚೆಗೆ ಗ್ರಾಸವಾಗಿತ್ತು. ಹೆಚ್​ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೇ ಟಿಕೆಟ್ ನೀಡಬೇಕು ಎಂದು ಅವರು ಪಟ್ಟು ಹಿಡಿದಿದ್ದರೆ ಸ್ವರೂಪ್​ಗೇ ನೀಡುವುದಾಗಿ ಹೆಚ್​ಡಿ ಕುಮಾರಸ್ವಾಮಿ ಪಟ್ಟು ಹಿಡಿದಿದ್ದರು. ಕೊನೆಗೂ ಸ್ವರೂಪ್​ ಅವರನ್ನೇ ಕಣಕ್ಕಿಳಿಸುವಲ್ಲಿ ಕುಮಾರಸ್ವಾಮಿ ಯಶಸ್ವಿಯಾಗಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ