ಜೆಡಿಎಸ್​ಗೆ ಮತ ನೀಡಿದರೆ ಬಿಜೆಪಿಗೆ ನೀಡಿದಂತೆಯೇ; ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ಅಚ್ಚರಿಯ ಹೇಳಿಕೆ

ಜೆಡಿಎಸ್​ಗೆ ಮತ ನೀಡಿದರೂ ಬಿಜೆಪಿಗೆ ನೀಡಿದಂತೆಯೇ, ಹಾಗಾಗಿ ಬಿಜೆಪಿಗೇ ಮತ ನೀಡಿ ಎಂಬರ್ಥದಲ್ಲಿ ಪ್ರೀತಂ ಗೌಡ ನೀಡಿರುವ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

Follow us
| Updated By: ಗಣಪತಿ ಶರ್ಮ

Updated on: Apr 28, 2023 | 3:16 PM

ಬೆಂಗಳೂರು: ವಿಧಾನಸಭೆ ಚುನಾವಣೆ (Karnataka Assembly Elections 2023) ಫಲಿತಾಂಶದ ಬಳಿಕ ಬಿಜೆಪಿ ಮತ್ತು ಜೆಡಿಎಸ್​ ಪಕ್ಷಗಳು ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆಯೇ ಎಂಬ ಅನುಮಾನ ಹಾಸನ (Hassan) ಬಿಜೆಪಿ ಶಾಸಕ ಪ್ರೀತಂ ಗೌಡ (Preetham Gowda) ಅವರ ಹೇಳಿಕೆಯಿಂದ ಬಲವಾಗಿದೆ. ಹಾಸನ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ಜೆಡಿಎಸ್​ಗೆ ಮತ ನೀಡಿದರೂ ಬಿಜೆಪಿಗೆ ನೀಡಿದಂತೆಯೇ, ಹಾಗಾಗಿ ಬಿಜೆಪಿಗೇ ಮತ ನೀಡಿ ಎಂಬರ್ಥದಲ್ಲಿ ನೀಡಿರುವ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಏಪ್ರಿಲ್ 26ರಂದು ಪ್ರೀತಂ ಗೌಡ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಪ್ರೀತಂ ಗೌಡ ಹೇಳಿದ್ದೇನು?

‘ನಾನು ನಿಮಗೆ ಹೇಳುತ್ತಿದ್ದೇನೆ. ಜೆಡಿಎಸ್​ಗೆ ಮತ ನೀಡುವುದೂ ಬಿಜೆಪಿಗೆ ನೀಡಿದಂತೆಯೇ. ಅವರಿಗೆ ನೀಡಿದರೂ ಅದು ನಮಗೇ ಸಲ್ಲಲಿದೆ. ಹೆಚ್​ಡಿ ದೇವೇಗೌಡರು ಮತ್ತು ಮೋದಿ ಸಾಹೇಬ್ರು ಈಗಾಗಲೇ ಮಾತನಾಡಿದ್ದಾರೆ. ಜೆಡಿಎಸ್​​ಗೆ ಕೇವಲ 20 ರಿಂದ 25 ಸ್ಥಾನಗಳಷ್ಟೇ ದೊರೆಯಲಿದೆ. ನೀವು ಬೆಂಗಳೂರಿಗೆ ಹೋಗಲು ಬಯಸುತ್ತೀರಿ ಎಂದಾದರೆ ಅದಕ್ಕಾಗಿ ಮೈಸೂರಿಗೆ ಹೋಗಬೇಡಿ. ಹಾಸನದಿಂದ ಬೆಳ್ಳೂರು ಕ್ರಾಸ್ ಮೂಲಕ ಹೋಗಿ. ನೀವು ಮೈಸೂರಿನಿಂದಾಗಿ ಹೋಗಲು ಬಯಸುತ್ತೀರಾದರೆ ನಾನು ಹೇಳುವುದಿಷ್ಟೇ. ಎಲ್ಲ ನದಿಗಳ ನೀರು ಹರಿದು ಕೊನೆಗೆ ಸೇರುವುದು ಸಮುದ್ರಕ್ಕೇ. ಅದೇ ರೀತಿ ನೀವು ನಮ್ಮನ್ನೇ ಸೇರಬೇಕಷ್ಟೆ. ಈ ಬಗ್ಗೆ ಯೋಚನೆ ಮಾಡಿ. ಬಿಜೆಪಿಯನ್ನೇ ಬೆಂಬಲಿಸಿ’ ಎಂದು ಪ್ರೀತಂ ಗೌಡ ಹೇಳಿರುವುದು ವಿಡಿಯೋದಲ್ಲಿದೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಪ್ರೀತಂ ಗೌಡ ಅವರು ಹಾಸನ ಕ್ಷೇತ್ರದಿಂದ ಜೆಡಿಎಸ್​ನ ಹೆಚ್​ಎಸ್ ಪ್ರಕಾಶ್ ವಿರುದ್ಧ 13,006 ಮತಗಳಿಂದ ಜಯ ಗಳಿಸಿದ್ದರು. ಇದು ವಿಧಾನಸಭೆ ಚುನಾವಣೆಯಲ್ಲಿ ಪ್ರೀತಂ ಗೌಡ ಅವರ ಮೊದಲ ಗೆಲುವಾಗಿತ್ತು. ಈ ಬಾರಿ ಜೆಡಿಎಸ್​ನ ಹೆಚ್​ಪಿ ಸ್ವರೂಪ್ ವಿರುದ್ಧ ಕಣಕ್ಕಿಳಿದಿದ್ದಾರೆ.

ಇದನ್ನೂ ಓದಿ: Karnataka Elections: ಮೈಸೂರಿನಲ್ಲಿ ಮಾತ್ರ ತಯಾರಾಗುತ್ತದೆ ಮತದಾನದ ಶಾಯಿ; ಇಲ್ಲಿದೆ ಸ್ವಾರಸ್ಯಕರ ಮಾಹಿತಿ

ಪ್ರೀತಂ ಗೌಡ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲು ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ನಿರಾಕರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಕೆಲಸ ಮಾಡಲಿದ್ದಾರೆ. ನಾವು ನಮ್ಮ ಕೆಲಸ ಮಾಡಲಿದ್ದೇವೆ ಎಂದಷ್ಟೇ ಅವರು ಹೇಳಿದ್ದಾರೆ.

ಜೆಡಿಎಸ್​​ನಿಂದಲೂ ಹಾಸನ ಟಿಕೆಟ್​ ಘೋಷಣೆ ವಿಚಾರ ಬಹಳಷ್ಟು ಚರ್ಚೆಗೆ ಗ್ರಾಸವಾಗಿತ್ತು. ಹೆಚ್​ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೇ ಟಿಕೆಟ್ ನೀಡಬೇಕು ಎಂದು ಅವರು ಪಟ್ಟು ಹಿಡಿದಿದ್ದರೆ ಸ್ವರೂಪ್​ಗೇ ನೀಡುವುದಾಗಿ ಹೆಚ್​ಡಿ ಕುಮಾರಸ್ವಾಮಿ ಪಟ್ಟು ಹಿಡಿದಿದ್ದರು. ಕೊನೆಗೂ ಸ್ವರೂಪ್​ ಅವರನ್ನೇ ಕಣಕ್ಕಿಳಿಸುವಲ್ಲಿ ಕುಮಾರಸ್ವಾಮಿ ಯಶಸ್ವಿಯಾಗಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ