AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋದರನ ಕೈ ಬಲಪಡಿಸಲು ಇಂದು ಕಾಂಗ್ರೆಸ್ ಸೇರಲಿರುವ ಗೀತಾ ಶಿವರಾಜ್‌ ಕುಮಾರ್‌

ಸಹೋದರನ ಕೈ ಬಲಪಡಿಸಲು ನಟ ಶಿವರಾಜ್‌ಕುಮಾರ್‌ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

ಸೋದರನ ಕೈ ಬಲಪಡಿಸಲು ಇಂದು ಕಾಂಗ್ರೆಸ್ ಸೇರಲಿರುವ ಗೀತಾ ಶಿವರಾಜ್‌ ಕುಮಾರ್‌
ರಮೇಶ್ ಬಿ. ಜವಳಗೇರಾ
|

Updated on: Apr 28, 2023 | 7:00 AM

Share

ಮುಖ್ಯಾಂಶಗಳು

  • ಇಂದು ಕಾಂಗ್ರೆಸ್ ಪಕ್ಷ ಸೇರಲಿರುವ ಗೀತಾ ಶಿವರಾಜ್​ಕುಮಾರ್​
  • ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿಕೆಶಿ ಸಮ್ಮುಖದಲ್ಲಿ ಇಂದು ಸೇರ್ಪಡೆ
  • ಈ ಹಿಂದೆ ಜೆಡಿಎಸ್​ನಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದರು

ಬೆಂಗಳೂರು (ಏ.28): ನಟ ಶಿವರಾಜ್‌ಕುಮಾರ್‌ ಪತ್ನಿ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್‌.ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್‌ ಕುಮಾರ್‌ (Geetha Shivarajkumar) ಅವರು ಇಂದು (ಏಪ್ರಿಲ್ 28) ಅಧಿಕೃತವಾಗಿ ಕಾಂಗ್ರೆಸ್‌ (Congress) ಸೇರ್ಪಡೆಯಾಗಲಿದ್ದಾರೆ. ಈವರೆಗೆ ಜೆಡಿಎಸ್‌ ಪಕ್ಷದಲ್ಲಿದ್ದ ಅವರು 2014ರ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಈ ವೇಳೆ ಜೆಡಿಎಸ್‌ನಲ್ಲಿ ಜತೆಗಿದ್ದ ಸಹೋದರ ಮಧು ಬಂಗಾರಪ್ಪ ಇತ್ತೀಚೆಗೆ ಕಾಂಗ್ರೆಸ್‌ ಸೇರ್ಪಡೆಯಾಗಿ ಸೊರಬ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದಾರೆ. ಹೀಗಾಗಿ ಇಂದು ಬೆಳಗ್ಗೆ 12 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್‌ ಸೇರಿದಂತೆ ಇನ್ನು ಹಲವು ಹಿರಿಯ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್​ ಸೇರ್ಪಡೆಯಾಗಲಿದ್ದಾರೆ.

ಇದನ್ನೂ ಓದಿ: ವರುಣ ಕ್ಷೇತ್ರದಲ್ಲಿ ಸೋಮಣ್ಣಗೆ ಶಾಕ್​ ಕೊಡಲು ಕಾಂಗ್ರೆಸ್​ ಪ್ಲ್ಯಾನ್​: ಯಡಿಯೂರಪ್ಪ ಆಪ್ತನಿಗೆ ಗಾಳ ಹಾಕಿದ ಕಾಂಗ್ರೆಸ್

2014ರ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗದಲ್ಲಿ ಜೆಡಿಎಸ್​ ಪಕ್ಷದಿಂದ ಗೀತಾ ಶಿವರಾಜ್​ಕುಮಾರ್ ಸ್ಪರ್ಧೆ ಮಾಡಿದ್ದರು. ಆ ಬಳಿಕ ಅವರು ಜೆಡಿಎಸ್ ಪಕ್ಷದಿಂದ ಹೊರಬಂದು ತಟಸ್ಥವಾಗಿ ಉಳಿದಿದ್ದರು. ಅಂದು ಕೂಡ ಮಧು ಬಂಗಾರಪ್ಪ ಅವರು ಜೆಡಿಎಸ್​ ಪಕ್ಷದಲ್ಲಿದ್ದರೂ ಸಹಜವಾಗಿಯೇ ಗೀತಾ ಅವರು ಜೆಡಿಎಸ್​ನಿಂದ ಸ್ಪರ್ಧೆ ಮಾಡಿದ್ದರು. ಆ ಬಳಿಕ ನಡೆದ ಬೆಳವಣಿಗೆಗಳಲ್ಲಿ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಅವರನ್ನು ಹಿಂಬಾಲಿಸಿಕೊಂಡು ಗೀತಾ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

ಕಳೆದ ಕೆಲವು ದಿನಗಳಿಂದ ಸಹೋದರನ ಪರ ಗೀತಾ ಶಿವರಾಜ್‌ ಕುಮಾರ್‌ ಪ್ರಚಾರವನ್ನೂ ಆರಂಭಿಸಿದ್ದಾರೆ. ಇ 2024ರ ಲೋಕಸಭಾ ಚುನಾವಣೆಯ ದೃಷ್ಟಿಯಿಂದಲೂ ಗೀತಾ ಶಿವರಾಜ್​ಕುಮಾರ್​ ಸೇರ್ಪಡೆ ಕಾಂಗ್ರೆಸ್​​ಗೆ ಲಾಭ ಆಗಲಿದೆ. ಒಂದು ಪ್ರಬಲ ಸಮುದಾಯವೂ ಕಾಂಗ್ರೆಸ್​ಗೆ ಬೆಂಬಲ ನೀಡುವ ನಿರೀಕ್ಷೆ ಇದೆ. ನ್ನು ಗೀತಾ ಜತೆ ಶಿವರಾಜ್‌ ಕುಮಾರ್‌ ಪ್ರಚಾರ ಮಾಡಲಿದ್ದಾರೆಯೇ ಎಂಬುದು ಸಹ ಕುತೂಹಲ ಮೂಡಿಸಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ