AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Election: ವಿಧಾನಸಭೆ ಚುನಾವಣೆಗೆ ವಿಶೇಷ ರೈಲು, ಹೆಚ್ಚುವರಿ ಕೋಚ್; ವಿವರ ಇಲ್ಲಿದೆ

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೊಂದೇ ದಿನ ಬಾಕಿ ಇದೆ. ಮತದಾನಕ್ಕೆ ಊರುಗಳಿಗೆ ತೆರಳುವವರಿಗಾಗಿ ನೈಋತ್ಯ ರೈಲ್ವೆ ಮೂರು ವಿಶೇಷ ರೈಲುಗಳನ್ನು ಘೋಷಿಸಿದ್ದು, ಈಗಾಗಲೇ ಅಸ್ತಿತ್ವದಲ್ಲಿರುವ ರೈಲುಗಳಿಗೆ ಹೆಚ್ಚುವರಿ ಕೋಚ್​ಗಳನ್ನು ಅಳವಡಿಸಲಾಗುತ್ತದೆ ಎಂದು ಮಾಹಿತಿ ನೀಡಿದೆ.

Karnataka Election: ವಿಧಾನಸಭೆ ಚುನಾವಣೆಗೆ ವಿಶೇಷ ರೈಲು, ಹೆಚ್ಚುವರಿ ಕೋಚ್; ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
| Edited By: |

Updated on:May 09, 2023 | 9:07 AM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಇನ್ನೊಂದೇ ದಿನ ಬಾಕಿ ಇದೆ. ಮತದಾನಕ್ಕೆ ಊರುಗಳಿಗೆ ತೆರಳುವವರಿಗಾಗಿ ನೈಋತ್ಯ ರೈಲ್ವೆ ಮೂರು ವಿಶೇಷ ರೈಲುಗಳನ್ನು ಘೋಷಿಸಿದ್ದು, ಈಗಾಗಲೇ ಅಸ್ತಿತ್ವದಲ್ಲಿರುವ ರೈಲುಗಳಿಗೆ ಹೆಚ್ಚುವರಿ ಕೋಚ್​ಗಳನ್ನು ಅಳವಡಿಸಲಾಗುತ್ತದೆ ಎಂದು ಮಾಹಿತಿ ನೀಡಿದೆ. ಬೆಂಗಳೂರು ಹಾಗೂ ಬೆಳಗಾವಿ ಮಧ್ಯೆ ಒಂದು ವಿಶೇಷ ರೈಲು ಸಂಚರಿಸಲಿವೆ. ಹುಬ್ಬಳ್ಳಿ ಮಾರ್ಗವಾಗಿ ಈ ರೈಲು ಸಂಚರಿಸಲಿವೆ. ಇನ್ನು ಬೆಂಗಳೂರಿನಿಂದ ಬೀದರ್​ಗೆ ಕಲಬುರಗಿ ಮಾರ್ಗವಾಗಿ ಒಂದು ರೈಲು ತೆರಳಲಿದೆ. ಬೆಂಗಳೂರಿನಿಂದ (ಯಶವಂತಪುರ) ಮುರುಡೇಶ್ವರಕ್ಕೆ ವಿಶೇಷ ರೈಲು ಸಂಚರಿಸಲಿದೆ.

ಇಷ್ಟೇ ಅಲ್ಲದೆ, ಕೆಲವು ರೈಲುಗಳಿಗೆ ಹೆಚ್ಚುವರಿ ಕೋಚ್​​ಗಳನ್ನು ಅಳವಡಿಸಲಾಗಿದೆ. 12079/80 ಬೆಂಗಳೂರು-ಹುಬ್ಬಳ್ಳಿ ಜನಶತಾಬ್ಧಿ ಎಕ್ಸ್​​ಪ್ರೆಸ್​ಗೆ ಎರಡು ಹೆಚ್ಚುವರಿ ಕೋಚ್​​ಗಳು, 17307/ 17308 ಬಾಗಲಕೋಟೆ, ಮೈಸೂರು, ಬಸವ ಎಕ್ಸ್​​ಪ್ರೆಸ್​​ಗೆ ಹಾಗೂ 16593/94 ಬೆಂಗಳೂರು ನಾಂದೇಡ್ ವಯಾ ರಾಯಚೂರು, ಯಾದಗಿರಿ ರೈಲಿಗೆ ತಲಾ ಒಂದು ಕೋಚ್ ಸೇರಿಸಲಾಗುತ್ತಿದೆ. ಬೆಂಗಳೂರು-ಕಾರವಾರ ಮಧ್ಯೆ ಸಂಚರಿಸುವ 16595/96 ಸಂಖ್ಯೆಯ ರೈಲಿಗೂ ಹೆಚ್ಚುವರಿ ಕೋಚ್ ಅಳವಡಿಸಲಾಗುತ್ತಿದೆ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ಕರ್ನಾಟಕ ಚುನವಾಣೆ: ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ; ಪ್ರಯಾಣಿಕರ ಆಕ್ರೋಶ

ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಬೆಂಗಳೂರಿನಿಂದ ರಾಜ್ಯದ ಹಲವು ಜಿಲ್ಲೆಗಳಿಗೆ ತೆರಳುವ ಖಾಸಗಿ ಬಸ್‌ಗಳು ಭಾರೀ ದರ ಹೆಚ್ಚಳ ಮಾಡಿವೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಬಸ್​ ದರ 800 ರೂ. ಇತ್ತು, ಈಗ 1800ಕ್ಕೆ ಏರಿಕೆಯಾಗಿದೆ. ಅದೇ ರೀತಿ 950ರೂ. ಇದ್ದ ಮಂಗಳೂರು ಟಿಕೆಟ್ ದರ ಇದೀಗ 2200ರೂ. ಆಗಿದೆ. ಇದೇ ರೀತಿ ಹಲವು ಊರುಗಳಿಗೆ ತೆರಳುವ ಬಸ್​ಗಳ ದರ ದುಪ್ಪಟ್ಟಾಗಿವೆ. ಇದೇ ಸಂದರ್ಭದಲ್ಲಿ ವಿಶೇಷ ರೈಲು ಬಿಟ್ಟಿರುವುದು ಅನೇಕ ಮಂದಿಗೆ ಪ್ರಯೋಜನವಾಗಲಿದೆ ಎನ್ನಲಾಗಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:57 pm, Mon, 8 May 23

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ