AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Election: ವಿಧಾನಸಭೆ ಚುನಾವಣೆಗೆ ವಿಶೇಷ ರೈಲು, ಹೆಚ್ಚುವರಿ ಕೋಚ್; ವಿವರ ಇಲ್ಲಿದೆ

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೊಂದೇ ದಿನ ಬಾಕಿ ಇದೆ. ಮತದಾನಕ್ಕೆ ಊರುಗಳಿಗೆ ತೆರಳುವವರಿಗಾಗಿ ನೈಋತ್ಯ ರೈಲ್ವೆ ಮೂರು ವಿಶೇಷ ರೈಲುಗಳನ್ನು ಘೋಷಿಸಿದ್ದು, ಈಗಾಗಲೇ ಅಸ್ತಿತ್ವದಲ್ಲಿರುವ ರೈಲುಗಳಿಗೆ ಹೆಚ್ಚುವರಿ ಕೋಚ್​ಗಳನ್ನು ಅಳವಡಿಸಲಾಗುತ್ತದೆ ಎಂದು ಮಾಹಿತಿ ನೀಡಿದೆ.

Karnataka Election: ವಿಧಾನಸಭೆ ಚುನಾವಣೆಗೆ ವಿಶೇಷ ರೈಲು, ಹೆಚ್ಚುವರಿ ಕೋಚ್; ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
Ganapathi Sharma
| Edited By: |

Updated on:May 09, 2023 | 9:07 AM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಇನ್ನೊಂದೇ ದಿನ ಬಾಕಿ ಇದೆ. ಮತದಾನಕ್ಕೆ ಊರುಗಳಿಗೆ ತೆರಳುವವರಿಗಾಗಿ ನೈಋತ್ಯ ರೈಲ್ವೆ ಮೂರು ವಿಶೇಷ ರೈಲುಗಳನ್ನು ಘೋಷಿಸಿದ್ದು, ಈಗಾಗಲೇ ಅಸ್ತಿತ್ವದಲ್ಲಿರುವ ರೈಲುಗಳಿಗೆ ಹೆಚ್ಚುವರಿ ಕೋಚ್​ಗಳನ್ನು ಅಳವಡಿಸಲಾಗುತ್ತದೆ ಎಂದು ಮಾಹಿತಿ ನೀಡಿದೆ. ಬೆಂಗಳೂರು ಹಾಗೂ ಬೆಳಗಾವಿ ಮಧ್ಯೆ ಒಂದು ವಿಶೇಷ ರೈಲು ಸಂಚರಿಸಲಿವೆ. ಹುಬ್ಬಳ್ಳಿ ಮಾರ್ಗವಾಗಿ ಈ ರೈಲು ಸಂಚರಿಸಲಿವೆ. ಇನ್ನು ಬೆಂಗಳೂರಿನಿಂದ ಬೀದರ್​ಗೆ ಕಲಬುರಗಿ ಮಾರ್ಗವಾಗಿ ಒಂದು ರೈಲು ತೆರಳಲಿದೆ. ಬೆಂಗಳೂರಿನಿಂದ (ಯಶವಂತಪುರ) ಮುರುಡೇಶ್ವರಕ್ಕೆ ವಿಶೇಷ ರೈಲು ಸಂಚರಿಸಲಿದೆ.

ಇಷ್ಟೇ ಅಲ್ಲದೆ, ಕೆಲವು ರೈಲುಗಳಿಗೆ ಹೆಚ್ಚುವರಿ ಕೋಚ್​​ಗಳನ್ನು ಅಳವಡಿಸಲಾಗಿದೆ. 12079/80 ಬೆಂಗಳೂರು-ಹುಬ್ಬಳ್ಳಿ ಜನಶತಾಬ್ಧಿ ಎಕ್ಸ್​​ಪ್ರೆಸ್​ಗೆ ಎರಡು ಹೆಚ್ಚುವರಿ ಕೋಚ್​​ಗಳು, 17307/ 17308 ಬಾಗಲಕೋಟೆ, ಮೈಸೂರು, ಬಸವ ಎಕ್ಸ್​​ಪ್ರೆಸ್​​ಗೆ ಹಾಗೂ 16593/94 ಬೆಂಗಳೂರು ನಾಂದೇಡ್ ವಯಾ ರಾಯಚೂರು, ಯಾದಗಿರಿ ರೈಲಿಗೆ ತಲಾ ಒಂದು ಕೋಚ್ ಸೇರಿಸಲಾಗುತ್ತಿದೆ. ಬೆಂಗಳೂರು-ಕಾರವಾರ ಮಧ್ಯೆ ಸಂಚರಿಸುವ 16595/96 ಸಂಖ್ಯೆಯ ರೈಲಿಗೂ ಹೆಚ್ಚುವರಿ ಕೋಚ್ ಅಳವಡಿಸಲಾಗುತ್ತಿದೆ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ಕರ್ನಾಟಕ ಚುನವಾಣೆ: ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ; ಪ್ರಯಾಣಿಕರ ಆಕ್ರೋಶ

ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಬೆಂಗಳೂರಿನಿಂದ ರಾಜ್ಯದ ಹಲವು ಜಿಲ್ಲೆಗಳಿಗೆ ತೆರಳುವ ಖಾಸಗಿ ಬಸ್‌ಗಳು ಭಾರೀ ದರ ಹೆಚ್ಚಳ ಮಾಡಿವೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಬಸ್​ ದರ 800 ರೂ. ಇತ್ತು, ಈಗ 1800ಕ್ಕೆ ಏರಿಕೆಯಾಗಿದೆ. ಅದೇ ರೀತಿ 950ರೂ. ಇದ್ದ ಮಂಗಳೂರು ಟಿಕೆಟ್ ದರ ಇದೀಗ 2200ರೂ. ಆಗಿದೆ. ಇದೇ ರೀತಿ ಹಲವು ಊರುಗಳಿಗೆ ತೆರಳುವ ಬಸ್​ಗಳ ದರ ದುಪ್ಪಟ್ಟಾಗಿವೆ. ಇದೇ ಸಂದರ್ಭದಲ್ಲಿ ವಿಶೇಷ ರೈಲು ಬಿಟ್ಟಿರುವುದು ಅನೇಕ ಮಂದಿಗೆ ಪ್ರಯೋಜನವಾಗಲಿದೆ ಎನ್ನಲಾಗಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:57 pm, Mon, 8 May 23

ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ