AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Election: ವಿಧಾನಸಭೆ ಚುನಾವಣೆಗೆ ವಿಶೇಷ ರೈಲು, ಹೆಚ್ಚುವರಿ ಕೋಚ್; ವಿವರ ಇಲ್ಲಿದೆ

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೊಂದೇ ದಿನ ಬಾಕಿ ಇದೆ. ಮತದಾನಕ್ಕೆ ಊರುಗಳಿಗೆ ತೆರಳುವವರಿಗಾಗಿ ನೈಋತ್ಯ ರೈಲ್ವೆ ಮೂರು ವಿಶೇಷ ರೈಲುಗಳನ್ನು ಘೋಷಿಸಿದ್ದು, ಈಗಾಗಲೇ ಅಸ್ತಿತ್ವದಲ್ಲಿರುವ ರೈಲುಗಳಿಗೆ ಹೆಚ್ಚುವರಿ ಕೋಚ್​ಗಳನ್ನು ಅಳವಡಿಸಲಾಗುತ್ತದೆ ಎಂದು ಮಾಹಿತಿ ನೀಡಿದೆ.

Karnataka Election: ವಿಧಾನಸಭೆ ಚುನಾವಣೆಗೆ ವಿಶೇಷ ರೈಲು, ಹೆಚ್ಚುವರಿ ಕೋಚ್; ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
Ganapathi Sharma
| Edited By: |

Updated on:May 09, 2023 | 9:07 AM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಇನ್ನೊಂದೇ ದಿನ ಬಾಕಿ ಇದೆ. ಮತದಾನಕ್ಕೆ ಊರುಗಳಿಗೆ ತೆರಳುವವರಿಗಾಗಿ ನೈಋತ್ಯ ರೈಲ್ವೆ ಮೂರು ವಿಶೇಷ ರೈಲುಗಳನ್ನು ಘೋಷಿಸಿದ್ದು, ಈಗಾಗಲೇ ಅಸ್ತಿತ್ವದಲ್ಲಿರುವ ರೈಲುಗಳಿಗೆ ಹೆಚ್ಚುವರಿ ಕೋಚ್​ಗಳನ್ನು ಅಳವಡಿಸಲಾಗುತ್ತದೆ ಎಂದು ಮಾಹಿತಿ ನೀಡಿದೆ. ಬೆಂಗಳೂರು ಹಾಗೂ ಬೆಳಗಾವಿ ಮಧ್ಯೆ ಒಂದು ವಿಶೇಷ ರೈಲು ಸಂಚರಿಸಲಿವೆ. ಹುಬ್ಬಳ್ಳಿ ಮಾರ್ಗವಾಗಿ ಈ ರೈಲು ಸಂಚರಿಸಲಿವೆ. ಇನ್ನು ಬೆಂಗಳೂರಿನಿಂದ ಬೀದರ್​ಗೆ ಕಲಬುರಗಿ ಮಾರ್ಗವಾಗಿ ಒಂದು ರೈಲು ತೆರಳಲಿದೆ. ಬೆಂಗಳೂರಿನಿಂದ (ಯಶವಂತಪುರ) ಮುರುಡೇಶ್ವರಕ್ಕೆ ವಿಶೇಷ ರೈಲು ಸಂಚರಿಸಲಿದೆ.

ಇಷ್ಟೇ ಅಲ್ಲದೆ, ಕೆಲವು ರೈಲುಗಳಿಗೆ ಹೆಚ್ಚುವರಿ ಕೋಚ್​​ಗಳನ್ನು ಅಳವಡಿಸಲಾಗಿದೆ. 12079/80 ಬೆಂಗಳೂರು-ಹುಬ್ಬಳ್ಳಿ ಜನಶತಾಬ್ಧಿ ಎಕ್ಸ್​​ಪ್ರೆಸ್​ಗೆ ಎರಡು ಹೆಚ್ಚುವರಿ ಕೋಚ್​​ಗಳು, 17307/ 17308 ಬಾಗಲಕೋಟೆ, ಮೈಸೂರು, ಬಸವ ಎಕ್ಸ್​​ಪ್ರೆಸ್​​ಗೆ ಹಾಗೂ 16593/94 ಬೆಂಗಳೂರು ನಾಂದೇಡ್ ವಯಾ ರಾಯಚೂರು, ಯಾದಗಿರಿ ರೈಲಿಗೆ ತಲಾ ಒಂದು ಕೋಚ್ ಸೇರಿಸಲಾಗುತ್ತಿದೆ. ಬೆಂಗಳೂರು-ಕಾರವಾರ ಮಧ್ಯೆ ಸಂಚರಿಸುವ 16595/96 ಸಂಖ್ಯೆಯ ರೈಲಿಗೂ ಹೆಚ್ಚುವರಿ ಕೋಚ್ ಅಳವಡಿಸಲಾಗುತ್ತಿದೆ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ಕರ್ನಾಟಕ ಚುನವಾಣೆ: ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ; ಪ್ರಯಾಣಿಕರ ಆಕ್ರೋಶ

ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಬೆಂಗಳೂರಿನಿಂದ ರಾಜ್ಯದ ಹಲವು ಜಿಲ್ಲೆಗಳಿಗೆ ತೆರಳುವ ಖಾಸಗಿ ಬಸ್‌ಗಳು ಭಾರೀ ದರ ಹೆಚ್ಚಳ ಮಾಡಿವೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಬಸ್​ ದರ 800 ರೂ. ಇತ್ತು, ಈಗ 1800ಕ್ಕೆ ಏರಿಕೆಯಾಗಿದೆ. ಅದೇ ರೀತಿ 950ರೂ. ಇದ್ದ ಮಂಗಳೂರು ಟಿಕೆಟ್ ದರ ಇದೀಗ 2200ರೂ. ಆಗಿದೆ. ಇದೇ ರೀತಿ ಹಲವು ಊರುಗಳಿಗೆ ತೆರಳುವ ಬಸ್​ಗಳ ದರ ದುಪ್ಪಟ್ಟಾಗಿವೆ. ಇದೇ ಸಂದರ್ಭದಲ್ಲಿ ವಿಶೇಷ ರೈಲು ಬಿಟ್ಟಿರುವುದು ಅನೇಕ ಮಂದಿಗೆ ಪ್ರಯೋಜನವಾಗಲಿದೆ ಎನ್ನಲಾಗಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:57 pm, Mon, 8 May 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ